Thursday, April 18, 2024
spot_img
More

    Latest Posts

    ಮಾನಸಿಕ ಖಿನ್ನತೆ: ಯುವತಿ ಬಾವಿಗೆ ಹಾರಿ ಆತ್ಮಹತ್ಯೆ

    ಬಂಟ್ವಾಳ: ಮಾನಸಿಕ ಖಿನ್ನತೆಯ ಕಾಯಿಲೆಯಿಂದ ಬಳಲುತ್ತಿದ್ದ ಯುವತಿಯೋರ್ವಳು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೇ 13ರಂದು ಬೊಂಡಾಲದ ಕಾಪಿಕಾಡುನಲ್ಲಿ ನಡೆದಿದೆ.

    ಕಲ್ಲಡ್ಕ ನಿವಾಸಿ ನಾಗವೇಣಿ ಅವರ ಪುತ್ರಿ ಮಲ್ಲಿಕಾ(32) ಆತ್ಮಹತ್ಯೆ ಮಾಡಿಕೊಂಡ ಯುವತಿ.

    ಕಲ್ಲಡ್ಕದ ಅವರ ಮನೆ ಕೆಡವಿದ ಕಾರಣ ಪ್ರಸ್ತುತ ಅವರು ಬೊಂಡಾಲದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ಮನೆಯಲ್ಲಿ ಯಾರೂ ಇಲ್ಲದೆ ವೇಳೆ ಅಲ್ಲಿ ಸಮೀಪದ ಬಾವಿಗೆ ಹಾರಿದ್ದಾಳೆ ಎನ್ನಲಾಗಿದೆ.

    ಮಲ್ಲಿಕಾ ಅವರು ಕಳೆದ 10 ವರ್ಷಗಳಿಂದ ಮಾನಸಿಕ ಖಿನ್ನತೆಯ ಖಾಯಿಲೆಯಿಂದ ಬಳಲುತ್ತಿದ್ದು, ಮಂಗಳೂರಿಗೆ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯುತ್ತಿದ್ದರು.

    ಮೇ 13ರಂದು ತಾಯಿ ಹಾಗೂ ಅಕ್ಕ ಮನೆಯಲ್ಲಿ ಇಲ್ಲದ ವೇಳೆಗೆ ಮಲ್ಲಿಕಾ ಕಾಣೆಯಾಗಿದ್ದು, ಹುಡುಕಾಡಿದಾಗ ಬಾವಿಯಲ್ಲಿ ಮೃತದೇಹ ಪತ್ತೆಯಾಗಿದೆ. ಬಂಟ್ವಾಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss