ಭಾರತ ಜಾತ್ಯಾತೀತ ರಾಷ್ಟ್ರ. ಭಾರತದಲ್ಲಿ ಎಲ್ಲ ಪ್ರಜೆಗಳಿಗೂ ಸಮಾನ ಹಕ್ಕಿದೆ. ಶಿಕ್ಷಣ, ಸಮಾನತೆ, ವಾಕ್ ಸ್ವಾತಂತ್ರ್ಯ ಹಕ್ಕುಗಳು, ಇಚ್ಛೆಯ ಧರ್ಮವನ್ನು ಸ್ವೀಕರಿಸುವ ಹಕ್ಕುಗಳು, ಎಲ್ಲಿ ಬೇಕಾದರೂ ಜೀವಿಸುವ ಹಕ್ಕುಗಳು, ಭಾರತದ ಪ್ರಜೆ ದೇಶದ ಯಾವುದೇ ಭಾಗದಲ್ಲಿ ಬೇಕಾದರೂ ಜೀವನ ರೂಪಿಸಿಕೊಳ್ಳಲು ಹಕ್ಕು ಹೀಗೆ ಇಷ್ಟೆಲ್ಲ ಸ್ವತಂತ್ರ ಹಕ್ಕುಗಳು ಎಲ್ಲರಿಗೂ ಇರುವುದು ಭಾರತದಲ್ಲಿ 1950 ರ ಜನವರಿ 26 ರಂದು ಜಾರಿಗೆ ಬಂದ ಬೃಹತ್ ಸಂವಿಧಾನದಿಂದ. ಆದ್ದರಿಂದ ಪ್ರತಿ ವರ್ಷವು ಸಹ ಈ ದಿನವನ್ನು ಭಾರತೀಯ ಪ್ರಜೆಗಳು ಎಲ್ಲೇ ಇದ್ದರೂ ಸಹ ನೆನೆಯಬೇಕಾಗಿದೆ. ಹಾಗೆಯೇ ಆಚರಣೆ ಮಾಡಬೇಕಿದೆ. ಕಾನೂನಾತ್ಮಕವಾಗಿ ಈ ದಿನವನ್ನು ರಾಷ್ಟ್ರದೆಲ್ಲೆಡೆ ರಕ್ಷಣಾ ಪಡೆಗಳು ಪರೇಡ್ ಮಾಡುವ ಮೂಲಕ, ಶಾಲೆಗಳು, ಸರ್ಕಾರಿ ಕಚೇರಿಗಳಲ್ಲಿ ಧ್ವಜಾರೋಹಣ ಮಾಡುವ ಮೂಲಕ ಸಂವಿಧಾನ ಜಾರಿಗೆ ಬಂದ ದಿನವನ್ನು ಗಣರಾಜ್ಯೋತ್ಸವದ ಆಚರಣೆ ನಡೆಯುತ್ತದೆ. ದೇಶದಾದ್ಯಂತ ಪ್ರತಿಯೊಬ್ಬ ರಿಗೂ ಮಹತ್ವದ ದಿನವಾಗಿದೆ ಎಂದು ತುಳುನಾಡ ರಕ್ಷಣಾ ವೇದಿಕೆ ಕೇಂದ್ರೀಯ ಸಂಘಟನಾ ಕಾರ್ಯದರ್ಶಿ ಪ್ರಶಾಂತ್ ಭಟ್ ಕಡಬ ಅವರು ತುಳುನಾಡ ರಕ್ಷಣಾ ವೇದಿಕೆ ಕೇಂದ್ರ ಕಚೇರಿಯಲ್ಲಿ ಗಣರಾಜ್ಯೋತ್ಸವ ಆಚರಣೆ ಅಂಗವಾಗಿ ಡಾ .ಬಿ. ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ಅರ್ಚನೆ ಮಾಡಿ ಮಾತನಾಡಿದರು
Trending
- ತುಳುನಾಡ ರಕ್ಷಣಾ ವೇದಿಕೆ ಉಡುಪಿ ಕಚೇರಿಯಲ್ಲಿ ಶಶಿ ಬಂಡಿಮಾರ್ ಶ್ರದ್ಧಾಂಜಲಿ ಕಾರ್ಯಕ್ರಮ, ಶಶಿ ಬಂಡಿಮಾರ್ ರವರ ಕನಸು ನನಾಸಾಗಿಸಲು ಪ್ರಯತ್ನಿಸಿ – ಡಾ ಆಕಾಶ್ ರಾಜ್ ಜೈನ್
- ಫೆಬ್ರವರಿ 12 ರಂದು ಸುಳ್ಯ ತಾಲೂಕು ಕಛೇರಿ, ಸುಳ್ಯ ದಲ್ಲಿ “ಲೋಕಾಯುಕ್ತ ಜನ ಸಂಪರ್ಕ ಸಭೆ”
- ಪತ್ರಕರ್ತ ಶಶಿ ಬಂಡಿಮಾರ್ ರಿಗೆ ತುಳು ಸಂಘಟನೆಗಳಿಂದ ಶ್ರದ್ಧಾಂಜಲಿ, ತುಳುವಿನ ಬಗ್ಗೆ ಅಪಾರ ಕಾಳಜಿ ಹೊಂದಿದ್ದ ಪ್ರಾಮಾಣಿಕ ವ್ಯಕ್ತಿ ಶಶಿ ಬಂಡಿಮಾರ್ : ತಾರಾನಾಥ ಗಟ್ಟಿ
- ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಶ್ರೀ ಗುರುದೇವ ಅಧ್ಯಾತ್ಮ ಕೇಂದ್ರ ಲೋಕಾರ್ಪಣೆ, ಶ್ರೀ ಒಡಿಯೂರು ರಥೋತ್ಸವ ತುಳುನಾಡ ಜಾತ್ರೆ
- ಮಂಗಳೂರು ಮಹಾನಗರ ಪಾಲಿಕೆಯಲ್ಲಿ ವಿನೂತನ ರೀತಿಯಲ್ಲಿ ವ್ಯಾಪಾರ ಪರವಾನಿಗೆ ಅದಾಲತ್
- ಉಡುಪಿ ಜಿಲ್ಲಾ ಸಹಕಾರ ಯೂನಿಯನ್ : ಅಧ್ಯಕ್ಷರಾಗಿ ಜಯಕರ ಶೆಟ್ಟಿ ಇಂದ್ರಾಳಿ
- ತುಳು ಭಾಷೆಯ ಸ್ಥಾನಮಾನಕ್ಕೆ ಶ್ರಮಿಸಿದ ಪತ್ರಕರ್ತ ಶಶಿ ಬಂಡಿಮಾರ್ ರವರಿಗೆ ಪತ್ರಿಕಾ ಭವನ ಟ್ರಸ್ಟ್ ವತಿಯಿಂದ ಸಂತಾಪ ಸೂಚಕ ಸಭೆ
- ಫೆ.7 : ತುಳು ಭವನದಲ್ಲಿ ಟೈಮ್ಸ್ ಆಫ್ ಕುಡ್ಲ ಪತ್ರಿಕೆ ಸಂಸ್ಥಾಪಕ ತುಳುವ ನೇಸರ ಶಶಿ ಆರ್ ಬಂಡಿಮಾರ್ ರವರ ಶ್ರದ್ದಾಂಜಲಿ ಸಭೆ