Friday, April 26, 2024
spot_img
More

    Latest Posts

    ದಿವಂಗತ ʼCDS ಜನರಲ್ ಬಿಪಿನ್ ರಾವತ್ʼಗೆ ಮರಣೋತ್ತರ ʼಪದ್ಮವಿಭೂಷಣ ಪ್ರಶಸ್ತಿʼ ಪ್ರಧಾನ

    ಕಳೆದ ವರ್ಷ ಡಿಸೆಂಬರ್ನಲ್ಲಿ ಹೆಲಿಕಾಪ್ಟರ್ ಅಪಘಾತದಲ್ಲಿ ಮೃತಪಟ್ಟ ಭಾರತದ ಮೊದಲ ರಕ್ಷಣಾ ಸಿಬ್ಬಂದಿ ಮುಖ್ಯಸ್ಥ (ಸಿಡಿಎಸ್) ಜನರಲ್ ಬಿಪಿನ್ ರಾವತ್ ಅವರಿಗೆ ದೇಶದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮ ವಿಭೂಷಣವನ್ನು ಸೋಮವಾರ ಪ್ರದಾನ ಮಾಡಲಾಯಿತು.

    ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಂದ ಅವರ ಪುತ್ರಿಯರಾದ ಕೃತಿಕಾ ರಾವತ್ ಮತ್ತು ತಾರಿಣಿ ರಾವತ್ ಪ್ರಶಸ್ತಿ ಸ್ವೀಕರಿಸಿದರು.

    73ನೇ ಗಣರಾಜ್ಯೋತ್ಸವದ ಮುನ್ನಾದಿನದಂದು ಗೃಹ ಸಚಿವಾಲಯವು ಪದ್ಮ ಪ್ರಶಸ್ತಿಗಳನ್ನು ಘೋಷಿಸಿತ್ತು. ಜನರಲ್ ರಾವತ್ ಅವರ ಹೆಲಿಕಾಪ್ಟರ್ ತಮಿಳುನಾಡಿನಲ್ಲಿ ಅಪಘಾತಕ್ಕೀಡಾದಾಗ ಸ್ಟಾಫ್ ಕೋರ್ಸ್ನ ಬೋಧಕ ಮತ್ತು ವಿದ್ಯಾರ್ಥಿ ಅಧಿಕಾರಿಗಳನ್ನ ಉದ್ದೇಶಿಸಿ ಮಾತನಾಡಲು ವೆಲ್ಲಿಂಗ್ಟನ್ನಲ್ಲಿರುವ ಡಿಫೆನ್ಸ್ ಸರ್ವೀಸಸ್ ಸ್ಟಾಫ್ ಕಾಲೇಜಿಗೆ ತೆರಳುತ್ತಿದ್ದರು. ಅವರು ಭಾರತದ, ದೀರ್ಘಕಾಲ ಸೇವೆ ಸಲ್ಲಿಸಿದ ನಾಲ್ಕು ಸ್ಟಾರ್ ಜನರಲ್ ಆಗಿದ್ದರು. ಜನರಲ್ ರಾವತ್ ಅವರ ಪತ್ನಿ ಮಧುಲಿಕಾ ರಾವತ್ ಮತ್ತು ಇತರ ಹನ್ನೆರಡು ರಕ್ಷಣಾ ಪಡೆ ಸಿಬ್ಬಂದಿ ಕೂಡ ಹೆಲಿಕಾಪ್ಟರ್ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

    ಇನ್ನು ಹಿರಿಯ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್, ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ ಅಧ್ಯಕ್ಷ ಸೈರಸ್ ಪೂನಾವಾಲಾ ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss