ಮಂಗಳೂರು: ದಿನಾಂಕ 20-01-2023 ಶುಕ್ರವಾರ ದಂದು ತುಳುನಾಡ ರಕ್ಷಣಾ ವೇದಿಕೆ ಕಛೇರಿಗೆ ಶಿವಗಿರಿ ಮಠದ ಸ್ವಾಮೀಜಿಗಳಾದ ಶ್ರೀ ದುರ್ಗಾನಂದ ಸ್ವಾಮೀಜಿಯವರು ಭೇಟಿ ನೀಡಿದರು. ಈ ಸಂದರ್ಭದಲ್ಲಿ ತುಳುನಾಡ ರಕ್ಷಣಾ ವೇದಿಕೆ ಯು.ಎ.ಇ ದುಬೈ ಘಟಕದ ಮುಖಂಡರಾದ ಅಶೋಕ್ ಬೈಲೂರು ಉಪಸ್ಥಿತರಿದ್ದರು.
ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕಾಧ್ಯಕ್ಷರಾದ ಯೋಗೀಶ್ ಶೆಟ್ಟಿ ಜಪ್ಪುರವರು ಸ್ವಾಮೀಜಿಗಳಿಗೆ ಗೌರವದ ಪುಷ್ಪವನ್ನು ನೀಡಿ ಸನ್ಮಾನಿಸಿದರು.ಅದೇ ರೀತಿ ತುಳುನಾಡ ರಕ್ಷಣಾ ವೇದಿಕೆಯಲ್ಲಿ ಕಳೆದ 5 ವರ್ಷಗಳಿಂದ ಕೆಲಸ ಮಾಡುತ್ತಿರುವ ಚಿತ್ರ ನಟರಾಗಿ ಬೇರೆ ಬೇರೆ ಕ್ಷೇತ್ರಗಳಲ್ಲಿ ತನ್ನದೇ ರೀತಿಯಲ್ಲಿ ಗುರುತಿಸಿಕೊಂಡಿರುವ ಅಶೋಕ್ ಬೈಲೂರುರವರನ್ನು ಕೂಡ ಶಾಲು ಹೊದಿಸಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ದುಬೈ ʼತುಳು ಪಾತೆರ್ಗ ತುಳು ಒರಿಪಾಗʼ ಗ್ರೂಪಿನ ರಿತೇಶ್ ಅಂಚನ್, ಕೃಷ್ಣಪ್ಪ ಡಿ.ಜಿ. ಹಾಗೂ ತುಳುನಾಡ ರಕ್ಷಣಾ ವೇದಿಕೆ ಕೇಂದ್ರೀಯ ಕಛೇರಿ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಭಟ್ ಕಡಬ ಉಪಸ್ಥಿತರಿದ್ದರು.