Sunday, October 20, 2024
spot_img
More

    Latest Posts

    ದ.ಕ ಜಿಲ್ಲೆಯಲ್ಲಿ ಮಳೆ ಅವಾಂತರ: 30 ಕ್ಕೂ ಹೆಚ್ಚು ಮನೆಗಳಿಗೆ ರಸ್ತೆ ಸಂಪರ್ಕ ಕಡಿತ

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಫಲ್ಗುಣಿ‌ ನದಿ ಉಕ್ಕಿ ಹರಿಯುತ್ತಿದೆ. ಪರಿಣಾಮ ಮಂಗಳೂರಿನ‌ ಅದ್ಯಪಾಡಿ ಸಮೀಪದ ಮುಗೇರ ಕುದ್ರು ಪ್ರದೇಶ ನದಿ ನೀರಿನಿಂದ ಜಲಾವೃತವಾಗಿದೆ.

    ಸುಮಾರು ‌30 ಕ್ಕೂ ಹೆಚ್ಚು ಮನೆಗಳಿಗೆ ರಸ್ತೆ ಸಂಪರ್ಕ ಕಡಿತಗೊಂಡಿದೆ. ಮನೆಯ‌ ಸುತ್ತಲು ನೀರು ಆವರಿಸಿದೆ. ಸುಮಾರು 100 ಎಕರೆಗೂ ಹೆಚ್ಚು ಪ್ರದೇಶ ಜಲಾವೃತವಾಗಿದೆ. ಹೀಗಾಗಿ ಜನರು ದೋಣಿಯನ್ನು ಅವಲಂಬಿಸಿದ್ದಾರೆ. ಅಲ್ಲದೆ, ಹೈಡ್ರೋಲಿಕ್ ಗೇಟ್ ತೆರೆದು ನೆರೆ ಸಮಸ್ಯೆಗೆ ಮುಕ್ತಿ ನೀಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss