Tuesday, September 17, 2024
spot_img
More

    Latest Posts

    ನಿರ್ಮಾಪಕ ರಾಮು ಅಗಲಿಕೆಗೆ ಕಂಬನಿ ಮಿಡಿದ ಕನ್ನಡ ಚಿತ್ರರಂಗ

    ಈ ಅಕಾಲಿಕ ಸಾವು ಚಿತ್ರರಂಗಕ್ಕೆ ಬರಸಿಡಿಲಂತೆ ಬಂದೊರಗಿದೆ. ಅವರ ಸಾವಿಗೆ ಚಿತ್ರರಂಗದ ಅನೇಕ ನಟ-ನಟಿಯರು ಕಂಬನಿ ಮಿಡಿದಿದ್ದಾರೆ.ಕೋವಿಡ್​ ಸೋಂಕಿನಿಂದಾಗಿ ರಾಮು ಇಂದು ಇಹಲೋಕ ತ್ಯಜಿಸಿದ್ದಾರೆ. ತಮ್ಮ ಪ್ರೀತಿ ಮಡದಿ ನಟಿ ಮಾಲಶ್ರೀ ಹಾಗೂ ಇಬ್ಬರು ಮುದ್ದಾದ ಮಕ್ಕಳನ್ನು ಅಗಲಿದ್ದಾರೆ. ಸ್ಯಾಂಡಲ್​ವುಡ್​ನಲ್ಲಿ ಅನೇಕ ಹಿಟ್​ ಚಿತ್ರಗಳನ್ನು ನೀಡಿದ ರಾಮು ಬಿಗ್​ ಬಜೆಟ್​ ಪ್ರಡ್ಯೂಸರ್​ ಆಗಿ ಗುರುತಿಸಿಕೊಂಡಿದ್ದರು. ಅವರ ಈ ಅಕಾಲಿಕ ಸಾವು ಚಿತ್ರರಂಗಕ್ಕೆ ಬರಸಿಡಿಲಂತೆ ಬಂದೊರಗಿದೆ. ಅವರ ಸಾವಿಗೆ ಚಿತ್ರರಂಗದ ಅನೇಕ ನಟ-ನಟಿಯರು ಕಂಬನಿ ಮಿಡಿದಿದ್ದಾರೆ. ನಟ ಪುನೀತ್​, ಮಾಜಿ ಸಿಎಂ ಕುಮಾರಸ್ವಾಮಿ, ರಾಮು ನಿರ್ಮಾಣದ ಕಲಾಸಿಪಾಳ್ಯ ಚಿತ್ರದ ನಟಿ ರಕ್ಷಿತಾ ಪ್ರೇಮ್​ ಸೇರಿದಂತೆ ಚಿತ್ರರಂಗದ ಅನೇಕ ತಾರೆಯರು ಅವರ ಸಾವಿಗೆ ಸಂತಾಪ ಸೂಚಿಸಿದ್ದಾರೆ.ಕನ್ನಡ ಚಲನಚಿತ್ರ ನಿರ್ಮಾಣದಲ್ಲಿ ಅದಮ್ಯ ಆಸಕ್ತಿ ಹೊಂದಿದ ರಾಮು ಅವರು ಇನ್ನಿಲ್ಲ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪುನೀತ್ ರಾಜ್ ತಿಳಿಸಿದ್ದಾರೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss