ಉಡುಪಿ: ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿದ್ದು, ನದಿಗಳು, ಹಳ್ಳಗಳು, ತೋಡುಗಳು ತುಂಬಿ ಹರಿಯುತ್ತಿರುವ ಕಾರಣ, ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಯುವಜನರು, ಸಾರ್ವಜನಿಕರು ಮತ್ತು ಜಿಲ್ಲೆಗೆ ಆಗಮಿಸುವ ಪ್ರವಾಸಿಗರು,
ಬೀಚ್ಗಳು, ನದಿಗಳು ಹಾಗೂ ಜಲಪಾತಗಳ ಬಳಿ ತೆರಳದಂತೆ ಹಾಗೂ ಫೋಟೋ ಮತ್ತು ವಿಡಿಯೋ ಚಿತ್ರೀಕರಣ ಮಾಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
