ಮಂಗಳೂರು: ವಿದೇಶದಲ್ಲಿ ರೂಪಾಂತರಿ ಕೊರೋನ ವೈರಸ್ ಪತ್ತೆ ಹಾಗೂ ಕೊರೋನ 3 ನೇ ಅಲೆಯ ಆತಂಕದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಭಾಗಗಳಲ್ಲಿ ವಾಹನ ಸವಾರರ ತಪಾಸಣೆಯನ್ನು ಬಿಗಿಗೊಳಿಸಲಾಗಿದೆ.
ಕೊರೋನ 2 ನೇ ಅಲೆ ಬಳಿಕ ಅನ್ಲಾಕ್ಗೊಂಡ ಬಳಿಕ ಮೂರು ತಿಂಗಳಲ್ಲಿ ನಾವು ಗಡಿಗಳಲ್ಲಿ ತಪಾಸಣೆ ಕಾರ್ಯವನ್ನು ಅತ್ಯಂತ ಕಟ್ಟುನಿಟ್ಟಾಗಿ ನಡೆಸಲಾಗಿತ್ತು. ಆದರೆ ಕಳೆದ ಒಂದು ತಿಂಗಳಿನಿಂದ ಲಸಿಕೀಕರಣ ಉತ್ತಮ ರೀತಿಯಲ್ಲಿ ಆಗುತ್ತಿರುವ ಹಿನ್ನೆಲೆಯಲ್ಲಿ ಒಂದಷ್ಟು ಸಡಿಲಗೊಳಿಸಲಾಗಿತ್ತು.
ಇದೀಗ ಸಂಭಾವ್ಯ 3ನೆ ಅಲೆಯನ್ನು ತಡೆಯಲು ಮುಖ್ಯಮಂತ್ರಿಯವರು ಪೊಲೀಸ್ ನಿಯೋಜನೆ ಮಾಡಲಾಗಿದೆ. ನಾಳೆಯಿಂದ ಇತರ ಇಲಾಖೆಯ ಅಧಿಕಾರಿಗಳನ್ನು ಕೂಡಾ ನಿಯೋಜಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ. ವಿ. ತಿಳಿಸಿದ್ದಾರೆ.