ಉಪ್ಪಿನಂಗಡಿ: ಮನೆಯ ಶೆಡ್ಡ್ನಲ್ಲಿ ನಿಲ್ಲಿಸಿದ್ದ ದ್ವಿಚಕ್ರವಾಹನಕ್ಕೆ ಯಾರೋ ಕಿಡಿಕೇಡಿಗಳು ಬೆಂಕಿಹಚ್ಚಿ ನಾಶಪಡಿಸಿದ ಘಟನೆ ಹಿರೆಬಂಡಾಡಿ ಗ್ರಾಮದ ಅಡೆಕಲ್ ಮುಳ್ಳುಗುಡ್ಡೆ ಎಂಬಲ್ಲಿ ನಡೆದಿದೆ. ಬರಿಮಾರು ಗ್ರಾಮ, ಬಂಟ್ವಾಳ ನಿವಾಸಿ ಲಿಖಿತ್ ಕುಮಾರ್ ಎಂಬವರು ದಿನಾಂಕ: 06-01-2024 ರಂದು ಹಿರೆಬಂಡಾಡಿ ಗ್ರಾಮದ ಅಡೆಕಲ್ ಮುಳ್ಳುಗುಡ್ಡೆ ಎಂಬಲ್ಲಿರುವ ತನ್ನ ಹೆಂಡತಿ ಮನೆಗೆ ಬಂದಿದ್ದು, ರಾತ್ರಿ ವೇಳೆಗೆ ಲಿಖಿತ್ ರ ಭಾವ ಕೀರ್ತನ್ ಎಂಬವರು ಮನೆಯಿಂದ ಹೊರಗೆ ಹೋದಾಗ, ಮನೆಯಿಂದ ಸುಮಾರು 100 ಮೀಟರ್ ದೂರದಲ್ಲಿ ರಸ್ತೆಯಲ್ಲಿ, ಮೋಟಾರು ಸೈಕಲ್ವೊಂದು ಬೆಂಕಿಯಿಂದ ಉರಿಯುತ್ತಿರುವುದನ್ನು ಕಂಡು ಮನೆಯವರಲ್ಲಿ ತಿಳಿಸಿದ ವೇಳೆ, ಮನೆಯಿಂದ ಹೊರಗೆ ಹೋಗಿ ನೋಡಿದಾಗ, ಹೆಂಡತಿಯ ಮನೆಯ ಶೆಡ್ಡ್ನಲ್ಲಿ ನಿಲ್ಲಿಸಿದ್ದ, ಕೆಎ70-ಜೆ-7206 ನೇ ದ್ವಿಚಕ್ರವಾಹವನ್ನು ಯಾರೋ ವ್ಯಕ್ತಿಗಳು ಅಲ್ಲಿಂದ ಕೊಂಡು ಹೋಗಿ, ಮನೆಯಿಂದ 100 ಮೀಟರ್ ದೂರದಲ್ಲಿ ರಸ್ತೆಯಲ್ಲಿ ಬೆಂಕಿಹಚ್ಚಿ ಸುಟ್ಟು ನಾಶಪಡಿಸಿದ್ದು, ಈ ವಾಹನದ ದಾಖಲಾತಿಗಳು ಕೂಡಾ ಇದೇ ವಾಹನದಲ್ಲಿದ್ದು, ಸುಟ್ಟು ಹೋಗಿದ್ದು, ದ್ವಿ ಚಕ್ರ ವಾಹನದ ಅಂದಾಜು ಮೌಲ್ಯ ರೂ 85,000/- ಆಗಬಹುದಾಗಿದೆ. ಘಟನೆಗೆ ಸಂಬಂಧಿಸಿದಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ:05/2024 ಕಲಂ: 447.435 ಐಪಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
Trending
- ಪ್ರಕೃತಿಯೊಂದಿಗೆ ವಿನಯ ಮತ್ತು ಸಹಬಾಳ್ವೆಯ ಬದುಕು ಅಗತ್ಯ: ಮಾತಾ ಅಮೃತಾನಂದಮಯಿ ದೇವಿ
- ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಮಂಗಳೂರು, ಉಪ್ಪಿನಂಗಡಿ, ಸುರತ್ಕಲ್ ಠಾಣೆಗಳ ಹಲವು ಕ್ರಿಮಿನಲ್ ಪ್ರಕರಣಗಳ ಆರೋಪಿ ಕೊನೆಗೂ ಪೊಲೀಸರ ವಶಕ್ಕೆ
- ಕರ್ನಾಟಕ ರಾಜಕೀಯದಲ್ಲಿ ಅಸ್ಥಿರತೆ ಹೆಚ್ಚಳ: ಸಿದ್ದರಾಮಯ್ಯ ರಾಜಿನಾಮೆ ಕಾಂಗ್ರೆಸ್ ಒಳಜಗಳದ ಪರಾಕಾಷ್ಠೆಯೇ?
- ಮೇ 30ರಂದು ಜೆಡಿಎಸ್ ದಕ್ಷಿಣ ಕನ್ನಡ ಜಿಲ್ಲಾ ಪದಾಧಿಕಾರಿಗಳ ಮಹಾ ಸಭೆ ಪಕ್ಷ ಸಂಘಟನೆ ಬಲವರ್ಧನೆ,ಸ್ಥಳೀಯ ಸಂಸ್ಥೆ ಚುನಾವಣೆ ಸಿದ್ಧತೆ ಹಾಗೂ ಜನಪರ ಹೋರಾಟಗಳ ಕುರಿತು ಮಹತ್ವದ ಚರ್ಚೆ
- ಕುಂದಾಪುರ : ರಾಜ್ಯದ ಅಭಿವೃದ್ಧಿಗೆ ಜೆಡಿಎಸ್ ಕೊಡುಗೆ ಅಪಾರ- ಕೃಷ್ಣ ರೆಡ್ಡಿ
- ಅಖಿಲ ಭಾರತ ತುಳು ಒಕ್ಕೂಟ ನಿಯೋಗ : ತುಳು ಭಾಷೆಗೆ ಮಾನ್ಯತೆಗೆ ಮುಖ್ಯಮಂತ್ರಿ ಭೇಟಿ ಮಾಡಿ ಮನವಿ ಸಲ್ಲಿಸಲು ನಿರ್ಧಾರ – ಎ.ಸಿ. ಭಂಡಾರಿ
- ಕುಂದಾಪುರ: ಹೊಸೂರು ಸರ್ಕಾರಿ ಜಮೀನು ಒತ್ತುವರಿ ಹಗರಣ – ಭ್ರಷ್ಟ ಅಧಿಕಾರಿಗಳ ವಿರುದ್ಧ ಕುಂದಾಪುರ ಎಸಿ ಕಚೇರಿ ಮುಂದೆ ಒಲೆ ಹೂಡಿ ಅನ್ನ ಬೇಯಿಸುವ’ ವಿಭಿನ್ನ ಪ್ರತಿಭಟನೆ!
- ಚಂದ್ರನಗರದಲ್ಲಿ ಉಚಿತ ಸಮಗ್ರ ಆರೋಗ್ಯ ಶಿಬಿರಕ್ಕೆ ಭಾರೀ ಸ್ಪಂದನೆ ಆರೋಗ್ಯ ಜಾಗೃತಿ, ಉಚಿತ ತಪಾಸಣೆ ಮೂಲಕ ಜನಸೇವೆಯ ಹೊಸ ಹೆಜ್ಜೆ
