ಮಂಗಳೂರು ನಗರದಲ್ಲಿ ವಾರದ ಹಿಂದೆ ವಿವಾಹಿತೆಯೊಬ್ಬರು ನಿಗೂಢವಾಗಿ ಸಾವಿಗೀಡಾಗಿದ್ದರು. ಇದೀಗ ಕೊಲೆ ಶಂಕೆ ವ್ಯಕ್ತವಾಗಿದೆ. ಇನ್ನು ಈ ಘಟನೆಗೆ ಸಂಬಂಧಿಸಿದಂತೆ ಪಾಂಡೇಶ್ವರ ಪೊಲೀಸರು ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಂಗಳೂರು ನಗರದ ಬಂದರ್ ಕಸೈಗಲ್ಲಿ ನಿವಾಸಿ ಎಂ. ಹಸನಬ್ಬ ಅವರ ಪುತ್ರಿ ಆಯಿಶಾ ಹಫೀಫಾ ನಿಗೂಢವಾಗಿ ಸಾವಿಗೀಡಾದವರಾಗಿದ್ದು, ಹಫೀಫಾಳ ಪತಿ ಶಹ್ಬಾನ್ ಮಿಸ್ಬಾ ಮತ್ತು ಆಕೆಯ ಅತ್ತೆ ರಝಿಯಾ ವಿರುದ್ಧ ಪ್ರಕರಣ ದಾಖಲಾಗಿದೆ.
©2021 Tulunada Surya | Developed by CuriousLabs