Friday, March 31, 2023

BREAKING NEWS: ಪ್ಯಾನ್ ಮತ್ತು ಆಧಾರ್ ಲಿಂಕ್ ಮಾಡುವ ದಿನಾಂಕ ಜೂನ್ 30 ರವರೆಗೆ ವಿಸ್ತರಣೆ

ನವದೆಹಲಿ: ಶಾಶ್ವತ ಖಾತೆ ಸಂಖ್ಯೆ (PAN) ಕಾರ್ಡ್ ಮತ್ತು ಆಧಾರ್ ಕಾರ್ಡ್ ಅನ್ನು ಲಿಂಕ್ ಮಾಡಲು ಗಡುವನ್ನು ಜೂನ್ 30, 2023 ರವರೆಗೆ ವಿಸ್ತರಿಸಲಾಗಿದೆ. ಮಂಗಳವಾರದ ಅಧಿಸೂಚನೆಯಲ್ಲಿ ಹಣಕಾಸು ಸಚಿವಾಲಯವು...
More

    Latest Posts

    ಕಡಬ: ವಾಟ್ಸಪ್ ಸ್ಟೇಟಸ್ ಹಾಕಿ ನೇಣಿಗೆ ಶರಣಾದ ಯುವಕ

    ಕಡಬ: ವಾಟ್ಸಪ್ ನಲ್ಲಿ ಸಾಯುವ ಕುರಿತ ಸ್ಟೇಟಸ್ ಹಾಕಿ ಯುವಕನೊರ್ವ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ತಾಲೂಕಿನ ಇಚಿಲಂಪಾಡಿ ಗ್ರಾಮದಲ್ಲಿ ನಡೆದಿದೆ.

    ನಾಪತ್ತೆಯಾಗಿದ್ದ 8 ವರ್ಷದ ಬಾಲಕನ ಶವ ನಿರ್ಜನ ಪ್ರದೇಶದಲ್ಲಿ ಪತ್ತೆ ; ಕೊಲೆ ಶಂಕೆ

    ಹುಬ್ಬಳ್ಳಿ: ಪಾಳು ಬಿದ್ದ ನಿರ್ಜನ ಜಾಗದಲ್ಲಿ ಎಂಟು ವರ್ಷದ ಬಾಲಕನೊಬ್ಬನ ಶವ ಪತ್ತೆಯಾಗಿದ್ದ ಘಟನೆ ಹುಬ್ಬಳ್ಳಿಯ ದೊಡ್ಡ ಮನಿ ಕಾಲೊನಿಯಲ್ಲಿ ನಡೆದಿದ್ದು, ಕೊಲೆ ಮಾಡಿ ಎಸೆದಿರುವ ಶಂಕೆ ವ್ಯಕ್ತವಾಗಿದೆ.

    BIGG NEWS : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ : ನಾಲ್ವರು ‘IAS’ ಅಧಿಕಾರಿಗಳ ವರ್ಗಾವಣೆ

    ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಎನ್ನುವಂತೆ ನಾಲ್ವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಈ ಕುರಿತಂತೆ ಅಧಿಸೂಚನೆ ಹೊರಡಿಸಿರುವಂತ ರಾಜ್ಯ...

    BIG NEWS; ‘SSLC’ ಕನ್ನಡ ಪ್ರಶ್ನೆ ಪತ್ರಿಕೆ ಸೋರಿಕೆ : ಸೋಶಿಯಲ್ ಮೀಡಿಯಾದಲ್ಲಿ ವೈರಲ್

    ಕಲಬುರಗಿ : ಇಂದಿನಿಂದ ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ (SSLC) ಪರೀಕ್ಷೆ ಆರಂಭವಾಗಿದ್ದು, ಇಂದು ಪ್ರಥಮ ಭಾಷೆ ಕನ್ನಡ ಪರೀಕ್ಷೆ ನಡೆಯುತ್ತಿದೆ. ಇದರ ನಡುವೆ...

    ತುಳು ಭಾಷೆ, ಸಂಸ್ಕೃತಿ ಬಗ್ಗೆ ಇನ್ನಷ್ಟು ಸಂಶೋಧನೆ ಆಗಬೇಕಿದೆ: ಡಾ. ಡಿ ವೀರೇಂದ್ರ ಹೆಗ್ಗಡೆ

    ಮಂಗಳೂರು: ತುಳುವನ್ನು ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರಿಸುವ ಪ್ರಯತ್ನ ನಡೆದೇ ಇದೆ. ಹಾಗೆಂದು ನಾವು ಅದಕ್ಕೆ ಸೀಮಿತವಾಗದೆ ನಮ್ಮ ಭಾಷೆ, ಮೂಲ ಸಂಸ್ಕೃತಿಯನ್ನು  ಉಳಿಸಿಕೊಳ್ಳುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕಿದೆ, ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಅಭಿಪ್ರಾಯಪಟ್ಟಿದ್ದಾರೆ.

    ಮಂಗಳೂರು ವಿಶ್ವವಿದ್ಯಾನಿಲಯದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತುಳು ಪೀಠ, ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜಿನ ತುಳು ಸ್ನಾತಕೋತ್ತರ ಅಧ್ಯಯನ ವಿಭಾಗದ ಸಹಯೋಗದೊಂದಿಗೆ ನಡೆಯುತ್ತಿರುವ ತುಳು ವೆಬಿನಾರ್‌ನ ನೂರನೇ ಸಂಚಿಕೆಯನ್ನು ಉದ್ಘಾಟಿಸಿ ಆಶೀರ್ವಚನ ನೀಡಿದ ಅವರು, ಎಲ್ಲಿದ್ದರೂ ಸತ್ಯ, ಧರ್ಮ, ಸಹಬಾಳ್ವೆಯ ದಾರಿಯಲ್ಲಿ ನಡೆಯಲು ಹೇಳಿಕೊಟ್ಟಿರುವ ತುಳು ಭಾಷೆ, ಸಂಸ್ಕೃತಿಯ ಬಗ್ಗೆ ಶ್ರೀ ಧರ್ಮಸ್ಥಳ ಸಂಸ್ಕೃತಿ ಸಂಶೋಧನಾ ಪ್ರತಿಷ್ಠಾನ ಕೆಲಸ ಮಾಡುತ್ತಿದೆ. ತುಳುನಾಡಿನ ಜಾನಪದ ಔಷಧಿಗಳು, ಬೆಳೆಗಳ ಕುರಿತಂತೆ ಇನ್ನಷ್ಟೂ ಅಧ್ಯಯನ ಪೀಠದ ಮೂಲಕ ನಡೆಯಬೇಕಾಗಿದೆ, ಎಂದರು.

    ತುಳು ಭಾಷೆ ಬೆಳೆದು ಬಂದ ದಾರಿಯ ಕುರಿತು ವಿಶೇಷ ಉಪನ್ಯಾಸ ನೀಡಿದ ತುಳು-ಕನ್ನಡ ವಿದ್ವಾಂಸ, ವಿಶ್ರಾಂತ ಕುಲಪತಿ ಡಾ. ಬಿ ಎ ವಿವೇಕ ರೈ, ತುಳು ತಮಿಳಿನ ಉಪಭಾಷೆಯಾಗಿದ್ದಿರಬಹುದು ಎಂದು ಭಾವಿಸಿದ್ದ ಸಮಯದಲ್ಲಿ ಭಾಷಾ ವಿಜ್ಞಾನಿ ರಾಬರ್ಟ್‌ ಕಾಲ್ಡ್‌ವೆಲ್ (1856) ಅವರಿಂದಾಗಿ ತುಳು ಒಂದು ಸ್ವತಂತ್ರ್ರ ಮತ್ತು ಸಮೃದ್ಧ ಭಾಷೆ ಎಂಬುದು ತಿಳಿದುಬಂತು. ಬಾಸೆಲ್‌ ಮಿಷನ್‌  1886 ರಲ್ಲಿ ಮೊದಲ ತುಳು ಶಬ್ದಕೋಶ ಹೊರತಂದಿತು. ರಷ್ಯನ್‌ ಸಂಶೋಧಕ ಎಂ ಎಸ್‌ ಆಂಡ್ರೊನೋವ್‌ ಮತ್ತು ಪಿ ಎಸ್‌ ಸುಬ್ರಹ್ಮಣ್ಯಮ್‌ ʼತುಳು ಇತರ ದ್ರಾವಿಡ ಭಾಷೆಗಳಿಗಿಂತ ವಿಭಿನ್ನʼ ಎಂದು ನಿರೂಪಿಸಿದರು.  ಲಕ್ಷ್ಮೀನಾರಾಯಣ ಭಟ್‌ ಮತ್ತು ಡಾ. ಡಿ ವಿ ಶಂಕರ ಭಟ್‌ ಅವರ ಸಂಶೋಧನೆಗಳು ವಿದೇಶಗಳಲ್ಲೂ ತುಳುವಿನ ಸ್ಥಾನಮಾನ ಹೆಚ್ಚಿಸಿದವು. ತುಳುವಿನ ಬೆಳವಣಿಗೆಯಲ್ಲಿ ಆರಂಭದಲ್ಲಿ ವಿದೇಶೀ ಸಂಶೋಧಕರ, ಬಳಿಕ ದೇಶೀಯ ಭಾಷಾಭಿಮಾನಿಗಳ ಕೊಡುಗೆ ಅಪಾರ, ಎಂದರು.  

    ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಜಿ. ಕತ್ತಲ್‌ಸಾರ್‌ ಮಾತನಾಡಿ, ಅಕಾಡೆಮಿ ಐದು ಚಾಲೆನ್‌ಗಳ ಮೂಲಕ ತುಳು ಜ್ಞಾನದ ಪ್ರಸರಣ ಮತ್ತು ದಾಖಲೀಕರಣ ನಡೆಸಲಿದೆ. “ಸುಮಾರು 14 ಪುಸ್ತಕಗಳನ್ನು ಸಧ್ಯದಲ್ಲೇ ಪ್ರಕಟಿಸಲಾಗುವುದು. ಬರುವ ಫೆಬ್ರವರಿಯಲ್ಲಿ ರೂ. 9 ಕೋಟಿ ವೆಚ್ಚದ ʼತುಳು ಭವನʼ ಲೋಕಾರ್ಪಣೆಯಾಗಲಿದೆ. ಸುಮಾರು 350 ಶಿಕ್ಷಕರು ತುಳು ಕಲಿತು ಕಲಿಸಲು ಸಿದ್ಧರಾಗಿದ್ದಾರೆ. ತುಳು ಲಿಪಿಗೆ ರಾಷ್ಟ್ರ ಮಾನ್ಯತೆ ಸಿಕ್ಕಿದೆ. ಇತರ ವಿವಿಗಳಲ್ಲೂ ತುಳು ಸ್ನಾತಕೋತ್ತರ ಕೋರ್ಸ್‌ ನಡೆಸುವ ಕುರಿತು ಪ್ರಯತ್ನ ಸಾಗಿದೆ,” ಎಂದರು. ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವ ಡಾ. ಕಿಶೋರ್‌ ಕುಮಾರ್‌ ಸಿ ಕೆ, ಜ್ಞಾನವೇ ಬೆಳಕು ಎಂಬಂತೆ ವೆಬಿನಾರ್‌ ಸರಣಿ ನೂರು ಕಂತು ತಲುಪಿರುವುದು ವಿವಿಗೂ ಹೆಮ್ಮೆಯ ಸಂಗತಿ, ಎಂದರು.

    ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ ಸುಬ್ರಹ್ಮಣ್ಯ ಯಡಪಡಿತ್ತಾಯ ಅವರು, ತುಳು ಪೀಠದ ಮೂಲಕ ಹೆಚ್ಚಿನ ಸಂಶೋಧನೆ, ಅಧ್ಯಯನಕ್ಕೆ ಅವಕಾಶ ಮಾಡಿಕೊಡಲಾಗುವುದು. ತುಳು ಸಾಹಿತ್ಯದ ಡಿಜಿಟಲೀಕರಣಕ್ಕೆ ಮುಂದಿನ ತಿಂಗಳಿನಿಂದಲೇ ಚಾಲನೆ ನೀಡಲಾಗುವುದು, ಎಂದರು. ಪ್ರಾಸ್ತಾವಿಕವಾಗಿ ಮಾತನಾಡಿದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತುಳು ಪೀಠದ ಸಂಯೋಜಕ ಡಾ. ಮಾಧವ ಎಂ ಕೆ, ವೆಬಿನಾರ್‌ ನಲ್ಲಿ ಸಂಪನ್ಮೂಲ ವ್ಯಕ್ತಿಗಳು ಆಡಿದ ಮಾತನ್ನು ನಾಲ್ಕು ಕೃತಿಗಳ ರೂಪಕ್ಕೆ ಇಳಿಸಲಾಗುತ್ತಿದೆ. ಇದು ವಿದ್ಯಾರ್ಥಿಗಳಿಗೆ ಆಕರ ಗ್ರಂಥವಾಗಲಿದೆ. ಸಮಾಜದ ಎಲ್ಲರಿಗೂ ಜ್ಞಾನ ತಲುಪಬೇಕು ಎಂಬ ಉದ್ದೇಶದಿಂದ ವೆಬಿನಾರ್‌ ಸರಣಿಯಲ್ಲಿ ಎಲ್ಲಾ ವರ್ಗದ ಜನರಿಗೂ ಅವಕಾಶ ನೀಡಲಾಗಿದೆ, ಎಂದರು.

    ವಿಜಯಲಕ್ಷ್ಮಿ ಕಟೀಲು ಕಾರ್ಯಕ್ರಮ ನಿರೂಪಿಸಿದರು. ಸುರೇಶ್‌ ರಾವ್‌ ಅತ್ತೂರು ಸ್ವರಚಿತ ಪ್ರಾರ್ಥನೆ ಹಾಡಿದರು. ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜಿನ ಪ್ರಾಂಶುಪಾಲೆ ಡಾ. ಸುಭಾಷಿಣಿ ಶ್ರೀವತ್ಸ ಧನ್ಯವಾದ ಸಮರ್ಪಿಸಿದರು.

    ಪೀಠದ ಕಷ್ಟ, ವಿಶ್ವ ತುಳು ಸಮ್ಮೇಳನದ ಸುಖ !
    ವಿದ್ವಾಂಸ ಡಾ. ಬಿ ಎ ವಿವೇಕ ರೈ, ಮಂಗಳೂರು ವಿವಿಯಲ್ಲಿ ಸುಮಾರು 30 ವರ್ಷಗಳ ಹಿಂದೆ ತುಳು ಪೀಠ ಸ್ಥಾಪಿಸಲು ಪಟ್ಟ ಶ್ರಮ, ಆಗ ನೆರವಿಗೆ ಬಂದ ಡಾ. ವೀರೇಂದ್ರ ಹೆಗ್ಗಡೆ ಹಾಗೂ ಅಂದಿನ ಸರಕಾರವನ್ನು ನೆನಪಿಸಿಕೊಂಡರು. ಇದೇ ವೇಳೆ ಅವರು 2009 ರ ಡಿಸೆಂಬರ್‌ 9- 13 ರವರೆಗೆ ಧರ್ಮಸ್ಥಳದಲ್ಲಿ ನಡೆದ ವಿಶ್ವ ತುಳು ಸಮ್ಮೇಳನದ ಸಂದರ್ಭವನ್ನು ಸಂತಸದಿಂದ ನೆನಪಿಸಿಕೊಂಡರು.  “ವಿದೇಶಗಳಲ್ಲಿ ಹೊಸಬರಿಂದ ತುಳು ಭಾಷೆ, ಸಂಸ್ಕೃತಿ ರಕ್ಷಣೆಗಾಗಿ ನಡೆಯುತ್ತಿರುವ ಕೆಲಸಗಳ ದಾಖಲೀಕರಣ ಆಗಬೇಕು. ತುಳು ಪುಸ್ತಕಗಳ ಡಿಜಿಟಲೀಕರಣದಿಂದ ಸಾಹಿತ್ಯ ಇನ್ನಷ್ಟು ಜನರಿಗೆ ತಲುಪಲು ಸಾಧ್ಯ” ಎಂದು ಅಭಿಪ್ರಾಯಪಟ್ಟರು.

    Latest Posts

    ಕಡಬ: ವಾಟ್ಸಪ್ ಸ್ಟೇಟಸ್ ಹಾಕಿ ನೇಣಿಗೆ ಶರಣಾದ ಯುವಕ

    ಕಡಬ: ವಾಟ್ಸಪ್ ನಲ್ಲಿ ಸಾಯುವ ಕುರಿತ ಸ್ಟೇಟಸ್ ಹಾಕಿ ಯುವಕನೊರ್ವ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ತಾಲೂಕಿನ ಇಚಿಲಂಪಾಡಿ ಗ್ರಾಮದಲ್ಲಿ ನಡೆದಿದೆ.

    ನಾಪತ್ತೆಯಾಗಿದ್ದ 8 ವರ್ಷದ ಬಾಲಕನ ಶವ ನಿರ್ಜನ ಪ್ರದೇಶದಲ್ಲಿ ಪತ್ತೆ ; ಕೊಲೆ ಶಂಕೆ

    ಹುಬ್ಬಳ್ಳಿ: ಪಾಳು ಬಿದ್ದ ನಿರ್ಜನ ಜಾಗದಲ್ಲಿ ಎಂಟು ವರ್ಷದ ಬಾಲಕನೊಬ್ಬನ ಶವ ಪತ್ತೆಯಾಗಿದ್ದ ಘಟನೆ ಹುಬ್ಬಳ್ಳಿಯ ದೊಡ್ಡ ಮನಿ ಕಾಲೊನಿಯಲ್ಲಿ ನಡೆದಿದ್ದು, ಕೊಲೆ ಮಾಡಿ ಎಸೆದಿರುವ ಶಂಕೆ ವ್ಯಕ್ತವಾಗಿದೆ.

    BIGG NEWS : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ : ನಾಲ್ವರು ‘IAS’ ಅಧಿಕಾರಿಗಳ ವರ್ಗಾವಣೆ

    ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಎನ್ನುವಂತೆ ನಾಲ್ವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಈ ಕುರಿತಂತೆ ಅಧಿಸೂಚನೆ ಹೊರಡಿಸಿರುವಂತ ರಾಜ್ಯ...

    BIG NEWS; ‘SSLC’ ಕನ್ನಡ ಪ್ರಶ್ನೆ ಪತ್ರಿಕೆ ಸೋರಿಕೆ : ಸೋಶಿಯಲ್ ಮೀಡಿಯಾದಲ್ಲಿ ವೈರಲ್

    ಕಲಬುರಗಿ : ಇಂದಿನಿಂದ ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ (SSLC) ಪರೀಕ್ಷೆ ಆರಂಭವಾಗಿದ್ದು, ಇಂದು ಪ್ರಥಮ ಭಾಷೆ ಕನ್ನಡ ಪರೀಕ್ಷೆ ನಡೆಯುತ್ತಿದೆ. ಇದರ ನಡುವೆ...

    Don't Miss

    ಕುಂದಾಪುರ: ಸರಣಿ ರಸ್ತೆ ಅಪಘಾತ – ಓರ್ವ ಸಾವು

    ಕುಂದಾಪುರ: ಇಲ್ಲಿನ ಕುಂಭಾಶಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸರಣಿ ರಸ್ತೆ ಅಪಘಾತ ಸಂಭವಿಸಿದ್ದು ಓರ್ವ ಸಾವಿಗೀಡಾಗಿ ಮತ್ತೋರ್ವ ಗಾಯಗೊಂಡ ಘಟನೆ ಸಂಭವಿಸಿದೆ. ಕುಂಭಾಶಿಯ ಪಾಕಶಾಲಾ ಹೊಟೇಲ್ ಸಮೀಪ ಹೋಂಡಾ ಡಿಯೋ...

    ನವದೆಹಲಿ: ಅಂಗಾಂಗ ದಾನ ಶ್ರೇಷ್ಠ ಕಾರ್ಯ- ಪ್ರಧಾನಿ ಮೋದಿ

    ನವದೆಹಲಿ: ಅಂಗಾಂಗ ದಾನದಂಥ ಮಾನವೀಯ ಕೆಲಸ ಮಾಡಬೇಕು ಎಂದು ಜನರಲ್ಲಿ ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಅಲ್ಲದೇ ‘ಈ ನಿಟ್ಟಿನಲ್ಲಿ ನಮ್ಮ ಏಕರೂಪ ನೀತಿಯನ್ನು ರೂಪಿಸುತ್ತಿದ್ದು, ಅಂಗಾಂಗ ದಾನ...

    ಮಾಂತ್ರಿಕನ ಮಾತು ಕೇಳಿ 10 ವರ್ಷದ ಬಾಲಕನನ್ನು ಬಲಿ ಪಡೆದ ಮೂವರು ಅರೆಸ್ಟ್

    ಉತ್ತರ ಪ್ರದೇಶ: 10 ವರ್ಷದ ಬಾಲಕನನ್ನು ಮಾಂತ್ರಿಕನೊಬ್ಬ ನರಬಲಿ ಕೊಡುವಂತೆ ಹೇಳಿ ಕೊಂದ ಆರೋಪದ ಮೇಲೆ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪರ್ಸಾ...

    ಬಂಟ್ವಾಳ: ನೇತ್ರಾವತಿ‌ ನದಿಗೆ ಹಾರಿ ಪುತ್ತೂರಿನ ಯುವಕ ಆತ್ಮಹತ್ಯೆ..!

    ಬಂಟ್ವಾಳ: ನೇತ್ರಾವತಿ‌ ನದಿಗೆ ಹಾರಿ ಪುತ್ತೂರಿನ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ವಿಠ್ಠಲ್ ಕಾಮತ್ ಅವರ ಪುತ್ರ ವಿಘ್ನೇಶ್ ಕಾಮತ್(32) ಆತ್ಮಹತ್ಯೆ ಮಾಡಿಕೊಂಡವರು.

    BREAKING NEWS: ಕೊಚ್ಚಿಯಲ್ಲಿ ಟೇಕ್ ಆಫ್ ಆದ ಭಾರತೀಯ ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ

    ಕೊಚ್ಚಿ: ಇಲ್ಲಿನ ನೆಡುಂಬಾಶ್ಶೇರಿ ವಿಮಾನ ನಿಲ್ದಾಣದಲ್ಲಿ ( Nedumbassery airport ) ಭಾನುವಾರ ಭಾರತೀಯ ಕೋಸ್ಟ್ ಗಾರ್ಡ್ (Indian Coast Guard - ICG) ಹೆಲಿಕಾಪ್ಟರ್ ಟೇಕ್ ಆಫ್ ಆಗುವ...