Saturday, April 20, 2024
spot_img
More

    Latest Posts

    ಭಟ್ಕಳ: ರಸ್ತೆ ಅಪಘಾತ – ಪಾದಚಾರಿ ವ್ಯಕ್ತಿ ಸ್ಥಳದಲ್ಲೇ ಮೃತ್ಯು..!

    ಭಟ್ಕಳ: ಹೆದ್ದಾರಿ ದಾಟುತ್ತಿದ್ದ ಪಾದಚಾರಿಯೋರ್ವನಿಗೆ ಖಾಸಗಿ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ಮಾವಿನಕಟ್ಟಾ ಕೋಕ್ತಿ ಕ್ರಾಸ್ ಬಳಿ ವರದಿಯಾಗಿದೆ.

    ಮೃತ ಪಾದಚಾರಿಯನ್ನು ಹೊನ್ನಪ್ಪ ತಿಮ್ಮಯ್ಯ ನಾಯ್ಕ (66) ಎಂದು ಗುರುತಿಸಲಾಗಿದೆ.

    ಈತ ಕೋಕ್ತಿ ಕ್ರಾಸ್ ನಿಂದ ಮಾವಿನಕಟ್ಟಾಯ ಮೀನು ಮಾರುಕಟ್ಟೆ ಕಡೆ ಹೋಗಲು ನಡೆದುಕೊಂಡು ರಸ್ತೆ ದಾಟುತ್ತಿದ್ದ ವೇಳೆ ಮುರುಡೇಶ್ವರ ಕಡೆಯಿಂದ ಭಟ್ಕಳ ಕಡೆಗೆ ಅತಿ ವೇಗವಾಗಿ ಬಂದ ಬಸ್ ಹೊನ್ನಪ್ಪ ತಿಮ್ಮಯ್ಯ ನಾಯ್ಕ ಇವರಿಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಢಿಕ್ಕಿ ಹೊಡೆದ ರಭಸಕ್ಕೆಪಾದಚಾರಿ ಸ್ಥಳದಲ್ಲೇ ಮೃತಪಪಟ್ಟಿದ್ದು. ದೇಹ ಭಾಗ ಸಂಪೂರ್ಣ ಚಿದ್ರ ಚಿದ್ರವಾಗಿತ್ತು ಎನ್ನಲಾಗಿದೆ. ಈ ಕುರಿತು ಮುರುಡೇಶ್ವರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss