ದೆಹಲಿ: ಉತ್ತರ ಕರ್ನಾಟಕದಲ್ಲಿ ಕಂಡುಬರುವ ‘ಗಾಣಿಗೇರ್’ ಎಂಬುದು ‘ಗಾಣಿಗ’ ಪದದ ರೂಪಾಂತರವಾಗಿದೆ. ಹಿಂದೂ ಗಾಣಿಗ ಮತ್ತು ಲಿಂಗಾಯತ ಗಾಣಿಗ ಎರಡು ವಿಭಿನ್ನ ಜಾತಿಗಳಲ್ಲ, ಎರಡೂ ಒಂದೇ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ.
ಒಬಿಸಿ ಮೀಸಲಾತಿಗಾಗಿ ಸಂಗಪ್ಪ ಹಸನಪ್ಪ ಮಾಳೆಣ್ಣನವರ್ ಎಂಬುವರಿಗೆ ನೀಡಿದ್ದ ‘ಗಾಣಿಗ’ ಜಾತಿ ಪ್ರಮಾಣ ಪತ್ರದ ವಿರುದ್ಧ ಏಕ ಪೀಠದ ತೀರ್ಪನ್ನು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠದ ಆದೇಶದ ವಿರುದ್ಧ ಎಂವಿ ಚಂದ್ರಕಾಂತ್ ಸಲ್ಲಿಸಿದ್ದ ಮನವಿಯನ್ನು ನ್ಯಾಯಮೂರ್ತಿಗಳಾದ ಇಂದಿರಾ ಬ್ಯಾನರ್ಜಿ ಮತ್ತು ಜೆ ಕೆ ಮಹೇಶ್ವರಿ ಅವರ ಪೀಠ ವಜಾಗೊಳಿಸಿದೆ.
ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್ ಎ ಮತ್ತು ಬಿ ಹುದ್ದೆಗಳ ನೇಮಕಾತಿಗೆ ಆಯ್ಕೆಯಾದ 1999ರ ಬ್ಯಾಚ್ ಅಭ್ಯರ್ಥಿಗಳಲ್ಲಿ ಸಂಗಪ್ಪ ಕೂಡ ಒಬ್ಬರು. ಉಪ ಪೊಲೀಸ್ ವರಿಷ್ಠಾಧಿಕಾರಿ ಹುದ್ದೆಗೆ ಚಂದ್ರಕಾಂತ್ ಹಾಗೂ ಸಹಾಯಕ ಆಯುಕ್ತ (ಜೂನಿಯರ್ ಗ್ರೇಡ್ ಸ್ಕೇಲ್) ಹುದ್ದೆಗೆ ಸಂಗಪ್ಪ ಆಯ್ಕೆಯಾಗಿದ್ದಾರೆ. 2005ರಲ್ಲಿ ಸಂಗಪ್ಪ ಅವರ ತಂದೆ ‘ಲಿಂಗಾಯತ’ ಜಾತಿಗೆ ಸೇರಿದವರು ಎಂದು ತನಗೆ ಗೊತ್ತಾಯಿತು. ಆದರೆ, ಸಂಗಪ್ಪ ಅವರು ‘ಗಾಣಿಗ’ ಜಾತಿಗೆ ಸೇರಿದವರು ಎಂದು ಹೇಳಿಕೊಂಡು ಮೀಸಲಾತಿಯ ಲಾಭವನ್ನು ಪಡೆದಿದ್ದರು ಎಂದು ಚಂದ್ರಕಾಂತ್ ವಾದಿಸಿದರು.
ಈ ವಿಷಯ ಹೈಕೋರ್ಟ್ನ ಏಕ ಸದಸ್ಯ ಪೀಠದ ಮೆಟ್ಟಿಲೇರಿತ್ತು. ಅರ್ಜಿ ವಿಚಾರಣೆ ನಡೆಸಿದ ಪೀಠವು, ಸಂಗಪ್ಪ ಅವರ ತಂದೆ ಹಿಂದೂ ಲಿಂಗಾಯತ ಜಾತಿಗೆ ಸೇರಿದವರು ಎಂದು ಶಾಲೆಯ ದಾಖಲೆಗಳು ಬಹಿರಂಗಪಡಿಸುತ್ತವೆ. ಆದ್ರೆ, ಅವರ ಮಗ ಗಾಣಿಗ ಸಮುದಾಯ ಎಂದು ಹೇಳಿಕೊಂಡಿರುವುದು ಸರಿಯಲ್ಲ ಎಂದಿತ್ತು. ಆದ್ರೆ, ವಿಭಾಗೀಯ ಪೀಠವು ಏಕ ಪೀಠದ ಆದೇಶವನ್ನು ತಳ್ಳಿಹಾಕಿತು.
ವಿಭಾಗೀಯ ಪೀಠದ ತೀರ್ಪನ್ನು ತರ್ಕಬದ್ಧವಾಗಿ ಕಂಡುಕೊಂಡ ಸುಪ್ರೀಂ ಕೋರ್ಟ್, ವಿಭಾಗೀಯ ಪೀಠವು ಪ್ರಕರಣದ ಸತ್ಯಗಳನ್ನು ಸರಿಯಾಗಿ ವಿಶ್ಲೇಷಿಸಿದೆ ಮತ್ತು 1953 ರಲ್ಲಿ ಸಂಗಪ್ಪ ಅವರ ತಂದೆ ಶಾಲೆಗೆ ಸೇರಿದಾಗ ಹಿಂದುಳಿದ ವರ್ಗಗಳಿಗೆ ಮೀಸಲಾತಿಯನ್ನು ಪರಿಚಯಿಸಲಾಗಿಲ್ಲ ಎಂಬ ಅಂಶವನ್ನು ಕಂಡುಕೊಂಡಿದೆ. ಅವರು ಶಾಲೆಗೆ ಸೇರುವ ಹೊತ್ತಿಗೆ ಹಿಂದುಳಿದ ವರ್ಗಗಳಿಗೆ ಮೀಸಲಾತಿ ನೀತಿ ಜಾರಿಗೆ ಬಂದಿತ್ತು. ಅವರ ತಂದೆಯ ಶಾಲಾ ದಾಖಲೆಗಳಲ್ಲಿ ‘ಲಿಂಗಾಯತ’ ಹಾಗೂ ‘ಹಿಂದೂ ಗಾಣಿಗ’ ಎಂದು ನಮೂದಿಸಲಾಗಿದೆ ಎಂದು ನ್ಯಾಯಪೀಠ ಗಮನಿಸಿದೆ.
‘ಲಿಂಗಾಯತ ಹಿಂದೂ ಉತ್ತರಾಧಿಕಾರ ಕಾಯಿದೆ 1956, ಹಿಂದೂ ವಿವಾಹ ಕಾಯಿದೆ 1955, ಹಿಂದೂ ಅಲ್ಪಸಂಖ್ಯಾತ ಮತ್ತು ಗಾರ್ಡಿಯನ್ಶಿಪ್ ಕಾಯಿದೆ 1956 ಮತ್ತು ಹಿಂದೂ ದತ್ತು ಮತ್ತು ನಿರ್ವಹಣೆ ಕಾಯಿದೆ 1956 ಪ್ರಕಾರ, ಲಿಂಗಾಯಿತರೂ ಸಹ ಹಿಂದೂಗಳು ಎಂದು ಪರಿಗಣಿಸಲ್ಪಡುತ್ತಾರೆ. ಸಂಗಪ್ಪ ಅವರ ಜಾತಿಯನ್ನು ‘ಹಿಂದೂ-ಲಿಂಗಾಯತ’ ಎಂದು ಅವರ ತಂದೆ ಶಾಲೆಯ ದಾಖಲಾತಿಗಳಲ್ಲಿ ಉಲ್ಲೇಖಿಸಿರುವುದನ್ನು ಕೋರ್ಟ್ ಗಮನಿಸಿದೆ.
ಪ್ರಕರಣದ ವಿಚಾರಣೆಯಲ್ಲಿ, ಸಂಗಪ್ಪ ಅವರು 1909 ರ ನೋಂದಾಯಿತ ದಾಖಲೆಯನ್ನು ನೀಡಿದರು. ಅಲ್ಲಿ ಅವರ ದೊಡ್ಡಪ್ಪನ ಜಾತಿಯನ್ನು ‘ಗಾಣಿಗೇರ್’ ಎಂದು ತೋರಿಸಲಾಗಿದೆ. ಆದ್ದರಿಂದ, ಸಂಗಪ್ಪನ ಜಾತಿಯನ್ನು ‘ಗಾಣಿಗ’ ಎಂದು ಸಾಬೀತುಪಡಿಸಿದ ದಾಖಲೆಯು ಪ್ರಸ್ತುತವಾಗಿದೆ. ಸಂಗಪ್ಪ ಅವರು ತಮ್ಮ ಸಂಬಂಧಿಕರಿಗೆ ನೀಡಲಾದ ಜಾತಿ ಪ್ರಮಾಣಪತ್ರಗಳನ್ನು ಅವಲಂಬಿಸಿದ್ದು, ಅವರ ಜಾತಿಯನ್ನು ‘ಗಾಣಿಗ’ ಎಂದು ತೋರಿಸಿದ್ದಾರೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.