ಸಿದ್ದಾಪುರ | ಕುಂದಾಪುರ
ಕುಂದಾಪುರ ತಾಲೂಕಿನ ಸಿದ್ದಾಪುರ ಸಮೀಪದ ಜನ್ಸಾಲೆ ಪ್ರದೇಶದಲ್ಲಿರುವ ತೆಂಗಿನ ಎಣ್ಣೆ ಮಿಲ್ ಒಂದರಲ್ಲಿ ತಡರಾತ್ರಿ ಭಾರೀ ಅಗ್ನಿ ಅವಘಡ ಸಂಭವಿಸಿ ಅಪಾರ ಆರ್ಥಿಕ ನಷ್ಟ ಉಂಟಾದ ಘಟನೆ ವರದಿಯಾಗಿದೆ.
ಶ್ರೀ ಮಧುಮಾಯ ಆಯಿಲ್ಸ್ (ಮಧು) ಫ್ಯಾಕ್ಟರಿಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ವಿಷಯ ತಿಳಿದ ಕೂಡಲೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಯಿತು. ಕುಂದಾಪುರ, ಬೈಂದೂರು ಹಾಗೂ ಹೊಸಂಗಡಿ ಕೆಪಿಟಿಸಿಎಲ್ನಿಂದ ತಲಾ ಒಂದೊಂದು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿಕೊಂಡವು.
ತೆಂಗಿನೆಣ್ಣೆ ಸಂಗ್ರಹ ಹೆಚ್ಚಿದ್ದರಿಂದ ಬೆಂಕಿಯ ತೀವ್ರತೆ ಹೆಚ್ಚಾಗಿ ನಿಯಂತ್ರಣಕ್ಕೆ ತರಲು ಸಾಕಷ್ಟು ಸಮಯ ತೆಗೆದುಕೊಂಡಿತು. ಸ್ಥಳೀಯರ ಸಹಕಾರದೊಂದಿಗೆ ರಾತ್ರಿಯಿಂದ ಬೆಳಿಗ್ಗೆ ಸುಮಾರು 9 ಗಂಟೆಯವರೆಗೆ ನಿರಂತರವಾಗಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಲಾಯಿತು.
ಘಟನಾ ಸ್ಥಳಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಗ್ನಿ ಅವಘಡದ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
Trending
- ಮಂಗಳೂರು ; ಇನ್ಸ್ಟಗ್ರಾಮ್ ರೀಲ್ ಸ್ಟಾರ್ ನಾಗುರಿ ಆಶಾ ಹೃದಯಾಘಾತದಿಂದ ನಿಧನ.
- ಜನರಲ್ಲಿ ದೈರ್ಯ ಬೆಳೆಸಬೇಕಾದ ಸಂಘಟನೆಗಳು — ಭಯ ಹುಟ್ಟಿಸುವುದು ಎಷ್ಟು ಸರಿ? – ಪ್ರಶಾಂತ್ ಭಟ್ ಕಡಬ
- ಬಿಗ್ಬಾಸ್ ಸೀಸನ್–12 ರನ್ನರ್ಅಪ್ ರಕ್ಷಿತಾ ಶೆಟ್ಟಿಗೆ ಹುಟ್ಟೂರಿನಲ್ಲಿ ರಾಜಮರ್ಯಾದೆ ಸ್ವಾಗತ
- ಬಂಟ್ಸ್ ಅಸೋಸಿಯೇಷನ್ ಪುಣೆ ವತಿಯಿಂದ 14ನೇ ವಾರ್ಷಿಕ ಸಮಾವೇಶ – ಫೆಬ್ರವರಿ 6ರಂದು
- ರಿಶೆಲ್ ಡಿಸೋಜ ಪ್ರಕರಣಕ್ಕೆ ನ್ಯಾಯ ಬೇಕು: ತನಿಖೆ ವಿಫಲವಾದರೆ ರಾಜ್ಯವ್ಯಾಪಿ ಹೋರಾಟ – ಅಲ್ವಿನ್ ಡಿಸೋಜ
- ತುಳು ಭಾಷೆಗೆ ಅಧಿಕೃತ ಸ್ಥಾನಮಾನ | ಆಂಧ್ರ ಮಾದರಿಯ ಅಧ್ಯಯನ
- ಎಂ.ಆರ್.ಪಿ.ಎಲ್. (MRPL) ಘಟಕದಲ್ಲಿ ಬೆಂಕಿ ಅವಘಡ
- ಮಂಗಳೂರು ನಗರದಲ್ಲಿ ರೈಲು ಓಡಾಟ–ಟ್ರಾಫಿಕ್ ಸಮಸ್ಯೆ ಪರಿಹಾರಕ್ಕೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಹತ್ವದ ಸಭೆ

