ಉಡುಪಿ:
ಉಡುಪಿ ಜಿಲ್ಲೆ ಬ್ರಹ್ಮಾವರ ವಲಯದ ಅಧೀನಕ್ಕೆ ಒಳಪಡುವ ಅಮ್ಮುಂಜೆ ಸೇಕ್ರೆಡ್ ಹಾರ್ಟ್ ಅನುದಾನಿತ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯನ್ನು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮುಚ್ಚದಂತೆ ಕ್ರಮ ಕೈಗೊಳ್ಳುವಂತೆ ಹೋರಾಟ ನಡೆಸುತ್ತಿರುವ ತುಳುನಾಡ ರಕ್ಷಣಾ ವೇದಿಕೆಯ ಕಾರ್ಯ ಶ್ಲಾಘನೀಯವಾಗಿದ್ದು, ಇದು ಕನ್ನಡ ಭಾಷೆ ಮತ್ತು ಕನ್ನಡ ಶಿಕ್ಷಣವನ್ನು ಉಳಿಸಿ ಬೆಳೆಸುವ ದಿಕ್ಕಿನಲ್ಲಿ ಕೈಗೊಂಡಿರುವ ಮಹತ್ವದ ಹೋರಾಟವಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಉಡುಪಿ ಜಿಲ್ಲಾಧ್ಯಕ್ಷ ಸುಜಯ್ ಪೂಜಾರಿ ಅವರು ಹೇಳಿದರು.
ಕನ್ನಡ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪುತ್ತಿರುವ ಇಂದಿನ ಪರಿಸ್ಥಿತಿಯಲ್ಲಿ, ಮಕ್ಕಳ ಭವಿಷ್ಯ ಹಾಗೂ ಕನ್ನಡ ಭಾಷೆಯ ಅಸ್ತಿತ್ವಕ್ಕಾಗಿ ಧ್ವನಿ ಎತ್ತಿರುವ ತುಳುನಾಡ ರಕ್ಷಣಾ ವೇದಿಕೆಯ ಹೋರಾಟ ಸಮಾಜಕ್ಕೆ ದಿಕ್ಕು ತೋರಿಸುವಂತಿದೆ. ಶಿಕ್ಷಣವೇ ಭಾಷೆಯ ಜೀವಾಳವಾಗಿದ್ದು, ಪ್ರಾಥಮಿಕ ಹಂತದಲ್ಲೇ ಮಕ್ಕಳಿಗೆ ಮಾತೃಭಾಷೆಯಲ್ಲಿ ಶಿಕ್ಷಣ ದೊರಕಬೇಕೆಂಬ ಉದ್ದೇಶದಿಂದ ಈ ಹೋರಾಟ ನಡೆಸುತ್ತಿರುವುದು ಶ್ಲಾಘನೀಯ ಎಂದು ಅವರು ಅಭಿಪ್ರಾಯಪಟ್ಟರು.
ಕನ್ನಡವನ್ನು ಉಳಿಸಿ ಬೆಳೆಸುವ ಈ ಹೋರಾಟದಲ್ಲಿ ಕನ್ನಡ ಹಾಗೂ ತುಳು ಸಂಘಟನೆಗಳು ಒಂದೇ ಮನೋಭಾವದೊಂದಿಗೆ ಕೈಜೋಡಿಸುವುದು ಅತ್ಯಂತ ಅಗತ್ಯವಾಗಿದ್ದು, ಇಂತಹ ಹೋರಾಟಗಳು ಭಾಷಾ ಸಂಘಟನೆಗಳ ನಡುವೆ ಪ್ರೀತಿ–ಬಾಂಧವ್ಯವನ್ನು ಇನ್ನಷ್ಟು ಗಟ್ಟಿಗೊಳಿಸುವ ಕೆಲಸ ಮಾಡುತ್ತದೆ. ಭಾಷೆ, ಸಂಸ್ಕೃತಿ ಹಾಗೂ ಶಿಕ್ಷಣದ ರಕ್ಷಣೆಗೆ ಸಂಘಟನೆಗಳ ಒಗ್ಗಟ್ಟು ಅವಶ್ಯಕವೆಂದು ಸುಜಯ್ ಪೂಜಾರಿ ಅವರು ಹೇಳಿದರು.
ತುಳುನಾಡ ರಕ್ಷಣಾ ವೇದಿಕೆಯ ಈ ನಿಲುವಿಗೆ ಕರ್ನಾಟಕ ರಕ್ಷಣಾ ವೇದಿಕೆ ಸಂಪೂರ್ಣ ಬೆಂಬಲ ನೀಡುವುದರ ಜೊತೆಗೆ, ಕನ್ನಡ ಶಾಲೆಗಳ ಉಳಿವಿಗಾಗಿ ಮುಂದಿನ ದಿನಗಳಲ್ಲಿ ಸಂಯುಕ್ತ ಹೋರಾಟಕ್ಕೆ ಸಿದ್ಧವಿರುವುದಾಗಿ ಅವರು ತಿಳಿಸಿದರು.
Trending
- ಉಡುಪಿ ಕ್ಷೇತ್ರದಲ್ಲಿ ಜೆಡಿಎಸ್ ಸಂಘಟನೆಗೆ ಹೊಸ ಚೈತನ್ಯ – ಹಲವಾರು ಪ್ರಮುಖರು ಜೆಡಿಎಸ್ ಸೇರ್ಪಡೆ
- ಗ್ರೇಟರ್ ಬೆಂಗಳೂರು ಪಕ್ಷದ ಮುಸ್ಲಿಂ ಅಲ್ಪಸಂಖ್ಯಾತರ ವಿಭಾಗದ ಸಭೆ: ಜಿಬಿಎ ಚುನಾವಣಾ ಪೂರ್ವ ಸಿದ್ಧತೆ ಕುರಿತು ಮಹತ್ವದ ಚರ್ಚೆ
- ಅಂತರರಾಷ್ಟ್ರೀಯ ಬುಕರ್ ಪ್ರಶಸ್ತಿ ಪುರಸ್ಕೃತ ದೀಪಾ ಭಸ್ತಿ ಉಪನ್ಯಾಸ ಜೂನ್ 9ರಂದು
- ಪುತ್ತೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪ್ರಮುಖರ ಸಭೆ ಯಶಸ್ವಿಸಂಘಟನೆ ಬಲವರ್ಧನೆಗೆ ಒತ್ತು – ಕಾರ್ಯಕರ್ತರಿಗೆ ಮುಖಂಡರ ಕರೆ
- ಜೆಡಿಎಸ್ ಮಹಿಳಾ ಘಟಕದ ಉತ್ತರ ಕನ್ನಡ ಜಿಲ್ಲಾ ಅಧ್ಯಕ್ಷೆಯಾಗಿ ಮೋಹಿನಿ ನಾಯ್ಕ್ ನೇಮಕ
- ಬ್ರಹ್ಮಾವರದಲ್ಲಿ ಯುವತಿ ಅನುಮಾನಾಸ್ಪದ ಸಾವು: ಅಪಾರ್ಟ್ಮೆಂಟ್ ಕೊಠಡಿಯಲ್ಲಿ ಮೃತದೇಹ ಪತ್ತೆ, ಮೂರ್ಛೆ ರೋಗ ಕಾರಣವೇ?
- ಮೆಲ್ಕಾರ್ ಫ್ಲೈಓವರ್ ಬಳಿ ಲಕ್ಷಾಂತರ ಮೌಲ್ಯದ ಎಂಡಿಎಂಎ ವಶ: ಮೂವರು ಆರೋಪಿಗಳ ಬಂಧನ
- ಅಸ್ಸಾಂಗೆ ಹೋಗಿ ಯಾಕೆ ಟ್ರಬಲ್ ಶೂಟರ್ ಆಗಲಿಲ್ಲ? – ಡಿ.ಕೆ. ಶಿವಕುಮಾರ್ಗೆ ಕಾಂಗ್ರೇಸ್ ಶಾಸಕ ಕೆ.ಎನ್. ರಾಜಣ್ಣ ತಿರುಗೇಟು

