ಭಾರತ ಜಾತ್ಯಾತೀತ ರಾಷ್ಟ್ರ. ಭಾರತದಲ್ಲಿ ಎಲ್ಲ ಪ್ರಜೆಗಳಿಗೂ ಸಮಾನ ಹಕ್ಕಿದೆ. ಶಿಕ್ಷಣ, ಸಮಾನತೆ, ವಾಕ್ ಸ್ವಾತಂತ್ರ್ಯ ಹಕ್ಕುಗಳು, ಇಚ್ಛೆಯ ಧರ್ಮವನ್ನು ಸ್ವೀಕರಿಸುವ ಹಕ್ಕುಗಳು, ಎಲ್ಲಿ ಬೇಕಾದರೂ ಜೀವಿಸುವ ಹಕ್ಕುಗಳು, ಭಾರತದ ಪ್ರಜೆ ದೇಶದ ಯಾವುದೇ ಭಾಗದಲ್ಲಿ ಬೇಕಾದರೂ ಜೀವನ ರೂಪಿಸಿಕೊಳ್ಳಲು ಹಕ್ಕು ಹೀಗೆ ಇಷ್ಟೆಲ್ಲ ಸ್ವತಂತ್ರ ಹಕ್ಕುಗಳು ಎಲ್ಲರಿಗೂ ಇರುವುದು ಭಾರತದಲ್ಲಿ 1950 ರ ಜನವರಿ 26 ರಂದು ಜಾರಿಗೆ ಬಂದ ಬೃಹತ್ ಸಂವಿಧಾನದಿಂದ. ಆದ್ದರಿಂದ ಪ್ರತಿ ವರ್ಷವು ಸಹ ಈ ದಿನವನ್ನು ಭಾರತೀಯ ಪ್ರಜೆಗಳು ಎಲ್ಲೇ ಇದ್ದರೂ ಸಹ ನೆನೆಯಬೇಕಾಗಿದೆ. ಹಾಗೆಯೇ ಆಚರಣೆ ಮಾಡಬೇಕಿದೆ. ಕಾನೂನಾತ್ಮಕವಾಗಿ ಈ ದಿನವನ್ನು ರಾಷ್ಟ್ರದೆಲ್ಲೆಡೆ ರಕ್ಷಣಾ ಪಡೆಗಳು ಪರೇಡ್ ಮಾಡುವ ಮೂಲಕ, ಶಾಲೆಗಳು, ಸರ್ಕಾರಿ ಕಚೇರಿಗಳಲ್ಲಿ ಧ್ವಜಾರೋಹಣ ಮಾಡುವ ಮೂಲಕ ಸಂವಿಧಾನ ಜಾರಿಗೆ ಬಂದ ದಿನವನ್ನು ಗಣರಾಜ್ಯೋತ್ಸವದ ಆಚರಣೆ ನಡೆಯುತ್ತದೆ. ದೇಶದಾದ್ಯಂತ ಪ್ರತಿಯೊಬ್ಬ ರಿಗೂ ಮಹತ್ವದ ದಿನವಾಗಿದೆ ಎಂದು ತುಳುನಾಡ ರಕ್ಷಣಾ ವೇದಿಕೆ ಕೇಂದ್ರೀಯ ಸಂಘಟನಾ ಕಾರ್ಯದರ್ಶಿ ಪ್ರಶಾಂತ್ ಭಟ್ ಕಡಬ ಅವರು ತುಳುನಾಡ ರಕ್ಷಣಾ ವೇದಿಕೆ ಕೇಂದ್ರ ಕಚೇರಿಯಲ್ಲಿ ಗಣರಾಜ್ಯೋತ್ಸವ ಆಚರಣೆ ಅಂಗವಾಗಿ ಡಾ .ಬಿ. ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ಅರ್ಚನೆ ಮಾಡಿ ಮಾತನಾಡಿದರು
Trending
- ಬೀದಿ ನಾಯಿಗಳ ಕಾಟ: ರಾಜ್ಯ ಸರ್ಕಾರಗಳು ಹೊಣೆಗಾರಿಕೆ ವಹಿಸಬೇಕು – ಸುಪ್ರೀಂ ಕೋರ್ಟ್ ಕಠಿಣ ಎಚ್ಚರಿಕೆ
- ಸ್ವಾಮಿ ವಿವೇಕಾನಂದ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿಗೆ ಡಾ. ಮಾಲತಿ ಶೆಟ್ಟಿ ಮಾಣೂರು ಆಯ್ಕೆ
- ಲೈಂಗಿಕ ದೌರ್ಜನ್ಯಕ್ಕೆ ನಿರಾಕರಿಸಿದ ಟೆಕ್ಕಿ ಶರ್ಮಿಳಾ ಹತ್ಯೆ: ಬೆಂಕಿ ಅವಘಡದ ಹಿಂದೆ ಭೀಕರ ಸತ್ಯ ಬಯಲು | 18 ವರ್ಷದ ಆರೋಪಿಯ ಬಂಧನ
- ಸುನಂದ ಕೋಟ್ಯಾನ್ ಅವರಿಗೆ ಕರುನಾಡ ಕಾಯಕ ಯೋಗಿ ರಾಜ್ಯ ಪ್ರಶಸ್ತಿ
- ಚಿಕ್ಕಮಗಳೂರು | ಹಣದಾಸೆಗೆ ಹೆತ್ತ ಮಗಳನ್ನೇ ದಂಧೆಗೆ ದೂಡಿದ ಪಾಪಿ ತಂದೆ – ಬೀರೂರಿನಲ್ಲಿ ಭಯಾನಕ ಪ್ರಕರಣ ಬಹಿರಂಗ
- ಕಲಾ ಪರ್ಬ” ಚಿತ್ರ–ಶಿಲ್ಪ–ಸಾಂಸ್ಕೃತಿಕ ಮೇಳವು ಜ.9ರಿಂದ 11ರವರೆಗೆ ಕದ್ರಿ ಪಾರ್ಕ್ನಲ್ಲಿ
- ಕಾರ್ಕಳ ಪೊಲೀಸ್ ಉಪ ವಿಭಾಗದ ಡಿವೈಎಸ್ಪಿಯಾಗಿ ಬೆಳ್ಳಿಯಪ್ಪ ಕೆ. ಯು ನೇಮಕ

