Saturday, April 20, 2024
spot_img
More

    Latest Posts

    ಮಂಗಳೂರು: ಯುವತಿ ಆತ್ಮಹತ್ಯೆ: ಕಾರಣ ನಿಗೂಢ

    ಮಂಗಳೂರು: ನಗರದ ಆಕಾಶಭವನ ನಿವಾಸಿ ಯುವತಿ ನೇಣು ಕುಣಿಕೆಗೆ ಕೊರಳೊಡ್ಡಿ ಮೃತಪಟ್ಟಿದ್ದಾರೆ. ಆಕಾಶಭವನ ಕಾಪಿಗುಡ್ಡೆಯ ಶಿಫಾಲಿ(22) ಮೃತಪಟ್ಟವರು.

    ಆಕಾಶಭವನದಲ್ಲಿ ಬ್ಯೂಟಿಶಿಯನ್ ಆಗಿ ವೃತ್ತಿ ನಿರ್ವಹಿಸುತ್ತಿದ್ದ ಶಿಫಾಲಿ ಸಂಜೆ ಕೆಲಸ ಮುಗಿಸಿ ಎಂದಿನಂತೆ ಮನೆಗೆ ಬಂದಿದ್ದಾರೆ. ಆದರೆ, ಅದೇನಾಯ್ತೋ ಗೊತ್ತಿಲ್ಲ, ಮನೆಗೆ ಬಂದವರೇ ಕೋಣೆಗೆ ತೆರಳಿ ಫ್ಯಾನಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆಯವರು ಆಕೆಯನ್ನು ರಕ್ಷಣೆ ಮಾಡುವಷ್ಟರಲ್ಲಿ ಮೃತಪಟ್ಟಿದ್ದರು.

    ಶಿಫಾಲಿ, ಪ್ರೇಮ ವೈಫಲ್ಯದಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss