ಮಂಗಳೂರು/ಪುತ್ತೂರು: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ದರ್ಶನ ಮುಗಿಸಿ ಮಂಗಳೂರಿಗೆ ವಾಪಸಾಗುತ್ತಿದ್ದ ಪುತ್ತೂರು ಮೂಲದ ಉದ್ಯಮಿಯೊಬ್ಬರು ಬಳ್ಳಾರಿ ಬಸ್ ನಿಲ್ದಾಣದಲ್ಲಿ ಹೃದಯಾಘಾತಕ್ಕೊಳಗಾಗಿ ಅಕಾಲಿಕವಾಗಿ ನಿಧನರಾದ ಘಟನೆ ನಡೆದಿದೆ.
ಮೃತರನ್ನು ಪುತ್ತೂರಿನ ಬೆಳ್ಳಿಯೂರುಕಟ್ಟೆ ನಿವಾಸಿ ನಿವಾಸಿ ಪ್ರಸಾದ್ ಮಂಗಳೂರು (44) ಎಂದು ಗುರುತಿಸಲಾಗಿದೆ.
ಆಗಸ್ಟ್ 9ರಂದು ಮಂಗಳೂರಿನಿಂದ ಮಂತ್ರಾಲಯಕ್ಕೆ ತೆರಳಿದ್ದ ಅವರು, ದರ್ಶನ ಮುಗಿಸಿ ವಾಪಸಾಗುವ ವೇಳೆ ಆಗಸ್ಟ್ 10ರಂದು ರಾತ್ರಿ ಬಸ್ ಮೂಲಕ ಬಳ್ಳಾರಿಗೆ ಆಗಮಿಸಿದ್ದರು. ರಾತ್ರಿ ಸುಮಾರು 2.30ರ ವೇಳೆಗೆ ಬಸ್ನಿಂದ ಕೆಳಗಿಳಿದ ಅವರು, ಬಳ್ಳಾರಿ ಬಸ್ ನಿಲ್ದಾಣದ ಆಸನದಲ್ಲಿ ಕುಳಿತಿದ್ದರು.
ಈ ವೇಳೆ ಅವರಿಗೆ ಏಕಾಏಕಿ ಹೃದಯಾಘಾತ ಸಂಭವಿಸಿದ್ದು, ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಪ್ರಯತ್ನ ನಡೆದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಘಟನೆ ಗಮನಿಸಿದ ಸಹಪ್ರಯಾಣಿಕರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಮರಣವನ್ನು ದೃಢಪಡಿಸಿಕೊಂಡಿದ್ದಾರೆ.
ಬಳಿಕ ಮೃತರ ಪುತ್ರ, ಪಿಯುಸಿ ವಿದ್ಯಾರ್ಥಿ ದೀಪಕ್ ಅವರ ಮೊಬೈಲ್ಗೆ ಸಂದೇಶ ರವಾನಿಸಿದ್ದಾರೆ. ಕಾಲೇಜು ಅವಧಿಯಲ್ಲಿ ಫೋನ್ ಸೈಲೆಂಟ್ ಮೋಡ್ನಲ್ಲಿದ್ದ ಕಾರಣ ಮಧ್ಯಾಹ್ನದ ವೇಳೆಗೆ ಸಂದೇಶವನ್ನು ಗಮನಿಸಿದ ಕುಟುಂಬಸ್ಥರು ತಕ್ಷಣವೇ ಸ್ಥಳಕ್ಕೆ ತೆರಳಿದ್ದಾರೆ.
ಮೃತರು ಪತ್ನಿ ವಿದ್ಯಾ ಶೆಟ್ಟಿ, ಪುತ್ರ, ತಾಯಿ ಹಾಗೂ ಸಹೋದರರನ್ನು ಅಗಲಿದ್ದಾರೆ
Trending
- ಹಿರಿಯರ ಜೀವನ ಪದ್ಧತಿ, ಸಂಸ್ಕೃತಿ, ಸಂಪ್ರದಾಯ ಇಂದಿನ ಯುವಪೀಳಿಗೆಗೆ ಉಳಿಸಿ ಬೆಳೆಸಬೇಕಾಗಿದೆ: ಅರ್ಪಿತಾ ಪ್ರಶಾಂತ್ ಶೆಟ್ಟಿ
- ಮಂಗಳೂರು ಯಾತ್ರೆ ಮುಗಿಸಿ ಮರಳುತ್ತಿದ್ದ ಪುತ್ತೂರು ಮೂಲದ ಉದ್ಯಮಿ ಬಳ್ಳಾರಿಯಲ್ಲಿ ಹೃದಯಾಘಾತದಿಂದ ನಿಧನ
- ತಂಬಾಕು
- ದೆಹಲಿಯಲ್ಲಿ ಸಂಭ್ರಮದ ಆಟಿ ಅಮಾವಾಸ್ಯೆ ಆಚರಣೆ,ತುಳುವರಿಂದ ಆಟಿ ಕಷಾಯ ಹಾಗೂ ಮೆಂತ್ಯ ಗಂಜಿ ವಿತರಣೆ
- ಉಡುಪಿಯಲ್ಲಿ ತುಳುನಾಡ ರಕ್ಷಣಾ ವೇದಿಕೆಯಿಂದ ಆಟಿ ಅಮಾವಾಸ್ಯೆ ಪ್ರಯುಕ್ತ ಪಾಲೆ ಕತ್ತೆ ಕಷಾಯ ವಿತರಣೆ,3 ಸಾವಿರಕ್ಕೂ ಅಧಿಕ ಮಂದಿ ಕಷಾಯ ಸೇವನೆ; 17 ವರ್ಷಗಳ ಪರಂಪರೆ ಮುಂದುವರಿಕೆ
- ಕೆನರಾ ಕಾಲೇಜಿನಲ್ಲಿ ಸಡಗರದಿಂದ ‘ಆಟಿಡೊಂಜಿ ದಿನ’ ಆಚರಣೆ ತುಳುನಾಡಿನ ಸಂಸ್ಕೃತಿ, ಪರಂಪರೆ ಮತ್ತು ಆಟಿ ತಿಂಗಳ ವೈಶಿಷ್ಟ್ಯ ಪರಿಚಯ
- ಆಚರಣೆಗಳನ್ನು ಸಾಮೂಹಿಕವಾಗಿ ಆಚರಿಸಿದಾಗ ಮಾತ್ರ ಮುಂದಿನ ಪೀಳಿಗೆಗೆ ವರ್ಗಾವಣೆ ಮಾಡಲು ಸಾಧ್ಯ- ಆಟಿ ಕಷಾಯ ಮತ್ತು ಗಂಜಿ ಹಂಚುವ ಕಾರ್ಯಕ್ರಮದಲ್ಲಿ ಡಾ ಅಣ್ಣಯ್ಯ ಕುಲಾಲ್ ಉಳ್ತೂರು.
- ತುಳುನಾಡಿನ ಸಂಪ್ರದಾಯ, ಆರೋಗ್ಯದ ಪರಂಪರೆಯ ಪ್ರತೀಕ ‘ಆಟಿ ಕಷಾಯ’ಡಿಂಕಿ ಡೈನ್–ತುಳುವ ಬೊಳ್ಳಿ ಪ್ರತಿಷ್ಠಾನದಿಂದ ಆಟಿ ಅಮಾವಾಸ್ಯೆ ವಿಶೇಷ ಕಾರ್ಯಕ್ರಮ

