ಮಂಗಳೂರು/ಪುತ್ತೂರು: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ದರ್ಶನ ಮುಗಿಸಿ ಮಂಗಳೂರಿಗೆ ವಾಪಸಾಗುತ್ತಿದ್ದ ಪುತ್ತೂರು ಮೂಲದ ಉದ್ಯಮಿಯೊಬ್ಬರು ಬಳ್ಳಾರಿ ಬಸ್ ನಿಲ್ದಾಣದಲ್ಲಿ ಹೃದಯಾಘಾತಕ್ಕೊಳಗಾಗಿ ಅಕಾಲಿಕವಾಗಿ ನಿಧನರಾದ ಘಟನೆ ನಡೆದಿದೆ.
ಮೃತರನ್ನು ಪುತ್ತೂರಿನ ಬೆಳ್ಳಿಯೂರುಕಟ್ಟೆ ನಿವಾಸಿ ನಿವಾಸಿ ಪ್ರಸಾದ್ ಮಂಗಳೂರು (44) ಎಂದು ಗುರುತಿಸಲಾಗಿದೆ.
ಆಗಸ್ಟ್ 9ರಂದು ಮಂಗಳೂರಿನಿಂದ ಮಂತ್ರಾಲಯಕ್ಕೆ ತೆರಳಿದ್ದ ಅವರು, ದರ್ಶನ ಮುಗಿಸಿ ವಾಪಸಾಗುವ ವೇಳೆ ಆಗಸ್ಟ್ 10ರಂದು ರಾತ್ರಿ ಬಸ್ ಮೂಲಕ ಬಳ್ಳಾರಿಗೆ ಆಗಮಿಸಿದ್ದರು. ರಾತ್ರಿ ಸುಮಾರು 2.30ರ ವೇಳೆಗೆ ಬಸ್ನಿಂದ ಕೆಳಗಿಳಿದ ಅವರು, ಬಳ್ಳಾರಿ ಬಸ್ ನಿಲ್ದಾಣದ ಆಸನದಲ್ಲಿ ಕುಳಿತಿದ್ದರು.
ಈ ವೇಳೆ ಅವರಿಗೆ ಏಕಾಏಕಿ ಹೃದಯಾಘಾತ ಸಂಭವಿಸಿದ್ದು, ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಪ್ರಯತ್ನ ನಡೆದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಘಟನೆ ಗಮನಿಸಿದ ಸಹಪ್ರಯಾಣಿಕರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಮರಣವನ್ನು ದೃಢಪಡಿಸಿಕೊಂಡಿದ್ದಾರೆ.
ಬಳಿಕ ಮೃತರ ಪುತ್ರ, ಪಿಯುಸಿ ವಿದ್ಯಾರ್ಥಿ ದೀಪಕ್ ಅವರ ಮೊಬೈಲ್ಗೆ ಸಂದೇಶ ರವಾನಿಸಿದ್ದಾರೆ. ಕಾಲೇಜು ಅವಧಿಯಲ್ಲಿ ಫೋನ್ ಸೈಲೆಂಟ್ ಮೋಡ್ನಲ್ಲಿದ್ದ ಕಾರಣ ಮಧ್ಯಾಹ್ನದ ವೇಳೆಗೆ ಸಂದೇಶವನ್ನು ಗಮನಿಸಿದ ಕುಟುಂಬಸ್ಥರು ತಕ್ಷಣವೇ ಸ್ಥಳಕ್ಕೆ ತೆರಳಿದ್ದಾರೆ.
ಮೃತರು ಪತ್ನಿ ವಿದ್ಯಾ ಶೆಟ್ಟಿ, ಪುತ್ರ, ತಾಯಿ ಹಾಗೂ ಸಹೋದರರನ್ನು ಅಗಲಿದ್ದಾರೆ
Trending
- ತುಳು ಭಾಷೆಗೆ ಅಧಿಕೃತ ಮಾನ್ಯತೆ: ವಿಶ್ವದಾದ್ಯಂತ ನೆಲೆಸಿರುವ ತುಳುವರ ಕಾತರ ಸೆ.18ರ ಮಂಗಳೂರು ಸಚಿವ ಸಂಪುಟ ಸಭೆಯಲ್ಲಿ ಸುದಿನದ ನಿರ್ಧಾರ ಹೊರಬರಲಿ: ಪುರುಷೋತ್ತಮ್ ಚೇಂಡ್ಲಾ
- ನಾಗರಿಕ ವೇದಿಕೆ ನರ್ನಾಡು–ಮದಗ ಲೇಔಟ್ನ 4ನೇ ವರ್ಷದ ಗಣೇಶೋತ್ಸವ ವಿಜೃಂಭಣೆಯಿಂದ ಧಾರ್ಮಿಕ ಸಭೆ, ಸಾಂಸ್ಕೃತಿಕ ಕಾರ್ಯಕ್ರಮ, ಸಮಾಜ ಸೇವಕರಿಗೆ ಸನ್ಮಾನ
- ವಿಘ್ನವಿನಾಯಕನ ಆಗಮನಕ್ಕೆ ತುಳುನಾಡಿನಲ್ಲಿ ಕಂಗೊಳಿಸಿದೆ ಮನೆಮನೆಗಳಲ್ಲಿ ಭಕ್ತಿ–ಮಂಟಪಗಳಲ್ಲಿ ಸಂಭ್ರಮ; ಶಾಂತಿ, ಸೌಹಾರ್ದಕ್ಕೆ ಪೊಲೀಸ್ ಕಟ್ಟೆಚ್ಚರ
- ಕದ್ರಿ ಮಾರ್ಕೆಟ್ನಲ್ಲಿ ಕೊಂಕಣ್ ಕ್ಯಾಥೊಲಿಕ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಪ್ರಧಾನ ಶಾಖೆ ಉದ್ಘಾಟನೆ ಗ್ರಾಹಕರಿಗೆ ಸುಲಭ ಹಣಕಾಸು ಸೇವೆ ಒದಗಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ
- ಮಾದಕ ವ್ಯಸನದ ವಿರುದ್ಧ ಮಂಗಳೂರು ಪೊಲೀಸರ ಸಮರ: 9 ಮಂದಿ ಬಂಧನ
- ಸರಕಾರಿ ಜಮೀನಿನಲ್ಲಿ ಅಕ್ರಮವಾಗಿ ಬಂಡೆ ಸ್ಫೋಟ: ಇಬ್ಬರ ಬಂಧನ
- ಡಾ.ಎಂ ಫಾರೂಕ್ ಚಂದ್ರನಗರ ಇವರಿಗೆ ಸುನ್ನಿ ಯುವ ಸಂಘ, ಕೆ.ಎಂ.ಜೆ, ಎಸ್.ಎಸ್.ಎಫ್ ಮಜೂರು ಘಟಕದ ವತಿಯಿಂದ ಸನ್ಮಾನ
- ಸತೀಶ್ ಜಾರಕಿಹೊಳಿ ಆಪ್ತರ ನಿವಾಸ, ಕಚೇರಿಗಳ ಮೇಲೆ ಇ.ಡಿ. ಶೋಧ ₹3.3 ಕೋಟಿ ಲೆಕ್ಕಕ್ಕೆ ಬಾರದ ನಗದು, ₹15 ಲಕ್ಷ ಮೌಲ್ಯದ ವಿದೇಶಿ ಕರೆನ್ಸಿ ವಶ

