ಉಪ್ಪಿನಂಗಡಿ: ಮನೆಯ ಶೆಡ್ಡ್ನಲ್ಲಿ ನಿಲ್ಲಿಸಿದ್ದ ದ್ವಿಚಕ್ರವಾಹನಕ್ಕೆ ಯಾರೋ ಕಿಡಿಕೇಡಿಗಳು ಬೆಂಕಿಹಚ್ಚಿ ನಾಶಪಡಿಸಿದ ಘಟನೆ ಹಿರೆಬಂಡಾಡಿ ಗ್ರಾಮದ ಅಡೆಕಲ್ ಮುಳ್ಳುಗುಡ್ಡೆ ಎಂಬಲ್ಲಿ ನಡೆದಿದೆ. ಬರಿಮಾರು ಗ್ರಾಮ, ಬಂಟ್ವಾಳ ನಿವಾಸಿ ಲಿಖಿತ್ ಕುಮಾರ್ ಎಂಬವರು ದಿನಾಂಕ: 06-01-2024 ರಂದು ಹಿರೆಬಂಡಾಡಿ ಗ್ರಾಮದ ಅಡೆಕಲ್ ಮುಳ್ಳುಗುಡ್ಡೆ ಎಂಬಲ್ಲಿರುವ ತನ್ನ ಹೆಂಡತಿ ಮನೆಗೆ ಬಂದಿದ್ದು, ರಾತ್ರಿ ವೇಳೆಗೆ ಲಿಖಿತ್ ರ ಭಾವ ಕೀರ್ತನ್ ಎಂಬವರು ಮನೆಯಿಂದ ಹೊರಗೆ ಹೋದಾಗ, ಮನೆಯಿಂದ ಸುಮಾರು 100 ಮೀಟರ್ ದೂರದಲ್ಲಿ ರಸ್ತೆಯಲ್ಲಿ, ಮೋಟಾರು ಸೈಕಲ್ವೊಂದು ಬೆಂಕಿಯಿಂದ ಉರಿಯುತ್ತಿರುವುದನ್ನು ಕಂಡು ಮನೆಯವರಲ್ಲಿ ತಿಳಿಸಿದ ವೇಳೆ, ಮನೆಯಿಂದ ಹೊರಗೆ ಹೋಗಿ ನೋಡಿದಾಗ, ಹೆಂಡತಿಯ ಮನೆಯ ಶೆಡ್ಡ್ನಲ್ಲಿ ನಿಲ್ಲಿಸಿದ್ದ, ಕೆಎ70-ಜೆ-7206 ನೇ ದ್ವಿಚಕ್ರವಾಹವನ್ನು ಯಾರೋ ವ್ಯಕ್ತಿಗಳು ಅಲ್ಲಿಂದ ಕೊಂಡು ಹೋಗಿ, ಮನೆಯಿಂದ 100 ಮೀಟರ್ ದೂರದಲ್ಲಿ ರಸ್ತೆಯಲ್ಲಿ ಬೆಂಕಿಹಚ್ಚಿ ಸುಟ್ಟು ನಾಶಪಡಿಸಿದ್ದು, ಈ ವಾಹನದ ದಾಖಲಾತಿಗಳು ಕೂಡಾ ಇದೇ ವಾಹನದಲ್ಲಿದ್ದು, ಸುಟ್ಟು ಹೋಗಿದ್ದು, ದ್ವಿ ಚಕ್ರ ವಾಹನದ ಅಂದಾಜು ಮೌಲ್ಯ ರೂ 85,000/- ಆಗಬಹುದಾಗಿದೆ. ಘಟನೆಗೆ ಸಂಬಂಧಿಸಿದಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ:05/2024 ಕಲಂ: 447.435 ಐಪಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
Trending
- ಕೋಟೆಕಾರ್ ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ಹಗಲು ದರೋಡೆ, ಚಿನ್ನಾಭರಣ ದೋಚಿ ಪರಾರಿ
- ಎಟಿಎಂ ಹಣ ಹಾಕಲು ಬಂದ ಸಿಬ್ಬಂದಿ ಮೇಲೆ ದುರ್ಷ್ಕಮಿಗಳಿಂದ ಗುಂಡಿನ ದಾಳಿ- ಇಬ್ಬರು ಮೃತ್ಯು
- ಗೋಲ್ಡನ್ ಮೂವೀಸ್ ಸಂಸ್ಥೆ ಯ ತುಳು ಸಿನಿಮಾ ಪ್ರೊಡಕ್ಷನ್ ನಂ 1 ಗೆ ಮುಹೂರ್ತ
- ಕುಂದಾಪುರ ಪೊಲೀಸ್ ಉಪವಿಭಾಗದ ನೂತನ ಡಿವೈಎಸ್ಪಿ ಆಗಿ ಎಚ್.ಡಿ.ಕುಲಕರ್ಣಿ
- ಕಾಡು ಬಿಟ್ಟು ರಾಜಧಾನಿ ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಶರಣಾದ ನಕ್ಸಲರು
- ಅಪಾರ್ಟ್ ಮೆಂಟ್ ಒಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದಲ್ಲಿ ಮಣಿಪಾಲ ಪೊಲೀಸರಿಂದ ಇಬ್ಬರ ಬಂಧನ
- ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕ ಅಧ್ಯಕ್ಷ ಯೋಗಿಶ್ ಶೆಟ್ಟಿ ಜಪ್ಪು ರವರಿಗೆ ಗೌರವ ಸನ್ಮಾನ
- ಕುಂದಾಪುರ ತುಳುನಾಡ ರಕ್ಷಣಾ ವೇದಿಕೆ ಘಟಕದ ವತಿಯಿಂದ ಕುಂದಾಪುರ ಪುರಸಭೆಗೆ ನೂತನ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಯುತ ಪ್ರಭಾಕರ್ ವಿ ಅವರಿಗೆ ಅಭಿನಂದನೆ ಕಾರ್ಯಕ್ರಮ