ಮಂಗಳೂರು : ನಗರದ ಕಾರ್ ಸ್ಟ್ರೀಟ್ನ ಕ್ರಾಸ್ ರಸ್ತೆಯಲ್ಲಿರುವ ಪ್ರಗತಿ ಜ್ಯುವೆಲ್ಲರ್ಸ್ಗೆ ಗ್ರಾಹಕರ ಸೋಗಿನಲ್ಲಿ ಬಂದು ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಉಳ್ಳಾಲದ ಮಂಜನಾಡಿಯ ಊರುಮನೆ ನಿವಾಸಿ ಮಹಮ್ಮದ್ ಸಿನಾನ್(25), ನಾಟೆಕಲ್ ನಿವಾಸಿ ಹೈದರ್ ಆಲಿ ಆಸಿಲ್(20), ನಾಟೆಕಲ್ನ ಅಸೈಗೋಳಿ ನಿವಾಸಿ ಮೊಹಮ್ಮದ್ ತಸ್ವೀರ್(34) ಬಂಧಿತ ಆರೋಪಿಗಳು. ಜ್ಯುವೆಲ್ಲರಿ ಶಾಪ್ನ ಸಿಬ್ಬಂದಿ ಗಮನ ಬೇರೆಡೆಗೆ ಸೆಳೆದು 97.11 ಗ್ರಾಂ ತೂಕದ 6,00,000 ರೂ. ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿದ್ದರು. ಈ ಬಗ್ಗೆ ಪ್ರಗತಿ ಜ್ಯುವೆಲ್ಲರ್ಸ್ ಮಾಲೀಕ ವಿನೋದ್ ಶೇಟ್ ಉತ್ತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕಾರ್ಯಾಚರಣೆ ನಡೆಸಿ, ಮಂಗಳೂರು ಕೇಂದ್ರ ಮಾರುಕಟ್ಟೆ ಪರಿಸರದಲ್ಲಿ ಆರೋಪಿಗಳನ್ನು ಬಂಧಿಸಿ 6,00,000 ಮೌಲ್ಯದ ಚಿನ್ನಾಭರಣ, ಕೃತ್ಯಕ್ಕೆ ಬಳಸಿರುವ ಸ್ಕೂಟರ್, 2 ಮೊಬೈಲ್ ಫೋನ್ ಗಳು ವಶಪಡಿಸಿಕೊಂಡಿದ್ದಾರೆ.
Trending
- ದಲಿತ ಮಹಿಳೆಯ ಮೇಲೆ ಜಾತಿ ನಿಂದನೆ, ಲೈಂಗಿಕ ಕಿರುಕುಳ, ಮಾನಸಿಕ ಹಿಂಸೆ ಮಣಿಪಾಲ ಸೌಹಾರ್ದ ಸೊಸೈಟಿ ಮುಖ್ಯಸ್ಥ ಸಂದೀಪ್ ಕೃಷ್ಣ ಪೂಜಾರಿ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಮತ್ತು ತುಳುನಾಡ ರಕ್ಷಣಾ ವೇದಿಕೆ ಜಂಟಿ ಪತ್ರಿಕಾಗೋಷ್ಠಿ
- ಸುಂಕದಕಟ್ಟೆ – ನವರಂಗ ಕಾಂಪೌಂಡ್ ಬಳಿ ರಸ್ತೆ–ಚರಂಡಿ ಸಮಸ್ಯೆ: ತಕ್ಷಣ ಕಾಮಗಾರಿ ಆರಂಭಿಸಲು ಎಸ್ ಡಿ ಪಿ ಐ ಮುಖಂಡ ಅಬ್ದುಲ್ ಹಮೀದ್ ಕೊಳಂಬೆ ಆಗ್ರಹ
- ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಮೂವರಿಗೆ ವಿಧಿಸಿದ್ದ ಗಲ್ಲು ಶಿಕ್ಷೆ ಕಾಯಂಗೊಳಿಸಿದ ಹೈಕೋರ್ಟ್, ಶಿಕ್ಷೆ ಕಡಿಮೆ ಮಾಡಿದರೆ ಸಮಾಜಕ್ಕೆ ತಪ್ಪು ಸಂದೇಶ – ತೀಕ್ಷ್ಣ ಅಭಿಪ್ರಾಯ
- ಕುಂದಾಪುರ: ಮಾಜಿ ಶಾಸಕ, ಹಿರಿಯ ಧಾರ್ಮಿಕ–ಸಾಮಾಜಿಕ ಮುಂದಾಳು ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ ತುಳುನಾಡ ರಕ್ಷಣಾ ವೇದಿಕೆ ತೀವ್ರ ಸಂತಾಪ
- ರಾಷ್ಟ್ರೀಯ ಹೆದ್ದಾರಿ ಯು-ಟರ್ನ್ ಏಕಪಕ್ಷೀಯವಾಗಿ ಬಂದ್: ಪರ್ಯಾಯ ಸರ್ವಿಸ್ ರಸ್ತೆ ಇಲ್ಲದೆ ಜನಜೀವನ ಅಸ್ತವ್ಯಸ್ತ – ತಕ್ಷಣ ಹಳೆಯ ವ್ಯವಸ್ಥೆ ಪುನಸ್ಥಾಪನೆಗೆ ಯೋಗಿಶ್ ಶೆಟ್ಟಿ ಜಪ್ಪುರ ಆಗ್ರಹ
- Tulunada Rakshana Vedike, Udupi District, Felicitates Former Hockey India Player Adrian D’Souza
- 🛑 ಕಾಸರಗೋಡು | ತೂಮಿನಾಡು ಕುಟುಂಬ ಕಲಹ: ಮೃತರ ಸಂಖ್ಯೆ 2ಕ್ಕೆ ಏರಿಕೆ, ಗಂಭೀರ ಗಾಯಗೊಂಡಿದ್ದ ಶೇಕುಂಞಿ ಆಸ್ಪತ್ರೆಯಲ್ಲಿ ನಿಧನ
- ಕೆ.ಎಸ್. ಹೆಗ್ಡೆ ಆಸ್ಪತ್ರೆ ಸಮೀಪ ತ್ಯಾಜ್ಯ ನೀರು ನಿಂತು ತೀವ್ರ ಸಮಸ್ಯೆ –ಶಾಶ್ವತ ಪರಿಹಾರಕ್ಕೆ ತುಳುನಾಡ ರಕ್ಷಣಾ ವೇದಿಕೆ ಅಟೋ ಘಟಕದಿಂದ ಒತ್ತಾಯ
