ಉಪ್ಪಿನಂಗಡಿ: ಮನೆಯ ಶೆಡ್ಡ್ನಲ್ಲಿ ನಿಲ್ಲಿಸಿದ್ದ ದ್ವಿಚಕ್ರವಾಹನಕ್ಕೆ ಯಾರೋ ಕಿಡಿಕೇಡಿಗಳು ಬೆಂಕಿಹಚ್ಚಿ ನಾಶಪಡಿಸಿದ ಘಟನೆ ಹಿರೆಬಂಡಾಡಿ ಗ್ರಾಮದ ಅಡೆಕಲ್ ಮುಳ್ಳುಗುಡ್ಡೆ ಎಂಬಲ್ಲಿ ನಡೆದಿದೆ. ಬರಿಮಾರು ಗ್ರಾಮ, ಬಂಟ್ವಾಳ ನಿವಾಸಿ ಲಿಖಿತ್ ಕುಮಾರ್ ಎಂಬವರು ದಿನಾಂಕ: 06-01-2024 ರಂದು ಹಿರೆಬಂಡಾಡಿ ಗ್ರಾಮದ ಅಡೆಕಲ್ ಮುಳ್ಳುಗುಡ್ಡೆ ಎಂಬಲ್ಲಿರುವ ತನ್ನ ಹೆಂಡತಿ ಮನೆಗೆ ಬಂದಿದ್ದು, ರಾತ್ರಿ ವೇಳೆಗೆ ಲಿಖಿತ್ ರ ಭಾವ ಕೀರ್ತನ್ ಎಂಬವರು ಮನೆಯಿಂದ ಹೊರಗೆ ಹೋದಾಗ, ಮನೆಯಿಂದ ಸುಮಾರು 100 ಮೀಟರ್ ದೂರದಲ್ಲಿ ರಸ್ತೆಯಲ್ಲಿ, ಮೋಟಾರು ಸೈಕಲ್ವೊಂದು ಬೆಂಕಿಯಿಂದ ಉರಿಯುತ್ತಿರುವುದನ್ನು ಕಂಡು ಮನೆಯವರಲ್ಲಿ ತಿಳಿಸಿದ ವೇಳೆ, ಮನೆಯಿಂದ ಹೊರಗೆ ಹೋಗಿ ನೋಡಿದಾಗ, ಹೆಂಡತಿಯ ಮನೆಯ ಶೆಡ್ಡ್ನಲ್ಲಿ ನಿಲ್ಲಿಸಿದ್ದ, ಕೆಎ70-ಜೆ-7206 ನೇ ದ್ವಿಚಕ್ರವಾಹವನ್ನು ಯಾರೋ ವ್ಯಕ್ತಿಗಳು ಅಲ್ಲಿಂದ ಕೊಂಡು ಹೋಗಿ, ಮನೆಯಿಂದ 100 ಮೀಟರ್ ದೂರದಲ್ಲಿ ರಸ್ತೆಯಲ್ಲಿ ಬೆಂಕಿಹಚ್ಚಿ ಸುಟ್ಟು ನಾಶಪಡಿಸಿದ್ದು, ಈ ವಾಹನದ ದಾಖಲಾತಿಗಳು ಕೂಡಾ ಇದೇ ವಾಹನದಲ್ಲಿದ್ದು, ಸುಟ್ಟು ಹೋಗಿದ್ದು, ದ್ವಿ ಚಕ್ರ ವಾಹನದ ಅಂದಾಜು ಮೌಲ್ಯ ರೂ 85,000/- ಆಗಬಹುದಾಗಿದೆ. ಘಟನೆಗೆ ಸಂಬಂಧಿಸಿದಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ:05/2024 ಕಲಂ: 447.435 ಐಪಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
Trending
- INDIA through my EYES’ ಚಿತ್ರಕಲಾ ಸ್ಪರ್ಧೆಯಲ್ಲಿ ಚಿನ್ಮಯಿ ಎಸ್. ವಿಜೇತೆ
- ಕರಂಬಾರು ಶಾಲೆಯಲ್ಲಿ ಸಂಭ್ರಮ ಸಡಗರದಿಂದ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆ
- ಕೋರ್ದಬ್ಬು ದೈವದ ಪಾತ್ರಿ ಸೀನ ಪಾತ್ರಿ ನಂದಿಕೂರು ಮೆರೆಗ್ ತುಳು ಕಲ್ಚರಲ್ ರಿಸರ್ಚ್ ಫೌಂಡೇಶನ್ದ “ತುಳುವಾಲ ಕುಲಸಿರಿ – 2026” ಪ್ರಶಸ್ತಿ ಘೋಷಣೆ
- ಪುತ್ತೂರಿನ ಸಾನ್ವಿತಾ ಎಂ. ರೈ ಗಿನ್ನೆಸ್ ವಿಶ್ವ ದಾಖಲೆಗೆ ಸೇರ್ಪಡೆ
- ಗ್ರೀನ್ ವ್ಯೂ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ
- ಮಂಗಳೂರಿನ ಸಿಟಿ ಸೆಂಟರ್ KFC ಮಳಿಗೆಯಲ್ಲಿ 9 ತಿಂಗಳ ಹಿಂದಿನ ಮಾಂಸ ಪತ್ತೆ: ಆರೋಗ್ಯಾಧಿಕಾರಿಗಳಿಂದ ಮಳಿಗೆಗೆ ಬೀಗ
- ತಲ್ಲೂರಿನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ: ಆಟೋ ಚಾಲಕರಿಗೆ ಸಿಹಿ ವಿತರಣೆ, ಶೇ.90 ಅಂಕ ಗಳಿಸಿದ ಸ್ಪಂದಿತ ಪೂಜಾರಿಗೆ ಡಾ. ರವೀಂದ್ರ ತಲ್ಲೂರು ಅವರಿಂದ ಸನ್ಮಾನ
- ಡಿ.ಕೆ. ಯೂಸ್ಡ್ ವೆಹಿಕಲ್ ಡೀಲರ್ಸ್ ಅಸೋಸಿಯೇಷನ್ನ ನೂತನ ಕಾನೂನು ಸಲಹೆಗಾರರಾಗಿ ಶ್ರೀ ಸಿನಾನ್ ಸಿದ್ದೀಕ್ ನೇಮಕ
