Wednesday, April 17, 2024
spot_img
More

    Latest Posts

    ಉಡುಪಿ : ಸಬ್ ಜೈಲಿನಲ್ಲಿ ವಿಚಾರಣಾಧೀನ ಕೈದಿ ಆತ್ಮಹತ್ಯೆ!

    ಉಡುಪಿ: ಉಡುಪಿ ಸಬ್ ಜೈಲಿನಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಸದಾನಂದ ಸೇರಿಗಾರ್ ಎಂಬಾತ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈತ ಪಂಚೆಯಿಂದ ನೇಣು ಬಿಗಿದು ಇಂದು ಬೆಳಿಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸುಮಾರು 20 ಮಂದಿ ಕೈದಿಗಳಿದ್ದ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು ಇದನ್ನು ಗಮನಿಸಿದ ಸಹ ಕೈದಿಗಳು ನೇಣಿನ ಕುಣಿಕೆಯಿಂದ ಬಿಡಿಸಿದ್ದರು. ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದರೂ, ಮಾರ್ಗ ಮಧ್ಯದಲ್ಲಿ ಸಾವನ್ನಪ್ಪಿದ್ದಾನೆ. ಕಾರ್ಕಳ ಮೂಲದ ಸದಾನಂದ ಸೇರಿಗಾರ್, ಸರ್ವೇಯರ್ ಆಗಿದ್ದ. ಜಿಲ್ಲೆಯ ಬೈಂದೂರು ತಾಲೂಕಿನ ಒತ್ತಿನೆಣೆ ಎಂಬಲ್ಲಿ ಸುಟ್ಟ ಕಾರಿನಲ್ಲಿ ತಾನೇ ಸತ್ತಿರುವುದಾಗಿ ಬಿಂಬಿಸಲು ಹೊರಟು ಬಂಧಿಯಾಗಿದ್ದ ಆರೋಪಿ ಈತ.ಕುರುಪ್ ಸಿನಿಮಾ ಮಾದರಿಯಲ್ಲಿ ಕೊಲೆ ಮಾಡಿ ಗಮನ ಸೆಳೆದಿದ್ದ ಪ್ರಕರಣ ಇದಾಗಿತ್ತು.ಬಳಿಕ ಈತನನ್ನು ಬಂಧಿಸಿ ಸಬ್ ಜೈಲಿನಲ್ಲಿ ಇಡಲಾಗಿತ್ತು.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss