Thursday, March 28, 2024
spot_img
More

    Latest Posts

    ಮಂಗಳೂರು: ರಜನಿ ಶೆಟ್ಟಿಯ ಪ್ರಾಣಿ ಸೇವೆಗೆ ಮಾಜಿ ಕ್ರಿಕೆಟಿಗ ಮೆಚ್ಚುಗೆ

    ಮಂಗಳೂರು:  ಆಪತ್ತಿಗೊಳಗಾದ ಪ್ರಾಣಿಗಳ ರಕ್ಷಣೆ ಮಾಡುವ, ಬೀದಿ ನಾಯಿಗಳಿಗೆ ಪ್ರತೀ ದಿನ ಆಹಾರ ನೀಡುವ ಮಂಗಳೂರಿನ ರಜನಿ ಅವರ ಸೇವೆಯನ್ನು ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಅವರು ಪ್ರಸಂಶಿಸಿದ್ದಾರೆ.

    ತನ್ನ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ರಜನಿ ಶೆಟ್ಟಿ ಅವರ ಫೋಟೊ ಸಹಿತ ಪೋಸ್ಟ್‌ ಮಾಡಿರುವ ಲಕ್ಷ್ಮಣ್‌ ಅವರು, ಮಂಗಳೂರಿನ ರಜನಿ ಅವರು ನೂರಾರು ಬೀದಿನಾಯಿಗಳಿಗೆ ಆಹಾರ ನೀಡುತ್ತಿದ್ದಾರೆ.ಪ್ರಾಣಿಗಳು ಒಂದು ವೇಳೆ ಆಪತ್ತಿಗೆ ಒಳಗಾದರೆ ಅವುಗಳ ರಕ್ಷಣೆಗೂ ಅವರು ಧಾವಿಸುತ್ತಾರೆ.ಪ್ರಾಣಿಗಳು ಒಂದೊಮ್ಮೆ ಬಾವಿಗೆ ಬಿದ್ದರೆ ಬಾವಿಗಳಿದು ಪ್ರಾಣಿಗಳ ರಕ್ಷಣೆ ಮಾಡುತ್ತಿದ್ದಾರೆ. ಅವರ ಸೇವೆಗೆ ಭೇಷ್‌ ಎನ್ನಲೇಬೇಕುಎಂದು ಟ್ವೀಟ್‌ ಮಾಡಿದ್ದಾರೆ.

    ಬಾಡಿಗೆಯ ಪುಟ್ಟ ಮನೆಯಲ್ಲಿ ಪತಿ ಮತ್ತು ಮೂವರು ಮಕ್ಕಳೊಂದಿಗೆ ವಾಸಿಸುತ್ತಿರುವ ರಜನಿ ಶೆಟ್ಟಿ ಪ್ರತಿದಿನ ಆರು ನೂರರಷ್ಟು ಬೀದಿನಾಯಿಗಳಿಗೆ ಊಟ ಹಾಕುತ್ತಿದ್ದಾರೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss