ಭಾರತ ಜಾತ್ಯಾತೀತ ರಾಷ್ಟ್ರ. ಭಾರತದಲ್ಲಿ ಎಲ್ಲ ಪ್ರಜೆಗಳಿಗೂ ಸಮಾನ ಹಕ್ಕಿದೆ. ಶಿಕ್ಷಣ, ಸಮಾನತೆ, ವಾಕ್ ಸ್ವಾತಂತ್ರ್ಯ ಹಕ್ಕುಗಳು, ಇಚ್ಛೆಯ ಧರ್ಮವನ್ನು ಸ್ವೀಕರಿಸುವ ಹಕ್ಕುಗಳು, ಎಲ್ಲಿ ಬೇಕಾದರೂ ಜೀವಿಸುವ ಹಕ್ಕುಗಳು, ಭಾರತದ ಪ್ರಜೆ ದೇಶದ ಯಾವುದೇ ಭಾಗದಲ್ಲಿ ಬೇಕಾದರೂ ಜೀವನ ರೂಪಿಸಿಕೊಳ್ಳಲು ಹಕ್ಕು ಹೀಗೆ ಇಷ್ಟೆಲ್ಲ ಸ್ವತಂತ್ರ ಹಕ್ಕುಗಳು ಎಲ್ಲರಿಗೂ ಇರುವುದು ಭಾರತದಲ್ಲಿ 1950 ರ ಜನವರಿ 26 ರಂದು ಜಾರಿಗೆ ಬಂದ ಬೃಹತ್ ಸಂವಿಧಾನದಿಂದ. ಆದ್ದರಿಂದ ಪ್ರತಿ ವರ್ಷವು ಸಹ ಈ ದಿನವನ್ನು ಭಾರತೀಯ ಪ್ರಜೆಗಳು ಎಲ್ಲೇ ಇದ್ದರೂ ಸಹ ನೆನೆಯಬೇಕಾಗಿದೆ. ಹಾಗೆಯೇ ಆಚರಣೆ ಮಾಡಬೇಕಿದೆ. ಕಾನೂನಾತ್ಮಕವಾಗಿ ಈ ದಿನವನ್ನು ರಾಷ್ಟ್ರದೆಲ್ಲೆಡೆ ರಕ್ಷಣಾ ಪಡೆಗಳು ಪರೇಡ್ ಮಾಡುವ ಮೂಲಕ, ಶಾಲೆಗಳು, ಸರ್ಕಾರಿ ಕಚೇರಿಗಳಲ್ಲಿ ಧ್ವಜಾರೋಹಣ ಮಾಡುವ ಮೂಲಕ ಸಂವಿಧಾನ ಜಾರಿಗೆ ಬಂದ ದಿನವನ್ನು ಗಣರಾಜ್ಯೋತ್ಸವದ ಆಚರಣೆ ನಡೆಯುತ್ತದೆ. ದೇಶದಾದ್ಯಂತ ಪ್ರತಿಯೊಬ್ಬ ರಿಗೂ ಮಹತ್ವದ ದಿನವಾಗಿದೆ ಎಂದು ತುಳುನಾಡ ರಕ್ಷಣಾ ವೇದಿಕೆ ಕೇಂದ್ರೀಯ ಸಂಘಟನಾ ಕಾರ್ಯದರ್ಶಿ ಪ್ರಶಾಂತ್ ಭಟ್ ಕಡಬ ಅವರು ತುಳುನಾಡ ರಕ್ಷಣಾ ವೇದಿಕೆ ಕೇಂದ್ರ ಕಚೇರಿಯಲ್ಲಿ ಗಣರಾಜ್ಯೋತ್ಸವ ಆಚರಣೆ ಅಂಗವಾಗಿ ಡಾ .ಬಿ. ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ಅರ್ಚನೆ ಮಾಡಿ ಮಾತನಾಡಿದರು
Trending
- ದುಬೈನಲ್ಲಿ ‘ಗಮ್ಮತ್ ಕಲಾವಿದೆರ್’ ನಾಟಕ ತಂಡದ 14ನೇ ವಾರ್ಷಿಕೋತ್ಸವ – ‘ಪೋನಗ ಕೊನೊಪರಾ..?’ ನಾಟಕದ ಪ್ರಥಮ ಪ್ರದರ್ಶನಕ್ಕೆ ಭರ್ಜರಿ ಪ್ರತಿಕ್ರಿಯೆ
- ಖಚಿತ ಮಾಹಿತಿ ಮೇರೆಗೆ ದಾಳಿ – ಮೂಡುಬಿದಿರೆಯಲ್ಲಿ ವೇಶ್ಯಾವಾಟಿಕೆ ಅಡ್ಡೆ ಭೇದಿಸಿದ ಪೊಲೀಸರು ನಾಲ್ವರು ಬಂಧನ | ಇಬ್ಬರು ಅಪ್ರಾಪ್ತ ಬಾಲಕಿಯರ ರಕ್ಷಣೆ
- ಕಾರ್ಕಳ ಮಾಜಿ ಶಾಸಕ, ದಿ. ಗೋಪಾಲ ಭಂಡಾರಿ ಅವರ ಪುತ್ರ ಸುದೀಪ್ ಭಂಡಾರಿ (40) ಆತ್ಮಹತ್ಯೆ
- “ಕಾಂತಾರ” ಸಿನಿಮಾದಲ್ಲಿ ದೈವಗಳಿಗೆ ಅಪಚಾರ ಆಗಿಲ್ಲ: ಐಕಳ ಹರೀಶ್ ಶೆಟ್ಟಿ ಸ್ಪಷ್ಟನೆ
- ಬಂಟರ ಸಂಘ (ರಿ.) ಬಜಪೆ ವಲಯದ ಅಧ್ಯಕ್ಷರಾಗಿ ಶ್ರೀ ವೇಣುಗೋಪಾಲ್ ಶೆಟ್ಟಿ ಆಯ್ಕೆ
- ಕಂಬಳಕ್ಕೆ 2 ಕೋಟಿ ಅನುದಾನ ಮೀಸಲು : ಐಪಿಎಲ್ ಮಾದರಿಯಲ್ಲಿ ಕಂಬಳ ಆಯೋಜನೆ ಚಿಂತನೆ
- ಮಂಗಳೂರಲ್ಲಿ ಖ್ಯಾತ ಮಲಯಾಳಂ ನಟ ಜಯಕೃಷ್ಣನ್ ಬಂಧನಟೆರರಿಸ್ಟ್ ಎಂದು ಕ್ಯಾಬ್ ಚಾಲಕನಿಗೆ ಅವಮಾನ– ಉರ್ವಾ ಠಾಣೆಯಲ್ಲಿ ಪ್ರಕರಣ ದಾಖಲು
- ಕಾಪು ಬೀಚ್ನಲ್ಲಿ ಅಪ್ರಾಪ್ತ ಬಾಲಕನಿಗೆ ಮುತ್ತು ನೀಡಿದ ಪ್ರಕರಣ: 47 ವರ್ಷದ ವ್ಯಕ್ತಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲು