Friday, March 29, 2024
spot_img
More

    Latest Posts

    ಸುಳ್ಯ; ನಗರ ಪಂಚಾಯತ್ ಮಾಜಿ ಉಪಾಧ್ಯಕ್ಷೆಯ ಪತಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನ- ಸ್ಥಿತಿ ಗಂಭೀರ

    ಸುಳ್ಯ: ನಗರ ಪಂಚಾಯತ್ ಮಾಜಿ ಉಪಾಧ್ಯಕ್ಷೆಯ ಪತಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು ನಡೆದಿದೆ.

    ಗುಂಡು ಹಾರಿಸಿಕೊಂಡವರನ್ನು ಸುಳ್ಯ ನಗರ ಪಂಚಾಯತ್‌ ನ ಮಾಜಿ ಉಪಾಧ್ಯಕ್ಷರಾದ ಶಾಂತಿ ಪ್ರಭುರವರ ಪತಿ ಎನ್ನಲಾಗಿದೆ. ಸುಳ್ಯದ ಜಟ್ಟಿಪಳ್ಳ ನಿವಾಸಿ ಕೇಶವ ಪ್ರಭು ಎಂಬುವವರು ತಲೆಗೆ ಪಿಸ್ತೂಲಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ಕೂಡಲೇ ಮಂಗಳೂರಿನ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ.

    ಈ ಘಟನೆಯು ಇಂದು ಪೂರ್ವಾಹ್ನ 11 ಗಂಟೆಯ ಸುಮಾರಿಗೆ ನಡೆದಿದೆ, ಅವರು ವಾಸವಿದ್ದ ಮನೆಯಲ್ಲಿಯೇ ಈ ಘಟನೆ ನಡೆದಿದ್ದು, ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಗುಂಡು ಹಾರಿಸಿಕೊಳ್ಳಲು ಕಾರಣವೇನೆಂದು ಇನ್ನೂ ತಿಳಿದುಬಂದಿಲ್ಲ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss