Thursday, April 25, 2024
spot_img
More

    Latest Posts

    ಮಂಗಳೂರು: ರೌಡಿಶೀಟರ್ ರಾಜಾ ಕೊಲೆ ಕೇಸ್ ; ಪೊಲೀಸರ ಮೇಲೆ ಹಲ್ಲೆ- ಪರಾರಿಗೆ ಯತ್ನಿಸಿದ ಆರೋಪಿಗಳಿಗೆ ಗುಂಡೇಟು

    ಮುಲ್ಕಿ: ರೌಡಿಶೀಟರ್ ರಾಜಾ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅರೋಪಿಗಳನ್ನು ಬಂಧಿಸಲು ಮಂಗಳೂರು ಸಿಸಿಬಿ ಪೊಲೀಸರಿಂದ ಇಂದು ಬೆಳ್ಳಂಬೆಳಗ್ಗೆ ಮಂಗಳೂರು ಹೊರವಲಯದ ಮುಲ್ಕಿ ಬಳಿ ಗುಂಡಿನ ದಾಳಿ ನಡೆದಿದೆ.

    ಬೆಳ್ಳಂಬೆಳಗ್ಗೆ ಆರೋಪಿಗಳ ಬಂಧನಕ್ಕೆ ತೆರಳಿದ್ದ ವೇಳೆ ಅವರು ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದರು. ಈ ವೇಳೆ ಸಿಸಿಬಿ ಇನ್ಸ್‌ಪೆಕ್ಟರ್ ಮಹೇಶ್ ಪ್ರಸಾದ್ ಮೂರು ಸುತ್ತು ಗಾಳಿಯಲ್ಲಿ ಫೈರಿಂಗ್ ನಡೆಸಿದ್ದು ಆರೋಪಿಗಳ ಕಾಲಿಗೆ ಗುಂಡೇಟು ಬಿದ್ದಿದೆ.

    ಅರ್ಜುನ್ ಮೂಡುಶೆಡ್ಡೆ, ಮನೋಜ್ ಅಲಿಯಾಸ್ ಬಿಂದಾಸ್ ಮನೋಜ್ ಬಂಧಿತ ಆರೋಪಿಗಳು.

    ಘಟನೆಯಲ್ಲಿ ಪಿಎಸ್‌ಐ ನಾಗೇಂದ್ರ, ಎಎಸ್‌ಐ ಡೇವಿಡ್, ಎಎಚ್‌ಸಿ ಸುಧೀರ್ ಪೂಜಾರಿ ಮೇಲೆ ಕೂಡಾ ಹಲ್ಲೆಗೆ ಯತ್ನ ನಡೆದಿತ್ತು.

    ಇವರಿಗೆ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಅಷ್ಟೇ ಅಲ್ಲದೆ ಪೊಲೀಸರ ವಾಹನ ಕೂಡಾ ಹಾನಿಯಾಗಿದೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss