ಮೈಸೂರು: ಪಿಎಚ್ಡಿ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸರಸ್ವತಿಪುರಂನಲ್ಲಿ ನಡೆದಿದೆ. ಪರೀಕ್ಷೆ ಒತ್ತಡವೇ ಸಾವಿಗೆ ಕಾರಣ ಎಂದು ಹೇಳಲಾಗಿದೆ.
ರಶ್ಮಿ (29) ಮೃತರು. ಚಾಮರಾಜನಗರ ಮೂಲದ ರಶ್ಮಿ ಸರಸ್ವತಿಪುರಂ 9ನೇ ಮೇನ್ನಲ್ಲಿರುವ ಪಿಜಿಯಲ್ಲಿ ಉಳಿದುಕೊಂಡಿದ್ದರು. ಎಂಎಸ್ಸಿ ಕೆಮಿಸ್ಟ್ರಿ ಮುಗಿಸಿ ಪಿಎಚ್ಡಿ ಮಾಡುತ್ತಿದ್ದರು. ಜೆಎಸ್ಎಸ್ ಕಾಲೇಜಿನಲ್ಲಿ ಪಾರ್ಟ್ ಟೈಂ ಲೆಕ್ಚರರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು.
ಕೆಮಿಸ್ಟ್ರಿ ವಿಚಾರದಲ್ಲಿ ಪಿಎಚ್ಡಿ ಮಾಡುತ್ತಿದ್ದ ಇವರು ಪರೀಕ್ಷೆಗೆ ಸಿದ್ಧತೆ ಮಾಡಿಕೊಂಡಿರಲಿಲ್ಲ. ಇದರಿಂದ ಒತ್ತಡಕ್ಕೊಳಗಾಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗಿದೆ. ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.