ಪುತ್ತೂರು: ನರಿಮೊಗರು ಗ್ರಾಮದ ಗಡಿಪಿಲ ಬಳಿ ಚಲಿಸುತ್ತಿದ್ದ ರೈಲಿಗೆ ಸಿಲುಕಿ ಕಾಡುಕೋಣ ಮತ್ತು ಅದರ ಮರಿ ಸಾವನ್ನಪ್ಪಿರುವ ಘಟನೆ ಮಾ.17ರಂದು ನಡೆದಿದೆ.
ಕಾಡುಕೋಣ ಮತ್ತು ಅದರ ಮರಿ ಮೇವು ಅರಸಿ ಕಾಡಿನಿಂದ ಹೊರ ಬಂದಿದ್ದು, ಈ ವೇಳೆ ರೈಲು ಢಿಕ್ಕಿ ಹೊಡೆದು ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ.ಘಟನಾ ಸ್ಥಳಕ್ಕೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕರಿಯಪ್ಪ, ಪುತ್ತೂರು ವಲಯ ಅರಣ್ಯಾಧಿಕಾರಿ ಕಿರಣ್, ನರಿಮೊಗರು ಉಪ ವಲಯ ಅರಣ್ಯಾಧಿಕಾರಿ ಕುಮಾರಸ್ವಾಮಿ, ಪುತ್ತೂರು ಉಪ ವಲಯ ಅರಣ್ಯಾಧಿಕಾರಿ ಶಿವಾನಂದ ಆಚಾರ್ಯ, ಅರಣ್ಯ ರಕ್ಷಕ ಸತ್ಯನ್ ಡಿಜಿ, ದೀಪಕ್ ಭೇಟಿ ನೀಡಿದ್ದರು.ಇನ್ನು ಮೃತ ಪ್ರಾಣಿಗಳ ಮರಣೋತ್ತರ ಪರೀಕ್ಷೆಯನ್ನು ಸ್ಥಳದಲ್ಲೇ ನಡೆಸಲಾಯಿತು.