ಉಪ್ಪಿನಂಗಡಿ: ಮನೆಯ ಶೆಡ್ಡ್ನಲ್ಲಿ ನಿಲ್ಲಿಸಿದ್ದ ದ್ವಿಚಕ್ರವಾಹನಕ್ಕೆ ಯಾರೋ ಕಿಡಿಕೇಡಿಗಳು ಬೆಂಕಿಹಚ್ಚಿ ನಾಶಪಡಿಸಿದ ಘಟನೆ ಹಿರೆಬಂಡಾಡಿ ಗ್ರಾಮದ ಅಡೆಕಲ್ ಮುಳ್ಳುಗುಡ್ಡೆ ಎಂಬಲ್ಲಿ ನಡೆದಿದೆ. ಬರಿಮಾರು ಗ್ರಾಮ, ಬಂಟ್ವಾಳ ನಿವಾಸಿ ಲಿಖಿತ್ ಕುಮಾರ್ ಎಂಬವರು ದಿನಾಂಕ: 06-01-2024 ರಂದು ಹಿರೆಬಂಡಾಡಿ ಗ್ರಾಮದ ಅಡೆಕಲ್ ಮುಳ್ಳುಗುಡ್ಡೆ ಎಂಬಲ್ಲಿರುವ ತನ್ನ ಹೆಂಡತಿ ಮನೆಗೆ ಬಂದಿದ್ದು, ರಾತ್ರಿ ವೇಳೆಗೆ ಲಿಖಿತ್ ರ ಭಾವ ಕೀರ್ತನ್ ಎಂಬವರು ಮನೆಯಿಂದ ಹೊರಗೆ ಹೋದಾಗ, ಮನೆಯಿಂದ ಸುಮಾರು 100 ಮೀಟರ್ ದೂರದಲ್ಲಿ ರಸ್ತೆಯಲ್ಲಿ, ಮೋಟಾರು ಸೈಕಲ್ವೊಂದು ಬೆಂಕಿಯಿಂದ ಉರಿಯುತ್ತಿರುವುದನ್ನು ಕಂಡು ಮನೆಯವರಲ್ಲಿ ತಿಳಿಸಿದ ವೇಳೆ, ಮನೆಯಿಂದ ಹೊರಗೆ ಹೋಗಿ ನೋಡಿದಾಗ, ಹೆಂಡತಿಯ ಮನೆಯ ಶೆಡ್ಡ್ನಲ್ಲಿ ನಿಲ್ಲಿಸಿದ್ದ, ಕೆಎ70-ಜೆ-7206 ನೇ ದ್ವಿಚಕ್ರವಾಹವನ್ನು ಯಾರೋ ವ್ಯಕ್ತಿಗಳು ಅಲ್ಲಿಂದ ಕೊಂಡು ಹೋಗಿ, ಮನೆಯಿಂದ 100 ಮೀಟರ್ ದೂರದಲ್ಲಿ ರಸ್ತೆಯಲ್ಲಿ ಬೆಂಕಿಹಚ್ಚಿ ಸುಟ್ಟು ನಾಶಪಡಿಸಿದ್ದು, ಈ ವಾಹನದ ದಾಖಲಾತಿಗಳು ಕೂಡಾ ಇದೇ ವಾಹನದಲ್ಲಿದ್ದು, ಸುಟ್ಟು ಹೋಗಿದ್ದು, ದ್ವಿ ಚಕ್ರ ವಾಹನದ ಅಂದಾಜು ಮೌಲ್ಯ ರೂ 85,000/- ಆಗಬಹುದಾಗಿದೆ. ಘಟನೆಗೆ ಸಂಬಂಧಿಸಿದಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ:05/2024 ಕಲಂ: 447.435 ಐಪಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
Trending
- ಬೆಳ್ಳರ್ಪಾಡಿ ಸರ್ಕಾರಿ ಕ್ರೀಡಾಂಗಣ ಒತ್ತುವರಿ ಯತ್ನಕ್ಕೆ ತೀವ್ರ ವಿರೋಧ – ತಕ್ಷಣ ಕ್ರಮಕ್ಕೆ ತುಳುನಾಡ ರಕ್ಷಣಾ ವೇದಿಕೆ ಆಗ್ರಹ
- ಭೂಮಾಪನ ಇಲಾಖೆ ಸಂಕಷ್ಟದಲ್ಲಿ – ಪರವಾನಗಿ ಭೂಮಾಪಕರ ಹೋರಾಟ ತೀವ್ರ. ಭೂಮಾಪನ ಅರ್ಜಿಗಳು ಬಾಕಿ
- ಭೂಮಾಪನ ಇಲಾಖೆ ಸಂಕಷ್ಟದಲ್ಲಿ – ಪರವಾನಗಿ ಭೂಮಾಪಕರ ಹೋರಾಟ ತೀವ್ರ
- ಉಡುಪಿ: ಪೊಲೀಸರ ಮೇಲೆ ದಾಳಿ – ಜೂಜಾಟ ಜಾಲ ಭೇದಿಸಿ ಐವರ ಬಂಧನ
- ಬೈಂದೂರು/ಕುಂದಾಪುರ: ವೀಲಿಂಗ್ ವೈರಲ್ನಿಂದ ಕಳ್ಳತನ ಯತ್ನದವರೆಗೆ — ಯುವಕ ಪೊಲೀಸ್ ಬಲೆಗೆ
- ವಿವಾಹಿತ ಪುರುಷನ ಒಪ್ಪಿತ ಲಿವ್ ಇನ್ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್
- ಸ್ಯಾಂಡ್ಪಿಟ್ ಬೆಂಗ್ರೆ ಬಳಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಭೂಮಿ ಪೂಜೆ
- ವಸತಿ ವಲಯದಲ್ಲಿ ಕಾರ್ಯನಿರ್ವಹಿಸುತ್ತಿದ್ದ Bombay Saw Mill ಅನ್ನು ಶಾಶ್ವತವಾಗಿ ಮುಚ್ಚಲು ಆಗ್ರಹ – ಸಾರ್ವಜನಿಕ ಆರೋಗ್ಯ ರಕ್ಷಣೆಗೆ ತುಳುನಾಡ ರಕ್ಷಣಾ ವೇದಿಕೆ ಒತ್ತಾಯ
