ಮಂಗಳೂರು : ಪಣಂಬೂರಿನ ನವಮಂಗಳೂರು ಬಂದರು ಪ್ರಾಧಿಕಾರ (ಎನ್ಎಂಪಿಎ)ದಲ್ಲಿ ತುರ್ತು ಕ್ರಮವಾಗಿ, ಅರೇಬಿಯನ್ ಸಮುದ್ರದಲ್ಲಿ ಬೆಂಕಿ ಹೊತ್ತಿಕೊಂಡ ಸಿಂಗಾಪುರದ ಸರಕು ಸಾಗಣೆ ಹಡಗಿನಿಂದ ರಕ್ಷಿಸಲ್ಪಟ್ಟ 18 ಸಿಬ್ಬಂದಿಯನ್ನು ರಕ್ಷಿಸಿದ್ದುಅವರಲ್ಲಿ ಐವರು ಗಾಯಗೊಂಡಿದ್ದಾರೆ, ಅವರಲ್ಲಿ ಇಬ್ಬರು ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಕೊಲಂಬೊದಿಂದ ಮುಂಬೈಗೆ ತೆರಳುತ್ತಿದ್ದ ಎಂವಿ ವಾನ್ ಹೈ 503 ಎಂಬ ಹಡಗು, ಜೂನ್ 9 ರ ಸೋಮವಾರದಂದು ಕೇರಳದ ಬೇಪೋರ್ ಕರಾವಳಿಯಿಂದ ಸುಮಾರು 78 ನಾಟಿಕಲ್ ಮೈಲುಗಳಷ್ಟು ದೂರದಲ್ಲಿ ದೊಡ್ಡ ಬೆಂಕಿ ಅವಘಡ ಸಂಭವಿಸಿದೆ ಎಂದು ವರದಿಯಾಗಿದೆ ಭಾರತೀಯ ನೌಕಾಪಡೆಯ ಹಡಗು ಐಎನ್ಎಸ್ ಸೂರತ್ ರಕ್ಷಣಾ ಕಾರ್ಯಾಚರಣೆಯನ್ನು ನಡೆಸಿತು ಮತ್ತು ಸೋಮವಾರ ರಾತ್ರಿ 10 ಗಂಟೆ ಸುಮಾರಿಗೆ ನವಮಂಗಳೂರು ಬಂದರಿಗೆ ಆಗಮಿಸಿದೆ.