Thursday, March 30, 2023

BREAKING NEWS : ರಾಜ್ಯದ 5 ಮತ್ತು 8 ನೇ ತರಗತಿಗೆ ‘ಪಬ್ಲಿಕ್ ಪರೀಕ್ಷೆ’ ನಡೆಸಲು ಸುಪ್ರೀಂಕೋರ್ಟ್ ಗ್ರೀನ್ ಸಿಗ್ನಲ್

ಬೆಂಗಳೂರು : ರಾಜ್ಯದ 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸಲು ಸುಪ್ರೀಂಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. 5 ಮತ್ತು 8...
More

    Latest Posts

    ಕಡಬ: ನಾಪತ್ತೆಯಾಗಿದ್ದ ವಿದ್ಯಾರ್ಥಿ ನದಿಯಲ್ಲಿ ಮೃತದೇಹ ಪತ್ತೆ..!

    ಕಡಬ: ಕುಮಾರಧಾರಾ ನದಿಯಲ್ಲಿ ನಾಪತ್ತೆಯಾಗಿದ್ದ ವಿದ್ಯಾರ್ಥಿಯ ಮೃತದೇಹ ಪತ್ತೆಯಾಗಿದೆ. ಕೋಡಿಂಬಾಳ ಗುಂಡಿಮಜಲ್ ನಿವಾಸಿ ಮಂಜುನಾಥ್ ಎಂಬವರ ಮಗ 10 ನೇ ತರಗತಿ ವಿದ್ಯಾರ್ಥಿ ಅದ್ವೈತ್ ಶೆಟ್ಟಿ (15).

    ಕಡಬ: ದೈವ ನರ್ತನದ ವೇಳೆ ಕುಸಿದು ಬಿದ್ದು ದೈವ ನರ್ತಕ ಸಾವು

    ದೈವ ನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕರೊಬ್ಬರು ಮೃತಪಟ್ಟ ಘಟನೆ ಕಡಬ ಸಮೀಪದ ಎಡಮಂಗಲ ಗ್ರಾಮದಲ್ಲಿ ನಡೆದಿದೆ. ದೈವ ನರ್ತಕ ಕಾಂತು ಅಜಿಲ ಮೂಲಂಗೀರಿ...

    ಬೆಂದೂರ್ ವೆಲ್ ಸರ್ಕಲ್ ನಲ್ಲಿ ಮಹಿಳೆಗೆ ಬಸ್ ಡಿಕ್ಕಿ – ಮಹಿಳೆ ಸಾವು

    ಮಂಗಳೂರು: ಬೆಂದೂರ್ ವೆಲ್ ಸರ್ಕಲ್ ನಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಬಸ್ ಬಡಿದಿದ್ದು ಮಹಿಳೆ ಸ್ಥಳದಲ್ಲೇ ಒದ್ದಾಡಿ ಪ್ರಾಣ ಬಿಟ್ಟಿದ್ದು ಘಟನೆ ನಡೆದಿದೆ. ಬಸ್ ಪತ್ತೆ...

    ಕರ್ನಾಟಕ ವಿಧಾನಸಭೆ ಚುನಾವಣೆ : ಇದೇ ಮೊದಲ ಬಾರಿಗೆ ಪತ್ರಕರ್ತರಿಗೆ ಅಂಚೆ ಮತದಾನಕ್ಕೆ ಅವಕಾಶ

    ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿದ್ದು, ಇದೇ ಮೊದಲ ಬಾರಿಗೆ ಕಾರ್ಯನಿರತ ಪತ್ರಕರ್ತರಿಗೆ ಅಂಚೆ ಮೂಲಕ ಮತದಾನ ಮಾಡಲು ಚುನಾವಣಾ...

    ಚಿತ್ರನಟ ಚೇತನ್ ಹೇಳಿಕೆಗೆ ಯೋಗೀಶ್ ಶೆಟ್ಟಿ ಜಪ್ಪು ತೀವ್ರ ಖಂಡನೆ

    ತುಳುನಾಡಿನ ದೈವಾರಾಧನೆ ಹಿಂದೂ ಸಂಸ್ಕೃತಿಯ ಮೂಲವೇ ಅಲ್ಲ. ಹಿಂದೂ ಧರ್ಮಕ್ಕೂ ತುಳುನಾಡಿನ ದೈವಾರಾಧನೆಗೂ ಯಾವುದೇ ಸಂಬಂಧವಿಲ್ಲ ಎಂಬ ನಟ ಚೇತನ್ ವಿವಾದಾತ್ಮಕ ಹೇಳಿಕೆಯನ್ನು ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕಾಧ್ಯಕ್ಷರಾದ ಯೋಗೀಶ್ ಶೆಟ್ಟಿ ಜಪ್ಪು ರವರು ಖಂಡಿಸಿದ್ದಾರೆ.

    ತುಳುನಾಡು ಎಂಬುದು ವೈವಿಧ್ಯಮಯ ಸಂಸ್ಕೃತಿಯನ್ನು ಹೊಂದಿರುವ ನಾಡು . ಬೆರ್ಮರ ಸೃಷ್ಟಿ, ಪರಶುರಾಮನ ಸೃಷ್ಟಿ ಎಂದು ನಂಬಿರುವ ತುಳುನಾಡಿನಲ್ಲಿ ದೈವರಾಧನೆ, ನಾಗರಾಧನೆ, ಯಕ್ಷಗಾನ, ಹುಲಿವೇಷ ಮುಂತಾದ ಜಾನಪದ ಆಚರಣೆಗಳು ಚಾಲ್ತಿಯಲ್ಲಿದೆ. ತುಳುನಾಡಿನಲ್ಲಿ ದೇವರಿಲ್ಲದೆ ದೈವಗಳಿಲ್ಲ , ದೈವಗಳಿಲ್ಲದೆ ದೇವರಿಲ್ಲ . ವಿಶೇಷವೆಂದರೆ ಪ್ರತಿಯೊಂದು ದೇವಾಲಯದಲ್ಲೂ ದೈವಗಳಿಗೆ ಆರಾಧನೆ ಹಲವಾರು ಜಾತಿಗಳಿದ್ದು , ಎಲ್ಲರು ಸಮಾನರು . ತುಳುನಾಡಿನ ಸಂಸ್ಕೃತಿ ವಿಚಾರ ಬಂದಾಗ ಕೆಲವೊಂದು ಆಚರಣೆಗಳಿಗೆ ಹಿರಿಯರು ಮಾಡಿಕೊಂಡು ಬಂದಂತಹ ಕಟ್ಟುಪಾಡುಗಳು ಇವೆ. ಈ ಕಟ್ಟುಪಾಡುಗಳನ್ನು ಜನರು ಚೆನ್ನಾಗಿ ಪಾಲಿಸಿಕೊಂಡು ಬರುತ್ತಿದ್ದಾರೆ. ದೈವರಾಧನೆಯಲ್ಲಿ ದೈವ ಪಾತ್ರಿಗಳು ನಲಿಕೆ ಸಮುದಾಯ, ಪರವ , ಪಂಬದ ಸಮುದಾಯದವರು ಮಾಡಿಕೊಂಡು ಬರುತ್ತಿರುವುದು ರೂಢಿ.ವಿವಿಧ ಜಾತಿಯವರು ಸೇರಿಕೊಂಡು ಒಗ್ಗೂಡಿ ನಡೆಸಿಕೊಂಡು ಬರುತ್ತಿದ್ದಾರೆ. ಈ ನಡುವೆ ಸಮಾಜವನ್ನು ಬೇರ್ಪಡಿಸುವರಷ್ಟಿನ ಮಟ್ಟಕ್ಕೆ ನಟ ಚೇತನ್ರವರು ಹೇಳಿಕೆಯನ್ನು ಕೊಡುತ್ತಿದ್ದರೆ. ತುಳುನಾಡಿನಲ್ಲಿ ತುಳುವರು ಏಕತ್ವದಲ್ಲಿ ಬಹುತ್ವವನ್ನು ಕಾಣುವ ತುಳುನಾಡಿನಲ್ಲಿ ದೈವರಾಧನೆಯೆ ಮುಖ್ಯ ಆರಾಧನಾ ಶಕ್ತಿ. ಹಿರಿಯರು ಪಾಲನೆಮಾಡಿಕೊಂಡು ಬಂದಿರುವುದರಿಂದ ನಮಗೆ ಮೂಢನಂಬಿಕೆ ಆಗಿರದೆ ಅಚಲ ನಂಬಿಕೆ ಯಾಗಿದೆ. ಇಲ್ಲಿ ಪ್ರಾದೇಶಿಕವಾಗಿ ಭಿನ್ನತೆ ಇದ್ದರೂ ಸಂಸ್ಕೃತಿ ಒಂದೆ ಆಗಿದ್ದು, ದೈವರಾಧನೆಯಲ್ಲಿ ಸಂಶೋಧಕರು, ಇತಿಹಾಸಕಾರರು ಎಂಬ ಭೇದವಿಲ್ಲ . ಅಂದರೆ ಮಕ್ಕಳಿಗೂ ಕೂಡ ದೈವರಾಧನೆಯ ಅರಿವು ಇರುತ್ತದೆ.
    ಇಂತಹ ತುಳುನಾಡಿನ ಭಯ ಭಕ್ತಿಯುಳ್ಳ ದೈವಾರಾಧನೆಯ ಬಗ್ಗೆ ಬಾಯಿಗೆ ಬಂದ ಹಾಗೆ ಮಾತನಾಡಿದ ಚೇತನ್ ರವರು ಕೂಡಲೇ ತುಳುನಾಡಿನ ಜನತೆಯಲ್ಲಿ ಕ್ಷಮೆ ಯಾಚಿಸಬೇಕು ಇಲ್ಲದೇ ಇದ್ದರೆ ತುಳುನಾಡ ರಕ್ಷಣಾ ವೇದಿಕೆ ವತಿಯಿಂದ ನಟ ಚೇತನ್ ಮೇಲೆ ಕಪ್ಪು ಪತಾಕೆಯನ್ನು ಹಾರಿಸಲಾಗುವುದು ಎಂದು ಯೋಗೀಶ್ ಶೆಟ್ಟಿಯವರು ತಿಳಿಸಿದ್ದಾರೆ. ಅಲ್ಲದೇ ಮುಂದಿನ ದಿನಗಳಲ್ಲಿ ನಟ ಚೇತನ್ ರವರಿಗೆ ಇದಕ್ಕೆ ತಕ್ಕದಾದ ಉತ್ತರವನ್ನು ನೀಡಲಾಗುವುದು ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.ನಮ್ಮ ಮಣ್ಣಿನ ಕಣ ಕಣದಲ್ಲೂ ದೈವೀ ಶಕ್ತಿ , ಕಲೆ ಇದೆ. ಪ್ರತಿ ಮನೆಯಲ್ಲೂ ದೈವರಾಧನೆ ನಡೆಯುತ್ತದೆ. ತುಳುನಾಡಿನ ಜನರ ಭಾವನೆಗೆ ಧಕ್ಕೆ ತರುವ ಕೆಲಸ ಯಾರೇ ಮಾಡಿದರೂ ಕೂಡ ಇದನ್ನು ಕ್ಷಮಿಸಲಾಗುವುದಿಲ್ಲ. ಹಿಂದೂ ಧರ್ಮ ಅಲ್ಲದವರೂ ಕೂಡ ದೈವಾರಾಧನೆಯನ್ನು ನಂಬುವ ಇತಿಹಾಸವಿದೆ. ತುಳುನಾಡಿನ ಬೇರೆ ಬೇರೆ ಕಡೆಗಳಲ್ಲಿ ಬೇರೆ ಧರ್ಮದವರು ತುಳುನಾಡಿನ ದೈವಾರಾಧನೆಯ ಬಗ್ಗೆ ಅಪಾರ ನಂಬಿಕೆಯನ್ನು ಇಟ್ಟು ಕೊಂಡು ಅರಾಧಿಸಲ್ಪಡುವುದು ಕಂಡು ಬಂದಿದೆ.
    ದೈವರಾಧನೆ ಬಗ್ಗೆ ಬಾಯಿಗೆ ಬಂದ ಹಾಗೆ ಏನೇನೊ ಮಾತನಾಡುವುದಕ್ಕಿಂತ ನೇಮ ನಡೆಯುವ ಸ್ಥಳಕ್ಕೆ ಬಂದು ನೋಡಿದಾಗ ಸರಿಯಾದ ಅರಿವು ಮೂಡುವುದು ಜೊತೆಗೆ ದೈವದ ಆಶಿರ್ವಾದ ದೊರಕುತ್ತದೆ.

    Latest Posts

    ಕಡಬ: ನಾಪತ್ತೆಯಾಗಿದ್ದ ವಿದ್ಯಾರ್ಥಿ ನದಿಯಲ್ಲಿ ಮೃತದೇಹ ಪತ್ತೆ..!

    ಕಡಬ: ಕುಮಾರಧಾರಾ ನದಿಯಲ್ಲಿ ನಾಪತ್ತೆಯಾಗಿದ್ದ ವಿದ್ಯಾರ್ಥಿಯ ಮೃತದೇಹ ಪತ್ತೆಯಾಗಿದೆ. ಕೋಡಿಂಬಾಳ ಗುಂಡಿಮಜಲ್ ನಿವಾಸಿ ಮಂಜುನಾಥ್ ಎಂಬವರ ಮಗ 10 ನೇ ತರಗತಿ ವಿದ್ಯಾರ್ಥಿ ಅದ್ವೈತ್ ಶೆಟ್ಟಿ (15).

    ಕಡಬ: ದೈವ ನರ್ತನದ ವೇಳೆ ಕುಸಿದು ಬಿದ್ದು ದೈವ ನರ್ತಕ ಸಾವು

    ದೈವ ನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕರೊಬ್ಬರು ಮೃತಪಟ್ಟ ಘಟನೆ ಕಡಬ ಸಮೀಪದ ಎಡಮಂಗಲ ಗ್ರಾಮದಲ್ಲಿ ನಡೆದಿದೆ. ದೈವ ನರ್ತಕ ಕಾಂತು ಅಜಿಲ ಮೂಲಂಗೀರಿ...

    ಬೆಂದೂರ್ ವೆಲ್ ಸರ್ಕಲ್ ನಲ್ಲಿ ಮಹಿಳೆಗೆ ಬಸ್ ಡಿಕ್ಕಿ – ಮಹಿಳೆ ಸಾವು

    ಮಂಗಳೂರು: ಬೆಂದೂರ್ ವೆಲ್ ಸರ್ಕಲ್ ನಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಬಸ್ ಬಡಿದಿದ್ದು ಮಹಿಳೆ ಸ್ಥಳದಲ್ಲೇ ಒದ್ದಾಡಿ ಪ್ರಾಣ ಬಿಟ್ಟಿದ್ದು ಘಟನೆ ನಡೆದಿದೆ. ಬಸ್ ಪತ್ತೆ...

    ಕರ್ನಾಟಕ ವಿಧಾನಸಭೆ ಚುನಾವಣೆ : ಇದೇ ಮೊದಲ ಬಾರಿಗೆ ಪತ್ರಕರ್ತರಿಗೆ ಅಂಚೆ ಮತದಾನಕ್ಕೆ ಅವಕಾಶ

    ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿದ್ದು, ಇದೇ ಮೊದಲ ಬಾರಿಗೆ ಕಾರ್ಯನಿರತ ಪತ್ರಕರ್ತರಿಗೆ ಅಂಚೆ ಮೂಲಕ ಮತದಾನ ಮಾಡಲು ಚುನಾವಣಾ...

    Don't Miss

    BIGG NEWS : ಕೇಂದ್ರ ಸಚಿವರ ಮಹತ್ವದ ಘೋಷಣೆ, 6 ತಿಂಗಳಲ್ಲಿ ‘ಟೋಲ್ ಪ್ಲಾಜಾ’ ಬಂದ್, ‘GPS’ ವ್ಯವಸ್ಥೆ ಜಾರಿ.!

    ನವದೆಹಲಿ : ನೀವು ಹೆದ್ದಾರಿಯಲ್ಲಿ ನಿಮ್ಮ ಕಾರಿನೊಂದಿಗೆ ಪ್ರಯಾಣಿಸಿದ್ರೆ, ಟೋಲ್ ಪ್ಲಾಜಾದಲ್ಲಿ ಕಳೆದ ಸಮಯವನ್ನ ನೀವು ಇಷ್ಟಪಡುವುದಿಲ್ಲ. ಟೋಲ್ ಪ್ಲಾಜಾದಲ್ಲಿ ತೆಗೆದುಕೊಳ್ಳುವ ಸರಾಸರಿ ಸಮಯವನ್ನ ಕಡಿಮೆ ಮಾಡಲು ಸರ್ಕಾರವು ನಿರಂತರವಾಗಿ...

    ಕುಂಪಲ:ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಯುವಕ

    ಉಳ್ಳಾಲ: ಮೊಬೈಲ್ ಶೋರೂಂವೊಂದರಲ್ಲಿ ಕೆಲಸಕ್ಕಿದ್ದ ಕುಂಪಲ ಮೂರು ಕಟ್ಟೆ ನಿವಾಸಿ ಯುವಕನೊಬ್ಬ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಶನಿವಾರ ಬೆಳಗ್ಗೆ ನಡೆದಿದೆ. ಅಕ್ಷಯ್ (25) ಆತ್ಮಹತ್ಯೆ...

    ಸುಳ್ಯ: ಮನೆ ಕಾಮಗಾರಿ ವೇಳೆ ತಡೆಗೋಡೆ ಕುಸಿತ – ಮೂವರು ಕಾರ್ಮಿಕರ ಸಾವು

    ಸುಳ್ಯ : ತಡೆಗೋಡೆ ಕಾಮಗಾರಿ ಮೇಳೆ ಗುಡ್ಡದ ಮಣ್ಣು ಜರಿದು ಮೂವರು ಮಣ್ಣಿನಡಿ ಸಿಲುಕಿ ಸಾವನಪ್ಪಿದ್ದ ಘಟನೆ ಸುಳ್ಯದ ಗಾಂಧಿನಗರ ಬಳಿ ನಡೆದಿದೆ. ಮೃತರನ್ನು ಸೋಮಶೇಖರ (45),...

    ಉಜ್ವಲ ಯೋಜನೆಯಡಿ 12 ಸಿಲಿಂಡರ್ ವಿತರಣೆ -200 ರೂ. ಸಬ್ಸಿಡಿ.!

    ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ವಾರ್ಷಿಕವಾಗಿ 12 ರೀಫಿಲ್‌ಗಳಿಗೆ ಪ್ರತಿ ಸಿಲಿಂಡರ್‌ಗೆ ರೂ 200 ಸಬ್ಸಿಡಿ ನೀಡಲು ಕೇಂದ್ರ ಸಂಪುಟ ಅನುಮೋದನೆ ನೀಡಿದೆ. ಪ್ರಧಾನ...

    5,8 ನೇ ತರಗತಿಗೆ ಬೋರ್ಡ್ ಪರೀಕ್ಷೆ : ಮತ್ತೆ ಮುಂದೂಡಲು ಹೈಕೋರ್ಟ್ ನಕಾರ

    ಬೆಂಗಳೂರು: ರಾಜ್ಯದ 5 ಮತ್ತು 8 ನೇ ತರಗತಿಗಳಿಗೆ ಮಾರ್ಚ್ 27 ರಿಂದ ನಡೆಯಲಿರುವ ಬೋರ್ಡ್ ಮಟ್ಟದ ಪರೀಕ್ಷೆಗಳನ್ನು ಮುಂದೂಡಬೇಕೆಂಬ ರಾಜ್ಯ ಖಾಸಗಿ ಅನುದಾನಿತ ರಹಿತ ಶಾಲೆಗಳ ಒಕ್ಕೂಟದ ಮನವಿಯನ್ನು...