ಉಡುಪಿ: ಶಾಸಕ ಕೆ. ರಘುಪತಿ ಭಟ್ ಅವರ ಮಹತ್ವಾಕಾಂಕ್ಷೆಯ ಯೋಜನೆ ಕರ್ನಾಟಕ ರಾಜ್ಯದಲ್ಲಿ ಪ್ರಪ್ರಥಮವಾಗಿ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಸರ್ವರಿಗೂ ಸೂರು ಕಾರ್ಯಕ್ರಮದಡಿ ಉಡುಪಿ ನಗರಸಭೆ ವ್ಯಾಪ್ತಿಯ ಫಲಾನುಭವಿಗಳಿಗೆ ಹೆರ್ಗ ಗ್ರಾಮದ ಬಬ್ಬುಸ್ವಾಮಿ ಲೇಔಟ್ ನಲ್ಲಿ G+3 ಮಾದರಿಯಲ್ಲಿ ವಸತಿ ಸಮುಚ್ಚಯ ಸಿದ್ಧಗೊಂಡಿದೆ.
ಇಲ್ಲಿನ 460 ಮನೆಗಳ ಪೈಕಿ 240 ಮನೆಗಳನ್ನು ಲಾಟರಿ ಎತ್ತುವ ಮೂಲಕ ಹಂಚಿಕೆ ಪ್ರಕ್ರಿಯೆ ಇಂದು ನಡೆಯಿತು. ಶಾಸಕ ರಘುಪತಿ ಭಟ್ ಉಪಸ್ಥಿತಿಯಲ್ಲಿ ಸರಳಬೆಟ್ಟು ಬಬ್ಬುಸ್ವಾಮಿ ಲೇಔಟ್ ನಲ್ಲಿ ಈ ಪ್ರಕ್ರಿಯೆ ನಡೆಯಿತು. ವಿಶೇಷಚೇತನರಿಗೆ ಹಾಗೂ ಹಿರಿಯ ನಾಗರಿಕರಿಗೆ ವಿಶೇಷ ಅದ್ಯತೆ ನೀಡಿ ನೆಲ ಮಹಡಿಯ ಮನೆಗಳನ್ನು ಲಾಟರಿ ಎತ್ತುವ ಮೂಲಕ ಹಂಚಿಕೆ ಮಾಡಲಾಯಿತು.
ಈ ಸಂದರ್ಭ ಉಡುಪಿ ನಗರ ಸಭೆ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್, ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ ಕೊಳ, ಸ್ಥಳೀಯ ನಗರಸಭೆ ಸದಸ್ಯೆ ವಿಜಯಲಕ್ಷ್ಮಿ, ಹಾಗೂ ಉಡುಪಿ ನಗರಸಭೆ ಪೌರಾಯುಕ್ತ ಉದಯ್ ಶೆಟ್ಟಿ, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರ ಪ್ರಸನ್ನ ಕುಮಾರ್, ಸಹಾಯಕ ಅಭಿಯಂತರ ಶ್ರೀಪಾದ, ಬ್ಯಾಂಕ್ ಆಫ್ ಬರೋಡಾ ರೀಜನಲ್ ಮ್ಯಾನೇಜರ್ ರವಿಕುಮಾರ್, ಭೀಮ್ ಶಂಕರ್, ಗುತ್ತಿಗೆದಾರ ನಿಹಾಲ್ ಭಟ್ ಉಪಸ್ಥಿತರಿದ್ದರು.