Wednesday, October 23, 2024
spot_img
More

    Latest Posts

    ಮಂಗಳೂರು: ಹೆದ್ದಾರಿ ಗುಂಡಿಯಿಂದ ವ್ಯಕ್ತಿ ಸಾವು ಪ್ರಕರಣ- NHAI ನೋಟಿಸ್ ಜಾರಿ..!

    ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66ರ ಬೈಕಂಪಾಡಿ – ಪಣಂಬೂರು ನಡುವೆ ಮಂಗಳವಾರ ನಡೆದ ಅಪಘಾತದಲ್ಲಿ ಟೈಟಸ್ ಫೆರಾವೊ (69) ಎಂಬವರು ಹೆದ್ದಾರಿಗುಂಡಿಗೆ ಬಿದ್ದು ಅವರ ಮೇಲೆಯೇ ಲಾರಿ ಹರಿದು ಮೃತಪಟ್ಟಿದ್ದರು. ಹೆದ್ದಾರಿಯ ಗುಂಡಿಗಳನ್ನು ಮುಚ್ಚಲು ಕ್ರಮವಹಿಸಿಲ್ಲದಿರುವುದೇ ಈ ಅಪಘಾತಕ್ಕೆ ಕಾರಣ ಎಂದು ಮಂಗಳೂರು ಪೊಲೀಸರು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ (ಎನ್‌ಎಚ್‌ಎಐ) ನೋಟಿಸ್ ನೀಡಲು ಸಿದ್ಧತೆ ನಡೆಸಿದ್ದಾರೆ. ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದ ಕೆಂಜಾರು ನಿವಾಸಿ ಟೈಟಸ್ ಫೆರಾವೊ (69) ಅವರು ಹೆದ್ದಾರಿಯ ಗುಂಡಿ ತಪ್ಪಿಸುವ ಭರದಲ್ಲಿ ಚಲಿಸುತ್ತಿದ್ದ ಲಾರಿಯ ಚಕ್ರದಡಿ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದರು. ರಸ್ತೆ ಗುಂಡಿಯಿಂದ ಅಪಘಾತ ಸಂಭವಿಸಿದ್ದಲ್ಲಿ ರಸ್ತೆ ನಿರ್ವಹಣೆಯ ಹೊಣೆ ಹೊತ್ತಿರುವ ಇಲಾಖೆ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳುವಂತೆ ಹೈಕೋರ್ಟ್‌ ನಿರ್ದೇಶನ ನೀಡಿತ್ತು. ಆದ್ದರಿಂದ ರಸ್ತೆ ಗುಂಡಿಯಿಂದ ಸಂಭವಿಸುವ ಅಪಘಾತದಲ್ಲಿ ಸಂಚಾರ ಪೊಲೀಸರು ಸಂಬಂಧ ಪಟ್ಟ ಇಲಾಖೆ ವಿರುದ್ಧ ಕ್ರಮ ಕೈಗೊಳ್ಳುತ್ತಿಲ್ಲ ಎಂಬ ಆಕ್ರೋಶ ಕೇಳಿಬಂದಿತ್ತು. ಈ ಬಗ್ಗೆ ಮಂಗಳೂರು ನಗರ ಪೊಲೀಸ್‌ ಕಮಿಷನರ್ ಕುಲದೀಪ್‌ ಕುಮಾರ್ ಆರ್ ಜೈನ್ ಪ್ರತಿಕ್ರಿಯಿಸಿ ‘ಈ ಬಗ್ಗೆ ತನಿಖೆ ನಡೆಸುತ್ತೇವೆ. ಎನ್‌ಎಚ್‌ಎಐಗೂ ನೋಟಿಸ್‌ ನೀಡಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ’ ಎಂದು ಹೇಳಿದ್ದಾರೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss