ಮಂಗಳೂರು: ಬಿಲ್ಲವ ಸಂಘ (ರಿ.) ಉರ್ವ -ಅಶೋಕನಗರ ವತಿಯಿಂದ ಕೆ.ಎಂ.ಸಿ. ಆಸ್ಪತ್ರೆ ಅತ್ತಾವರ,ಮಂಗಳೂರು ಇವರ ಸಹಯೋಗದೊಂದಿಗೆ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಜುಲೈ-3 ಆದಿತ್ಯವಾರದಂದು ಉರ್ವ ಬಿಲ್ಲವ ಸಂಘದ ನಾರಾಯಣ ಗುರು ಮಂದಿರದಲ್ಲಿ ನಡೆಯಲಿದೆ.
ಬೆಳಗ್ಗೆ 9.00 ರಿಂದ ಮಧ್ಯಾಹ್ನ 12.30 ರ ವರೆಗೆ ನಡೆಯಲಿರುವ ಈ ಉಚಿತ ವೈದ್ಯಕೀಯ ತಪಾಸಣಾ ಶಿಬಿರದ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕೆಂದು ಬಿಲ್ಲವ ಸಂಘದ ಉಪಾಧ್ಯಕ್ಷರಾದ ಸತೀಶ್ ಪೂಜಾರಿ ಅಶೋಕ ನಗರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.