ಬಂಟ್ವಾಳ: ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಮಣಿನಾಲ್ಕೂರು ಗ್ರಾಮದ ಬಾಚಕೆರೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಸರಪಾಡಿ ಇದರ ಬ್ರಹ್ಮಕಲಶೋತ್ಸವ ಮಾ.22ರಿಂದ ಮಾ.28ರವರೆಗೆ ನಡೆಯಲಿದ್ದು, ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಽಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಗುರುವಾರ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಶ್ರೀ ಧಾಮ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಸಂಜೀವ ಪೂಜಾರಿ ಗುರುಕೃಪಾ, ಜೀರ್ಣೋದ್ಧಾರ ಸಮಿತಿ ಉಪಾಧ್ಯಕ್ಷ ಪುರುಷೋತ್ತಮ ಪೂಜಾರಿ ಮೊಗರುಮಜಲು, ಪ್ರ. ಕಾರ್ಯದರ್ಶಿ ಸರಪಾಡಿ ಅಶೋಕ ಶೆಟ್ಟಿ, ಬ್ರಹ್ಮಕಲಶೋತ್ಸವ ಸಮಿತಿಯ ಉಪಾಧ್ಯಕ್ಷ ಶಿವರಾಮ ಶೆಟ್ಟಿ ದೋಟ, ಪ್ರಮುಖರಾದ ಆನಂದ ಪೂಜಾರಿ ಹಲ್ಲಂಗಾರು, ಕಾರ್ಯದರ್ಶಿ ಕಿಶೋರ್ ಪೂಜಾರಿ ಹಟದಡ್ಕ, ಕೋಶಾಧಿಕಾರಿ ಸುಂದರ ಬಾಚಕೆರೆ, ಹೊರೆ ಕಾಣಿಕೆ ಸಮಿತಿ ಸಹ ಸಂಚಾಲಕ ಪುರುಷೋತ್ತಮ ಕಾಯರ್ಪಲ್ಕೆ ಉಪಸ್ಥಿತರಿದ್ದರು.
©2021 Tulunada Surya | Developed by CuriousLabs