ಕುಂದಾಪುರ: ಎಟಿಎಂ ಕೇಂದ್ರದಿಂದ ಹಣ ತೆಗೆಯುಲು ಸಹಾಯ ಮಾಡುವ ನೆಪದಲ್ಲಿ ಗ್ರಾಹಕರ ಕಣ್ಣು ತಪ್ಪಿಸಿ ಅವರ ಎಟಿಎಂ ಕಾರ್ಡ್ ಬಳಸಿ ಹಣ ಎಗರಿಸುತ್ತಿದ್ದ ಇಬ್ಬರು ಹರಿಯಾಣ ಮೂಲದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಮೂರು ಪ್ರಕರಣಗಳು ಬೈಂದೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು ದೂರು ದಾಖಲಾಗಿತ್ತು. ತನಿಖೆ ಕೈಗೊಂಡ ಪೊಲೀಸರ ತಂಡ ಹರಿಯಾಣ ಮೂಲದ ಇಬ್ಬರು ಆರೋಪಿಗಳನ್ನು ಬಂಧಿಸಿದೆ. ಹರಿಯಾಣ ರಾಜ್ಯ ಬರ್ಸಿ ಜಟಾನ್ನ ಸಂದೀಪ್ (36), ಹರಿಯಾಣ ಔರಂಗನಗರದ ರವಿ (27) ಬಂಧಿತ ಆರೋಪಿಗಳಾಗಿದ್ದು ಇವರಿಂದ 21 ಸಾವಿರ ನಗದು, 217 ಎಟಿಎಂ ಕಾರ್ಡ್, ಪಿಒಎಸ್ ಯಂತ್ರ, 2 ಮೊಬೈಲ್ ಹಾಗೂ ಒಂದು ಮೋಟಾರ್ ಸೈಕಲ್ನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳ ಮೇಲೆ ವಿವಿಧ ರಾಜ್ಯಗಳಲ್ಲಿ 20ಕ್ಕೂ ಅಧಿಕ ಪ್ರಕರಣ ದಾಖಲಾಗಿರುವುದು ತನಿಖೆ ವೇಳೆ ತಿಳಿದುಬಂದಿದೆ.ಇವರು ಶಿರೂರು ಭಾಗದ ಎರಡು ಎಟಿಎಂ ಹಾಗೂ ಬೈಂದೂರಿನ ಒಂದು ಎಟಿಎಂ ಕೇಂದ್ರದಲ್ಲಿ ಗ್ರಾಹಕರ ಸೋಗಿನಲ್ಲಿ ಬಂದು ನೈಜ ಗ್ರಾಹಕರಿಗೆ ಹಣ ವಿಥ್ ಡ್ರಾ ಮಾಡಲು ಸಹಕಾರ ಮಾಡುವ ನೆಪದಲ್ಲಿ ಬೇರೆ ಎಟಿಎಂ ಕಾರ್ಡ್ ನೀಡಿ ಮೂರು ಕಡೆ ಒಟ್ಟು 2 ಲಕ್ಷದ 26 ಸಾವಿರ ಹಣ ಎಗರಿಸಿದ್ದರು. ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
Trending
- ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರ ಕಾರ್ಯವೈಖರಿಗೆ ಮೆಚ್ಚುಗೆ; ನಮ್ಮ ಕರ್ನಾಟಕ ಸೇನೆಯಿಂದ ಅಭಿನಂದನೆ
- ಬಿ.ಸಿ.ರೋಡ್ ಹತ್ಯೆ ಪ್ರಕರಣ: ಮರಣೋತ್ತರ ಪರೀಕ್ಷೆ ಪೂರ್ಣ – ಲಾವಣ್ಯ ಪಾರ್ಥಿವ ಶರೀರ ಸ್ವಗ್ರಾಮಕ್ಕೆ ರವಾನೆ
- ಮಂಗಳೂರು :ನಾಗೋರಿ ಭೂಕುಸಿತ ಹಾಗೂ ಸೋಮೇಶ್ವರ ಕಡಲುಕೊರೆತ ಪ್ರದೇಶಗಳಿಗೆ ಭೇಟಿ ನೀಡಿದ ವಿಧಾನ ಪರಿಷತ್ ಶಾಸಕ ಎಸ್.ಎಲ್. ಭೋಜೆಗೌಡ, ಸಂತ್ರಸ್ತರಿಗೆ ಶಾಶ್ವತ ಪರಿಹಾರ ಕಲ್ಪಿಸಲು ಸರ್ಕಾರಕ್ಕೆ ಶಿಫಾರಸು – ಜಿಲ್ಲಾಧಿಕಾರಿಗೆ ಮನವಿ ಸಲ್ಲಿಕೆ
- ಬಿ.ಸಿ.ರೋಡ್ನಲ್ಲಿ ಯುವತಿಯ ಭೀಕರ ಹತ್ಯೆ,ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ಮಾರಕಾಸ್ತ್ರದಿಂದ ದಾಳಿ; ಆರೋಪಿ ಪರಾರಿ – ವ್ಯಾಪಕ ತನಿಖೆ ಆರಂಭ
- ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಜೆಡಿಎಸ್ ನೂತನ ಪದಾಧಿಕಾರಿಗಳಿಗೆ ನೇಮಕ ಪತ್ರ ವಿತರಣೆ,ಪಕ್ಷ ಸಂಘಟನೆಗೆ ಮತ್ತಷ್ಟು ವೇಗ ನೀಡಲಾಗುವುದು: ಎನ್.ಪಿ. ಪುಷ್ಪರಾಜನ್
- ಡಿ.ಕೆ. ಟ್ರಾನ್ಸ್ಪೋರ್ಟ್ & ಲಾಜಿಸ್ಟಿಕ್ ಸರ್ವೀಸಸ್ಗೆ ಯಶಸ್ವಿ ಒಂದು ವರ್ಷದ ಸಂಭ್ರಮ,ವಿಶ್ವಾಸ, ಸಮಯಪಾಲನೆ ಮತ್ತು ಗುಣಮಟ್ಟದ ಸೇವೆಯಿಂದ ಸಾರಿಗೆ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು
- ಸಂತ್ರಸ್ತ ಕುಲಾಲ ಕುಟುಂಬಕ್ಕೆ ನಿವೇಶನ ಸಹಿತ ‘ಕುಂಭ ಕುಟೀರ’ ಮನೆ ಹಸ್ತಾಂತರ,ಕರ್ನಾಟಕ ರಾಜ್ಯ ಕುಂಬಾರರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟದಿಂದ ಮಾನವೀಯ ಸೇವೆಯ ಮಾದರಿ
- ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಮಾಜಿ ಸಚಿವ ಎಚ್.ಡಿ. ರೇವಣ್ಣ ಭೇಟಿ
