ಕುಂದಾಪುರ: ಎಟಿಎಂ ಕೇಂದ್ರದಿಂದ ಹಣ ತೆಗೆಯುಲು ಸಹಾಯ ಮಾಡುವ ನೆಪದಲ್ಲಿ ಗ್ರಾಹಕರ ಕಣ್ಣು ತಪ್ಪಿಸಿ ಅವರ ಎಟಿಎಂ ಕಾರ್ಡ್ ಬಳಸಿ ಹಣ ಎಗರಿಸುತ್ತಿದ್ದ ಇಬ್ಬರು ಹರಿಯಾಣ ಮೂಲದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಮೂರು ಪ್ರಕರಣಗಳು ಬೈಂದೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು ದೂರು ದಾಖಲಾಗಿತ್ತು. ತನಿಖೆ ಕೈಗೊಂಡ ಪೊಲೀಸರ ತಂಡ ಹರಿಯಾಣ ಮೂಲದ ಇಬ್ಬರು ಆರೋಪಿಗಳನ್ನು ಬಂಧಿಸಿದೆ. ಹರಿಯಾಣ ರಾಜ್ಯ ಬರ್ಸಿ ಜಟಾನ್ನ ಸಂದೀಪ್ (36), ಹರಿಯಾಣ ಔರಂಗನಗರದ ರವಿ (27) ಬಂಧಿತ ಆರೋಪಿಗಳಾಗಿದ್ದು ಇವರಿಂದ 21 ಸಾವಿರ ನಗದು, 217 ಎಟಿಎಂ ಕಾರ್ಡ್, ಪಿಒಎಸ್ ಯಂತ್ರ, 2 ಮೊಬೈಲ್ ಹಾಗೂ ಒಂದು ಮೋಟಾರ್ ಸೈಕಲ್ನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳ ಮೇಲೆ ವಿವಿಧ ರಾಜ್ಯಗಳಲ್ಲಿ 20ಕ್ಕೂ ಅಧಿಕ ಪ್ರಕರಣ ದಾಖಲಾಗಿರುವುದು ತನಿಖೆ ವೇಳೆ ತಿಳಿದುಬಂದಿದೆ.ಇವರು ಶಿರೂರು ಭಾಗದ ಎರಡು ಎಟಿಎಂ ಹಾಗೂ ಬೈಂದೂರಿನ ಒಂದು ಎಟಿಎಂ ಕೇಂದ್ರದಲ್ಲಿ ಗ್ರಾಹಕರ ಸೋಗಿನಲ್ಲಿ ಬಂದು ನೈಜ ಗ್ರಾಹಕರಿಗೆ ಹಣ ವಿಥ್ ಡ್ರಾ ಮಾಡಲು ಸಹಕಾರ ಮಾಡುವ ನೆಪದಲ್ಲಿ ಬೇರೆ ಎಟಿಎಂ ಕಾರ್ಡ್ ನೀಡಿ ಮೂರು ಕಡೆ ಒಟ್ಟು 2 ಲಕ್ಷದ 26 ಸಾವಿರ ಹಣ ಎಗರಿಸಿದ್ದರು. ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
Trending
- ಮೂಡಬಿದಿರೆ ಇನ್ಸ್ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ಅಕ್ಕ ಪ್ರಪುಲ್ಲ ನಾಯ್ಕ್ ಪ್ರತಿಕ್ರಿಯೆ
- ದಕ್ಷಿಣ ಕನ್ನಡ ವಿದ್ಯಾರ್ಥಿ ಜನತಾದಳ ಸಭೆ: ನಿಹಾಲ್ ಎಸ್. ಕೋಡ್ತುಗುಳಿ ಜಿಲ್ಲಾಧ್ಯಕ್ಷರಾಗಿ ಅಧಿಕಾರ ಹಸ್ತಾಂತರ
- ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಮಾಜ ಕಲ್ಯಾಣ ಯೋಜನೆಯಡಿಯಲ್ಲಿ ದತ್ತು ಸ್ವೀಕರಿಸಿ ಮಾಸಿಕ ಧನಸಹಾಯ ಪಡೆಯುತ್ತಿರುವ ಪಲಾನುಭವಿಗಳಿಗೆ ಸಹಾಯಧನದ ಚೆಕ್ ವಿತರಣಾ ಕಾರ್ಯಕ್ರಮ
- ಉಡುಪಿ : ಕಟಪಾಡಿ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ – ಅನಿಲ ಸೋರಿಕೆ ಶಂಕೆ, ಅಗ್ನಿಶಾಮಕ ದಳದಿಂದ ತುರ್ತು ಕಾರ್ಯಾಚರಣೆ
- ಕರವೇ ಉಡುಪಿ ಜಿಲ್ಲಾ ಸಂಘಟನೆಗೆ ರಿಕ್ಷಾ ಚಾಲಕರ ಸೇರ್ಪಡೆ
- ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದಿಂದ ರಂಜಾನ್ ಸೌಹಾರ್ಧ ಇಫ್ತಾರ್ ಕೂಟ – ಶಾಂತಿ ಸಂದೇಶ ಸಾರಿದ ಕಾರ್ಯಕ್ರಮ
- ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ವೇಳಾಪಟ್ಟಿ ಘೋಷಣೆ. ಕೇರಳ, ಅಸ್ಸಾಂ, ತಮಿಳುನಾಡು ಹಾಗೂ ಪುದುಚೇರಿಯಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಪಶ್ಚಿಮ ಬಂಗಾಳದಲ್ಲಿ ಎರಡು ಹಂತಗಳಲ್ಲಿ ಚುನಾವಣೆ
- ದಕ್ಷಿಣ ಕನ್ನಡ ಜಿಲ್ಲಾ ವಿದ್ಯಾರ್ಥಿ ಜನತಾದಳಕ್ಕೆ ನೂತನ ಪದಾಧಿಕಾರಿಗಳ ನೇಮಕ – ಸಂಘಟನೆ ಬಲವರ್ಧನೆಗೆ ಹೊಸ ಚೈತನ್ಯ
