ಮೈಸೂರು: ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರು ಈ ಬಾರಿಯ ಮೈಸೂರು ದಸರಾ ಉದ್ಘಾಟಿಸಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿ ಮಾತನಾಡುತ್ತಾ ಈ ಮಾಹಿತಿ ತಿಳಿಸಿದರು.
ಕನ್ನಡ ಚಿತ್ರರಂಗದ ಜನಪ್ರಿಯ ಸಂಗೀತ ನಿರ್ದೇಶಕರಾದ ಹಂಸಲೇಖ, ತಮಿಳು, ತೆಲುಗು, ಮಲೆಯಾಳಂ ಭಾಷಾ ಚಿತ್ರಗಳಿಗೂ ಸಂಗೀತ ನೀಡಿದ್ದಾರೆ. ಹಾಲುಂಡ ತವರು, ಗಾನಯೋಗಿ ಪಂಚಾಕ್ಷರ ಗವಾಯಿ ಸಿನಿಮಾಗಳ ಸಂಗೀತಕ್ಕೆ ಅತ್ಯುತ್ತಮ ಸಂಗೀತ ನಿರ್ದೇಶಕ
ಪ್ರಶಸ್ತಿ ಪಡೆದಿದ್ದಾರೆ.
![](https://tulunadasurya.com/wp-content/uploads/2023/08/WhatsApp-Image-2023-08-28-at-9.37.05-AM-1-1024x768.jpeg)