Saturday, December 9, 2023

ಸ್ವ-ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ವಿವಿಧ ‘ಉಚಿತ ತರಬೇತಿ’ಗೆಳಿಗೆ ಅರ್ಜಿ ಆಹ್ವಾನ

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯಲ್ಲಿ ರುಡ್ ಸೆಟ್ ಸಂಸ್ಥೆಯ ಮೂಲಕ ವಿವಿಧ ಉಚಿತ ತರಬೇತಿಗಳನ್ನು ಸ್ವ-ಉದ್ಯೋಗಾಕಾಂಕ್ಷಿಗಳಿಗೆ ನೀಡಲಾಗುತ್ತಿದೆ. ಇದೀಗ ವಿವಿಧ ಕೋರ್ಸ್ ಗಳಿಗೆ ಉಚಿತ ತರಬೇತಿಗಾಗಿ ಅರ್ಜಿಯನ್ನು...
More

    Latest Posts

    ಬಂಟ್ವಾಳ : ಮನೆಯ ಬಾಗಿಲಿಗೆ ಪೆಟ್ರೋಲ್ ಎರಚಿ ಬೆಂಕಿ ಹಚ್ಚಿ ಕೊಲೆ ಯತ್ನ ಪ್ರಕರಣ|ಆರೋಪಿ ಸುಮ್ಮಿ ಅಲಿಯಾಸ್ ಸುಮಿತ್ ಆಳ್ವ & ಗ್ಯಾಂಗ್ ಬಂಧನ…!

    ಬಂಟ್ವಾಳ : ಮನೆಯಂಗಳಕ್ಕೆ ಪ್ರವೇಶಿಸಿದ ನಾಲ್ಕೈದು ಮಂದಿಯ ಗುಂಪು ಗೇಟ್ ಬಿಸಾಕಿ ಮನೆಯ ಬಾಗಿಲಿಗೆ ಪೆಟ್ರೋಲ್ ಎರಚಿ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಟ್ವಾಳ ನಗರ ಠಾಣಾ ಪೊಲೀಸರು...

    ಬಂಟ್ವಾಳ: ಗ್ಯಾಸ್ ಸೋರಿಕೆಯಿಂದ ಮನೆಗೆ ಬೆಂಕಿ

    ಬಂಟ್ವಾಳ : ಬಂಟ್ವಾಳ ತಾಲೂಕು ಪುದು ಗ್ರಾಮದ ಕಬೆಲ ನಿವಾಸಿ ಉಮೇಶ್ ಪೂಜಾರಿ ಯವರ ಬಾಡಿಗೆ ಮನೆಯಲ್ಲಿ ಬಾಡಿಗೆದಾರ ಹೊನ್ನಪ್ಪ ಗೌಡ ರವರ ಅಡುಗೆ ಅನಿಲ ಸೋರಿಕೆ ಯಾಗಿ ಗುರುವಾರ...

    ತುಳುನಾಡ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾ ವೈದ್ಯರ ಘಟಕ ವತಿಯಿಂದ ಪೋಲಿಸ್‌ ಅಧೀಕ್ಷಕರಾದ ಡಾ. ಅರುಣ್‌ ರವರ ಭೇಟಿ

    ಇಂದು 08-12-2023 ರಂದು ಮಧ್ಯಾಹ್ನ ತುಳುನಾಡ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾ ವೈದ್ಯರ ಘಟಕವು ತುಳುನಾಡ ರಕ್ಷಣಾ ವೇದಿಕೆಯ ಸ್ಥಾಪಕ ಅದ್ಯಕ್ಷರಾದ ಯೋಗೀಶ್ ಶೆಟ್ಟಿ ಜಪ್ಪುರವರ ನೇತ್ರತ್ವದಲ್ಲಿ ನೂರಾರು ವೈದ್ಯರುಗಳು...

    ತುಳುನಾಡ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾ ವೈದ್ಯರ ಘಟಕ ವತಿಯಿಂದ ಜಿಲ್ಲಾಧಿಕಾರಿ ವಿಧ್ಯಾಕುಮಾರಿಯವರ ಭೇಟಿ

    ಇಂದು 08-12-2023 ರಂದು ಸಂಜೆ ತುಳುನಾಡ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾ ವೈದ್ಯರ ಘಟಕವು ತುಳುನಾಡ ರಕ್ಷಣಾ ವೇದಿಕೆಯ ಸ್ಥಾಪಕ ಅದ್ಯಕ್ಷರಾದ ಯೋಗೀಶ್ ಶೆಟ್ಟಿ ಜಪ್ಪುರವರ ನೇತ್ರತ್ವದಲ್ಲಿ ನೂರಾರು ವೈದ್ಯರುಗಳು...

    ಬ್ರಿಟನ್‌ ಪ್ರಧಾನಿಯಾಗಿ ಭಾರತೀಯ ಮೂಲದ ರಿಷಿ ಸುನಕ್ ಆಯ್ಕೆ

    ಲಂಡನ್‌: ಬ್ರಿಟನ್‌ ಪ್ರಧಾನಿ ಹುದ್ದೆ ರೇಸ್‌ನಿಂದ ಪೆನ್ನಿ ಮೊರ್ಡಂಟ್‌ ಹಿಂದೆ ಸರಿದ ಹಿನ್ನೆಲೆಯಲ್ಲಿ ಭಾರತ ಮೂಲದ ರಿಷಿ ಸುನಾಕ್‌ ಮುಂದಿನ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ.

    ಕನ್ಸರ್ವೇಟಿವ್‌ ಪಕ್ಷದ ಅಧ್ಯಕ್ಷ ಸ್ಥಾನ ಸ್ಪರ್ಧೆಯಿಂದ ಹಿಂದೆ ಸರಿಯುವುದಾಗಿ ಬೋರಿಸ್‌ ಜಾನ್ಸನ್‌ ಭಾನುವಾರ ಘೋಷಿಸಿದ್ದರಿಂದ ರಿಷಿ ಸುನಾಕ್‌ ಬ್ರಿಟನ್‌ನ ಮುಂದಿನ ಪ್ರಧಾನಿಯಾಗುವುದು ಬಹುತೇಕ ಖಚಿತವಾಗಿತ್ತು. ಈಗ ಸುನಾಕ್‌ಗೆ ಹೆಚ್ಚಿನ ಬೆಂಬಲ ವ್ಯಕ್ತವಾಗಿದೆ. ಹೀಗಾಗಿ ಪ್ರತಿಸ್ಪರ್ಧಿ ಮೊರ್ಡಂಟ್‌ ಸ್ಪರ್ಧೆಯಿಂದ ಹಿಂದೆ ಸರಿಯಬೇಕು ಎಂದು ಪಕ್ಷದ ಸದಸ್ಯರಿಂದ ಒತ್ತಡ ಕೇಳಿಬಂದಿತ್ತು. ಯುಕೆಯ ಮೊದಲ ಬಿಳಿಯರಲ್ಲದ, ಭಾರತೀಯ ಮೂಲದವರೊಬ್ಬರು ಪ್ರಧಾನಿಯಾದರೆಂಬ ಇತಿಹಾಸ ಕೂಡ ಸೃಷ್ಟಿಯಾಗಿದೆ.

    ಮೊರ್ಡಂಟ್‌ ಅವರು 100 ಸಂಸದರ ಬೆಂಬಲ ಪಡೆಯುವಲ್ಲಿ ವಿಫಲರಾಗಿದ್ದಾರೆ. ಹೀಗಾಗಿ ಸುನಾಕ್‌ ಅವರು ನೂತನ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ. ಇದೇ ಶುಕ್ರವಾರ (ಅ.28) ರಂದು ಪ್ರಧಾನಿಯಾಗಿ ರಿಷಿ ಸುನಾಕ್‌ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಬಹುದು ಎನ್ನಲಾಗಿದೆ. ರಿಷಿ ಸುನಾಕ್‌ ಅವರು ಇನ್ಫೋಸಿಸ್‌ ಸಂಸ್ಥಾಪಕರಾದ ನಾರಾಯಣ ಮೂರ್ತಿ ಹಾಗೂ ಸುಧಾಮೂರ್ತಿ ಅವರ ಅಳಿಯ. ಬ್ರಿಟನ್‌ನಲ್ಲಿ ಪ್ರಬಲ ಯುವ ರಾಜಕಾರಣಿಯಾಗಿ ಬೆಳೆದಿರುವ ಅವರು ಹಣಕಾಸು ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು.

    ಕೇವಲ 45 ದಿನ ಆಡಳಿತ ನಡೆಸಿ ಬ್ರಿಟನ್‌ ಪ್ರಧಾನಿ ಸ್ಥಾನಕ್ಕೆ ಲಿಜ್‌ ಟ್ರಸ್‌ ರಾಜೀನಾಮೆ ನೀಡಿದ ನಂತರ ರಾಜಕೀಯ ಬಿಕ್ಕಟ್ಟು ಏರ್ಪಟ್ಟಿತ್ತು. ಪ್ರಧಾನಿ ಸ್ಥಾನಕ್ಕೆ ಮತ್ತೆ ರಿಷಿ ಸುನಾಕ್‌ ಸ್ಪರ್ಧಿಸಿದ್ದರು. ಇವರಿಗೆ ಪೆನ್ನಿ ಮೊರ್ಡಂಟ್‌ ಪೈಪೋಟಿ ನೀಡಿದ್ದರು. ಮೊರ್ಡಂಟ್‌ಗೆ ಕೇವಲ 28 ಸಂಸದರು ಬೆಂಬಲ ಸೂಚಿಸಿದರು. ಸುನಾಕ್‌ ಪರವಾಗಿ 198 ಸಂಸದರು ಬೆಂಬಲ ವ್ಯಕ್ತಪಡಿಸಿದರು.

    Latest Posts

    ಬಂಟ್ವಾಳ : ಮನೆಯ ಬಾಗಿಲಿಗೆ ಪೆಟ್ರೋಲ್ ಎರಚಿ ಬೆಂಕಿ ಹಚ್ಚಿ ಕೊಲೆ ಯತ್ನ ಪ್ರಕರಣ|ಆರೋಪಿ ಸುಮ್ಮಿ ಅಲಿಯಾಸ್ ಸುಮಿತ್ ಆಳ್ವ & ಗ್ಯಾಂಗ್ ಬಂಧನ…!

    ಬಂಟ್ವಾಳ : ಮನೆಯಂಗಳಕ್ಕೆ ಪ್ರವೇಶಿಸಿದ ನಾಲ್ಕೈದು ಮಂದಿಯ ಗುಂಪು ಗೇಟ್ ಬಿಸಾಕಿ ಮನೆಯ ಬಾಗಿಲಿಗೆ ಪೆಟ್ರೋಲ್ ಎರಚಿ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಟ್ವಾಳ ನಗರ ಠಾಣಾ ಪೊಲೀಸರು...

    ಬಂಟ್ವಾಳ: ಗ್ಯಾಸ್ ಸೋರಿಕೆಯಿಂದ ಮನೆಗೆ ಬೆಂಕಿ

    ಬಂಟ್ವಾಳ : ಬಂಟ್ವಾಳ ತಾಲೂಕು ಪುದು ಗ್ರಾಮದ ಕಬೆಲ ನಿವಾಸಿ ಉಮೇಶ್ ಪೂಜಾರಿ ಯವರ ಬಾಡಿಗೆ ಮನೆಯಲ್ಲಿ ಬಾಡಿಗೆದಾರ ಹೊನ್ನಪ್ಪ ಗೌಡ ರವರ ಅಡುಗೆ ಅನಿಲ ಸೋರಿಕೆ ಯಾಗಿ ಗುರುವಾರ...

    ತುಳುನಾಡ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾ ವೈದ್ಯರ ಘಟಕ ವತಿಯಿಂದ ಪೋಲಿಸ್‌ ಅಧೀಕ್ಷಕರಾದ ಡಾ. ಅರುಣ್‌ ರವರ ಭೇಟಿ

    ಇಂದು 08-12-2023 ರಂದು ಮಧ್ಯಾಹ್ನ ತುಳುನಾಡ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾ ವೈದ್ಯರ ಘಟಕವು ತುಳುನಾಡ ರಕ್ಷಣಾ ವೇದಿಕೆಯ ಸ್ಥಾಪಕ ಅದ್ಯಕ್ಷರಾದ ಯೋಗೀಶ್ ಶೆಟ್ಟಿ ಜಪ್ಪುರವರ ನೇತ್ರತ್ವದಲ್ಲಿ ನೂರಾರು ವೈದ್ಯರುಗಳು...

    ತುಳುನಾಡ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾ ವೈದ್ಯರ ಘಟಕ ವತಿಯಿಂದ ಜಿಲ್ಲಾಧಿಕಾರಿ ವಿಧ್ಯಾಕುಮಾರಿಯವರ ಭೇಟಿ

    ಇಂದು 08-12-2023 ರಂದು ಸಂಜೆ ತುಳುನಾಡ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾ ವೈದ್ಯರ ಘಟಕವು ತುಳುನಾಡ ರಕ್ಷಣಾ ವೇದಿಕೆಯ ಸ್ಥಾಪಕ ಅದ್ಯಕ್ಷರಾದ ಯೋಗೀಶ್ ಶೆಟ್ಟಿ ಜಪ್ಪುರವರ ನೇತ್ರತ್ವದಲ್ಲಿ ನೂರಾರು ವೈದ್ಯರುಗಳು...

    Don't Miss

    2 ತಿಂಗಳ ಹಿಂದಷ್ಟೇ ಪ್ರೇಮ ವಿವಾಹವಾಗಿದ್ದಾಕೆ ನೇಣಿಗೆ ಶರಣು

    ಬೆಂಗಳೂರು): ಎರಡು ತಿಂಗಳ ಹಿಂದೆಷ್ಟೆ ಪ್ರೀತಿಸಿ ಮದುವೆಯಾಗಿದ್ದ ಮಹಿಳೆಯೊಬ್ಬರು ಅನುಮಾನಸ್ಪದವಾಗಿ ಸಾವನ್ನಪ್ಪಿದ್ದಾರೆ. ಅನುಷಾ (23) ಅನುಮಾನಸ್ಪಾದವಾಗಿ ಸಾವನ್ನಪ್ಪಿದ್ದು, ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ನೇಣಿಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.

    ಹಾಗಲಕಾಯಿ ತಿನ್ನುವುದರಿಂದ ಸಿಗಲಿವೆ ಈ ಆರೋಗ್ಯ ಲಾಭಗಳು.!

    ಹಾಗಲಕಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಹಾಗಲಕಾಯಿಯಲ್ಲಿ ಸೋಡಿಯಂ, ಪೊಟ್ಯಾಸಿಯಮ್, ಕಬ್ಬಿಣ, ಫೈಬರ್ ಮತ್ತು ವಿಟಮಿನ್ ಸಿ ಸಮೃದ್ಧವಾಗಿದೆ. ಹಾಗಲಕಾಯಿ ಅನೇಕ ರೋಗಗಳಿಗೆ ಔಷಧಿಯಾಗಿ ಕಾರ್ಯನಿರ್ವಹಿಸುತ್ತದೆ (ಹಾಗಲಕಾಯಿಯ...

    ಉಡುಪಿ: ಬೀಗ ಮುರಿದು ಲಕ್ಷಾಂತರ ರೂ. ಮೌಲ್ಯದ ವಸ್ತುಗಳ ಕಳವು

    ಉಡುಪಿ: ಮನೆಯೊಳಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ವಸ್ತುಗಳನ್ನು ಕಳವು ಮಾಡಿದ್ದಾರೆ. ಸಂತೆಕಟ್ಟೆಯ ಸೋಲಾಂಗೆ ಸ್ಮಿತಾ ಲೂಯಿಸ್‌ ಅವರು ಮುಂಬಯಿಗೆ ತೆರಳಿದ್ದು, ನ. 29 ರಂದು...

    ಮಂಗಳೂರು: ಶಿಶುವನ್ನು ಹತ್ಯೆಗೈದು ಬಾಣಂತಿ ನೇಣಿಗೆ ಶರಣು..!

    ಮಂಗಳೂರು: ಬಾಣಂತಿಯೊಬ್ಬಳು ನಾಲ್ಕುವರೆ ತಿಂಗಳ ಗಂಡು ಶಿಶುವನ್ನು ಹತ್ಯೆ ಮಾಡಿ ಆತ್ಮಹತ್ಯೆಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ಮಂಗಳೂರಿನ ಗುಜ್ಜರಕೆರೆ ಲೇಕ್ ವ್ಯೂ ಅಪಾರ್ಟ್ಮೆಂಟ್ ಫ್ಲ್ಯಾಟ್ ನಲ್ಲಿ ನಡೆದಿದೆ. ಫಾತಿಮಾ...

    ಬೆಂಗಳೂರು: ಮೇಲಾಧಿಕಾರಿಗಳ ಕಿರುಕುಳ-ವೈದ್ಯರು ಆತ್ಮಹತ್ಯೆ..!

    ಬೆಂಗಳೂರು: ಆರೋಗ್ಯ ಇಲಾಖೆ ಅಧಿಕಾರಿಯಾಗಿದ್ದ ವೈದ್ಯರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಬೆಂಗಳೂರು ನಗರದ ಮಹಾಲಕ್ಷ್ಮೀ ಲೇಔಟ್ ಠಾಣಾ ವ್ಯಾಪ್ತಿಯ ಮನೆಯಲ್ಲಿ ಡಾಕ್ಟರ್ ಮೃತದೇಹ ಪತ್ತೆಯಾಗಿದೆ. ಮೃತ...