ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ಪರಿಸರದಲ್ಲಿ ಶನಿವಾರ ಸಂಜೆಯ ಬಾರೀ ಗುಡುಗು ಸಹಿತ ಗಾಳಿ ಮಳೆಗೆ ಕಾರೊಂದರ ಮೇಲೆ ಮರದ ರೆಂಬೆ ಮುರಿದು ಬಿದ್ದು ಕಾರು ಸಂಪೂರ್ಣ ಜಖಂಗೊಂಡಿರುವ ಘಟನೆ ಸಂಭವಿಸಿದೆ.ಸುಬ್ರಹ್ಮಣ್ಯದ ಕುಮಾರಧಾರ ಸ್ನಾನ ಘಟ್ಟದ ಬಳಿಯಲ್ಲಿ ಘಟನೆ ನಡೆದಿದೆ.
ದಾವಣಗೆರೆಯಿಂದ ಯಾತ್ರಿಕರಾಗಿ ಬಂದಿರುವವರ ಕಾರು ಘಟನೆಯಲ್ಲಿ ಜಖಂಗೊಂಡಿರುವುದು ಎಂದು ತಿಳಿದುಬಂದಿದೆ. ಇಲ್ಲಿನ ಬೃಹತ್ ಮರದ ರೆಂಬೆ ಮುರಿದು ಕಾರಿನ ಮೇಲೆಯೆ ಬಿದ್ದಿದೆ. ಕಾರಿನಲ್ಲಿ ಯಾರೂ ಇಲ್ಲದೆ ಇದ್ದುದರಿಂದ ಸಂಭಾವ್ಯ ಬಾರೀ ಅನಾಹುತ ತಪ್ಪಿದೆ.