Saturday, July 27, 2024
spot_img
More

    Latest Posts

    ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕುವವರ ಮೇಲೆ ಕ್ರಮ- ಜಿಲ್ಲಾಧಿಕಾರಿ ರವಿಕುಮಾರ್

    ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕುವವರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಹೇಳಿದ್ದಾರೆ.

    ಚುನಾವಣೆಯ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಜಿಲ್ಲೆಯ ಪ್ರಮುಖ ಕಲೆ ಯಕ್ಷಗಾನ, ಆರಾಧನೆ ಕೋಲ, ನೇಮ ಸೇರಿದಂತೆ ಯಾವುದೇ ಧಾರ್ಮಿಕ ಆಚರಣೆ, ಕಾರ್ಯಕ್ರಮಗಳಿಗೆ ನಿರ್ಬಂಧ ಇರುವುದಿಲ್ಲ. ಆದರೆ, ಈ ಕಾರ್ಯಕ್ರಮಗಳಲ್ಲಿ ರಾಜಕೀಯ ಮುಖಂಡರು ಭಾಗವಹಿಸುವುದು, ಕಾರ್ಯಕರ್ತರಿಂದ ಪ್ರಚಾರ ನಡೆದು ದುರುಪಯೋಗ, ಮತದಾರರ ಓಲೈಕೆ ಕಂಡುಬಂದಲ್ಲಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

    ಮದುವೆ ಇನ್ನಿತರ ಸಮಾರಂಭಗಳನ್ನು ನಡೆಸಲು ಯಾವುದೇ ನಿರ್ಬಂಧವಿಲ್ಲ ಆದರೆ ಸ್ಥಳೀಯಾಡಳಿತಕ್ಕೆ ಮಾಹಿತಿ ನೀಡಬೇಕಿದೆ.

    ಸಾರ್ವಜನಿಕರು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿ ದೂರುಗಳನ್ನು ಸಲ್ಲಿಸಲು ಸಿ- ವಿಜಿಲ್ ಮೊಬೈಲ್ ಆಪ್ ಅಭಿವೃದ್ಧಿಪಡಿಸಲಾಗಿದೆ. ಈ ಆಪ್ ಮೂಲಕ ಜಿಲ್ಲೆಯ ಚುನಾವಣೆಗೆ ಸಂಬಂಧಿಸಿದ ಉಲ್ಲಂಘನೆ ಪ್ರಕರಣಗಳ ಬಗ್ಗೆ ಸಾರ್ವಜನಿಕರು ದೂರು ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ರವಿ ಕುಮಾರ್ ಎಂ.ಆರ್. ತಿಳಿಸಿದರು.

    ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕುವವರ ಮೇಲೆ ನಿಗಾ ವಹಿಸಲಾಗುವುದು, ಇಲಾಖೆ ಈ ಬಗ್ಗೆ ನಿಗಾವಹಿಸಿ ಅಂತವರ ಮೇಲೆ ಸ್ವಯಂ ಕೇಸ್ ದಾಖಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಹೇಳಿದ್ದಾರೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss