ಮಂಗಳೂರು : ನಗರದ ಕಾರ್ ಸ್ಟ್ರೀಟ್ನ ಕ್ರಾಸ್ ರಸ್ತೆಯಲ್ಲಿರುವ ಪ್ರಗತಿ ಜ್ಯುವೆಲ್ಲರ್ಸ್ಗೆ ಗ್ರಾಹಕರ ಸೋಗಿನಲ್ಲಿ ಬಂದು ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಉಳ್ಳಾಲದ ಮಂಜನಾಡಿಯ ಊರುಮನೆ ನಿವಾಸಿ ಮಹಮ್ಮದ್ ಸಿನಾನ್(25), ನಾಟೆಕಲ್ ನಿವಾಸಿ ಹೈದರ್ ಆಲಿ ಆಸಿಲ್(20), ನಾಟೆಕಲ್ನ ಅಸೈಗೋಳಿ ನಿವಾಸಿ ಮೊಹಮ್ಮದ್ ತಸ್ವೀರ್(34) ಬಂಧಿತ ಆರೋಪಿಗಳು. ಜ್ಯುವೆಲ್ಲರಿ ಶಾಪ್ನ ಸಿಬ್ಬಂದಿ ಗಮನ ಬೇರೆಡೆಗೆ ಸೆಳೆದು 97.11 ಗ್ರಾಂ ತೂಕದ 6,00,000 ರೂ. ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿದ್ದರು. ಈ ಬಗ್ಗೆ ಪ್ರಗತಿ ಜ್ಯುವೆಲ್ಲರ್ಸ್ ಮಾಲೀಕ ವಿನೋದ್ ಶೇಟ್ ಉತ್ತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕಾರ್ಯಾಚರಣೆ ನಡೆಸಿ, ಮಂಗಳೂರು ಕೇಂದ್ರ ಮಾರುಕಟ್ಟೆ ಪರಿಸರದಲ್ಲಿ ಆರೋಪಿಗಳನ್ನು ಬಂಧಿಸಿ 6,00,000 ಮೌಲ್ಯದ ಚಿನ್ನಾಭರಣ, ಕೃತ್ಯಕ್ಕೆ ಬಳಸಿರುವ ಸ್ಕೂಟರ್, 2 ಮೊಬೈಲ್ ಫೋನ್ ಗಳು ವಶಪಡಿಸಿಕೊಂಡಿದ್ದಾರೆ.
Trending
- ಪುತ್ತೂರು: ಜೆಡಿಎಸ್ ಮಹಿಳಾ ಘಟಕದ ಸಭೆ: ಪಕ್ಷ ಸಂಘಟನೆಗೆ ಒತ್ತು, ಹೊಸ ಸದಸ್ಯರ ಸೇರ್ಪಡೆ
- ತುಳುನಾಡ ರಕ್ಷಣಾ ವೇದಿಕೆ ಬ್ರಹ್ಮಾವರ ತಾಲೂಕು ಸಭೆ: ಸಂಘಟನೆ ಬಲವರ್ಧನೆಗೆ ಒತ್ತು
- ಉಡುಪಿ : ತುಳುನಾಡ ರಕ್ಷಣಾ ವೇದಿಕೆ (ರಿ.)ಬೈರಂಪಳ್ಳಿ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ನಿಶಾಂತ್ ಪೂಜಾರಿ ಶಿರೂರು ಆಯ್ಕೆ
- ಸುಳ್ಯ: ಜೆಡಿಎಸ್ ಜಿಲ್ಲಾ ಪ್ರಮುಖ ಪದಾಧಿಕಾರಿಗಳ ಸಭೆ: ಸುಕುಮಾರ್ ಕೋಡ್ತುಗುಳಿ ಮರು ಆಯ್ಕೆ, ಕಡಬ ತಾಲೂಕಿಗೆ ಮೀರ್ ಸಾಹೇಬ್ ಅಧ್ಯಕ್ಷರಾಗಿ ನೇಮಕ,2028ರಲ್ಲಿ ಜೆಡಿಎಸ್ ಸರ್ಕಾರ ಅಧಿಕಾರಕ್ಕೆ ತರಲು ಈಗಿನಿಂದಲೇ ಪಣ ತೊಡಿ: ಜಾಕೆ ಮಾಧವ ಗೌಡ ಕರೆ
- ಬೆಂಗಳೂರು ನಗರ ಜೆಡಿಎಸ್ ಅಲ್ಪಸಂಖ್ಯಾತ ಘಟಕದ ಜಿಬಿಎ (GBA) ಉಪಾಧ್ಯಕ್ಷರಾಗಿ ಶೋಯಬ್ ಬಾಬಾ ಜಿ ನೇಮಕ
- ಮಂಗಳೂರು ವಿಧಾನಸಭಾ ಕ್ಷೇತ್ರ ಜೆಡಿಎಸ್ ಅಧ್ಯಕ್ಷರಾಗಿ ಪ್ರಕಾಶ್ ಶೆಟ್ಟಿ ಅಸೈಗೋಳಿ ನೇಮಕ,ಜಿಲ್ಲಾ ಅಧ್ಯಕ್ಷ ಜಾಕೆ ಮಾಧವ ಗೌಡ ಘೋಷಣೆ – ಪಕ್ಷ ಸಂಘಟನೆಗೆ ಹೊಸ ಚೈತನ್ಯ, ತಳಮಟ್ಟದಿಂದ ಬಲವರ್ಧನೆಗೆ ಆದ್ಯತೆ
- ಬಸ್ಸಿನಲ್ಲಿ ಕಾಲೇಜು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ: ಖಾಸಗಿ ಬಸ್ ಕಂಡಕ್ಟರ್ ಬಂಧನ
- ಕೆಎಸ್ಬಿಸಿ ಚುನಾವಣೆಯಲ್ಲಿ ಶ್ಯಾಮಲಾ ಭಂಡಾರಿ ಐತಿಹಾಸಿಕ ಗೆಲುವು; ಅವಳಿ ಜಿಲ್ಲೆಗಳ ಮೊದಲ ಮಹಿಳಾ ಪ್ರತಿನಿಧಿಯಾಗಿ ಹೊಸ ದಾಖಲೆ
