ಕೇರಳ : ವಿಜ್ಞಾನ ಮೇಳದ ಪೆಂಡಾಲ್ ಕುಸಿದು ಹಲವರಿಗೆ ಗಾಯವಾಗಿರುವಂತಹ ಘಟನೆ ಕೇರಳದ ಕಾಸರಗೋಡಿನ ಮಂಜೇಶ್ವರ ಬೇಕೂರಿನಲ್ಲಿ ನಡೆದಿದೆ.
ಸರ್ಕಾರಿ ಶಾಲಾ ಆವರಣದಲ್ಲಿ ವಿಜ್ಞಾನ ಮೇಳ ನಡೆಯುತಿದ್ದು, ಕಬ್ಬಿಣದ ಶೀಟ್ ಅಳವಡಿಸಿದ್ದ ಬೃಹತ್ ಪೆಂಡಾಲ್ ಕುಸಿತವಾಗಿದೆ. ಮೇಳದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳಿಗೆ, ಕೆಲ ಶಿಕ್ಷಕರು ಮತ್ತು ಕಾರ್ಯಕ್ರಮದ ತೀರ್ಪುಗಾರರಿಗೂ ಗಾಯಗಳಾಗಿದ್ದು, ಮಂಗಲ್ಪಾಡಿ ಮತ್ತು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
