ಕಾರ್ಕಳ: ಕಾರ್ಕಳ ತಾಲೂಕಿನ ದುರ್ಗಾ ಗ್ರಾಮ ಪಂಚಾಯತ್ ಸದಸ್ಯ, ಕೃಷಿಕ ನಿಲೆಬೆಟ್ಟು ಗುತ್ತು ಮನೆಯ ಭಾಸ್ಕರ್ ಹೆಗ್ಡೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು (ಬುಧವಾರ) ಬೆಳಗ್ಗೆ ಸಂಭವಿಸಿದೆ.
ಭಾಸ್ಕರ್ ಹೆಗ್ಡೆ ಅವರು ದುರ್ಗಾ ಪಂಚಾಯತ್ನ ಸದಸ್ಯರು ಮತ್ತು ಬಿಜೆಪಿಯ ಸಕ್ರಿಯ ಕಾರ್ಯಕರ್ತರು ಕೂಡ ಆಗಿದ್ದರು. ಭಾಸ್ಕರ್ ಹೆಗ್ಡೆ ತಮ್ಮ ಮನೆಯಲ್ಲಿದ್ದ ನಾಡಕೋವಿಯಿಂದ ಇಂದು ಬೆಳಿಗ್ಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಕಾರ್ಕಳ ಗ್ರಾಮಾಂತರ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.