Saturday, July 27, 2024
spot_img
More

    Latest Posts

    ಮಂಗಳೂರು: ಯುವನಿಧಿ ಯೋಜನೆ: ಜ.8, 9ರಂದು ನೋಂದಣಿ – ಜಿಲ್ಲಾಧಿಕಾರಿ

    ಮಂಗಳೂರು: ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ “ಯುವನಿಧಿ” ಯೋಜನೆಯ ಪದವೀಧರರಿಗೆ ರೂ. 3000 ಹಾಗೂ ಡಿಪ್ಲೋಮಾ ಪಡೆದಿರುವವರಿಗೆ ರೂ. 1500 ನಿರುದ್ಯೋಗ ಭತ್ಯೆ ನೀಡುವ ನೋಂದಣಿ ತೀವ್ರಗೊಳಿಸಲು ಜಿಲ್ಲಾಧಿಕಾರಿ ಎಂಪಿ ಮುಲ್ಲೈಮುಗಿಲನ್ ಸೂಚಿಸಿದ್ದಾರೆ.

    ಅವರು ಈ ಸಂಬಂಧ ಅಧಿಕಾರಿಗಳ ಸಭೆ ನಡೆಸಿ, ದ.ಕ ಜಿಲ್ಲೆಯ ಎಲ್ಲಾ ಪದವಿ ಕಾಲೇಜು ಹಾಗೂ ಡಿಪ್ಲೋಮಾ ಶಿಕ್ಷಣ ಸಂಸ್ಥೆಗಳಲ್ಲಿ ಜನವರಿ 8 ಮತ್ತು 9 ರಂದು ನೋಂದಣಿ ಮೇಳವನ್ನು ನಡೆಸಲು ಅವರು ತಿಳಿಸಿದರು.
    2023ರಲ್ಲಿ ಪದವಿ, ಡಿಪ್ಲೊಮಾ ಪಡೆದವರು ಇದಕ್ಕೆ ಅರ್ಹರಾಗಿದ್ದಾರೆ. ಜಿಲ್ಲೆಯಲ್ಲಿ ಈಗಾಗಲೇ ಯುವ ನಿಧಿಗೆ ನೋಂದಣಿ ಮಾಡಲು ಹೆಚ್ಚಿನ ಪ್ರತಿಕ್ರಿಯೆ ಕಂಡುಬಂದಿದೆ. ಈ ನಿಟ್ಟಿನಲ್ಲಿ ಕಾಲೇಜುಗಳಲ್ಲಿಯೇ ನೋಂದಣಿ ಅಭಿಯಾನ ನಡೆಸುವಂತೆ ಅವರು ತಿಳಿಸಿದರು.
    ಸಭೆಯಲ್ಲಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರದೀಪ್ ಡಿಸೋಜ, ಮಂಗಳೂರು ವಿಶ್ವವಿದ್ಯಾಲಯ ಪ್ರಾಧ್ಯಾಪಕ ಡಾ. ಎ.ಎಂ. ಖಾನ್, ಮತ್ತಿತರರು ಉಪಸ್ಥಿತರಿದ್ದರು.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss