ಸುರತ್ಕಲ್: ಯುವಕನೋರ್ವನಿಗೆ ಚೂರಿಯಿಂದ ಇರಿದ ಘಟನೆ ಸೂರತ್ಕಲ್ ನಲ್ಲಿ ನಡೆದಿದೆ.
ಸುರತ್ಕಲ್ ನಲ್ಲಿ ಬಟ್ಟೆ ಅಂಗಡಿ ಎದುರುಗಡೆ ಯುವಕನಿಗೆ ಚೂರಿಯಿಂದ ಇರಿಯಲಾಗಿದೆ.
ಸುರತ್ಕಲ್ ಮಂಗಳಪೇಟೆ ನಿವಾಸಿ ಫಾಝಿಲ್ ಹಲ್ಲೆಗೊಳಗಾದವರು. ತಕ್ಷಣ ಅವರನ್ನು ಸ್ಥಳೀಯ ಪದ್ಮಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಫಾಝಿಲ್ ಅವರು ಅಂಗಡಿಯ ಬಳಿ ನಿಂತುಕೊಂಡಿದ್ದಾಗ ಹುಂಡೈ ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡ ಮಾರಕಾಸ್ತ್ರಗಳಿಂದ ಕಡಿದು ಪರಾರಿಯಾಗಿದೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಥಳಕ್ಕೆ ಸುರತ್ಕಲ್ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.