Saturday, April 20, 2024
spot_img
More

    Latest Posts

    ನಿರ್ಮಾಪಕ ರವೀಂದರ್ ಜತೆ ಸಪ್ತಪದಿ ತುಳಿದ ನಟಿ, ನಿರೂಪಕಿ ಮಹಾಲಕ್ಷ್ಮೀ

    ತಮಿಳು ಚಿತ್ರರಂಗದ ನಟಿ, ನಿರೂಪಕಿ ಮಹಾಲಕ್ಷ್ಮೀ ಮತ್ತು ಖ್ಯಾತ ನಿರ್ಮಾಪಕ ರವೀಂದರ್‌ ಚಂದ್ರಶೇಖರನ್‌ ಅವರ ವಿವಾಹ ಗುರುವಾರ ತಿರುಪತಿಯಲ್ಲಿ ನೆರವೇರಿದೆ. ಇವರಿಬ್ಬರ ಮದುವೆ ಚಿತ್ರಗಳು ಜಾಲತಾಣದಲ್ಲಿ ವೈರಲ್ ಆಗುತ್ತಿವೆ. ಇವರಿಬ್ಬರಿಗೂ ಇದು 2ನೇ ಮದುವೆ ಎಂಬುದು ವಿಶೇಷ. ನಿರೂಪಕಿಯಾಗಿ, ನಟಿಯಾಗಿ ಗಮನ ಸೆಳೆದಿದ್ದ ಮಹಾಲಕ್ಷ್ಮೀ, ರವೀಂದರ್‌ ಚಂದ್ರಶೇಖರ್ ನಿರ್ಮಿಸಿದ್ದ ‘ವಿಡಿಯುಮ್‌ ವಾರೈ ಕಾಥಿರು’ ಸಿನಿಮಾದಲ್ಲಿ ನಟಿಸಿದ್ದರು.‍ ಧಾರಾವಾಹಿ ಕ್ಷೇತ್ರದಲ್ಲೂ ಮಹಾಲಕ್ಷ್ಮೀ ಹೆಸರು ಮಾಡಿದ್ದಾರೆ. ಪ್ರಸ್ತುತ ಅವರು ನಟಿಸಿರುವ ಮಹಾರಸಿ ಎಂಬ ಧಾರಾವಾಹಿ ಪ್ರಸಾರವಾಗುತ್ತಿದೆ. ರವೀಂದರ್‌ ಚಂದ್ರಶೇಖರನ್‌ ಅವರು ಕೂಡ `ನಟ್ಪುನ ಎನ್ನಡು ಥೆರಿಯುಮ’, ‘ಮುರುಂಗೈಕೈ ಚಿಪ್ಸ್’, ‘ವಿಡಿಯುಮ್‌ ವಾರೈ ಕಾಥಿರು’ ಮುಂತಾದ ಸಿನಿಮಾಗಳನ್ನು ತಮ್ಮ ಲಿಬ್ರಾ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಿದ್ದಾರೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss