Friday, December 1, 2023

ವಿಟ್ಲ: ಮಹಿಳೆಗೆ ಚಾಕು ತೋರಿಸಿ ಚಿನ್ನ ಕಳ್ಳತನಕ್ಕೆ ಯತ್ನಿಸಿ ಪರಾರಿ

ವಿಟ್ಲ: ಕುಳ ಗ್ರಾಮದ ನೀರಪಳಿಕೆಯಲ್ಲಿ ಮಹಿಳೆಯೊಬ್ಬರಿಗೆ ಚಾಕು ತೋರಿಸಿ ಬೆದರಿಸಿ ಚಿನ್ನ ಲಪಟಾಯಿಸಲು ಯತ್ನಿಸಿದ ಘಟನೆ ನಡೆದಿದೆ. ನೀರಪಳಿಕೆ ಮಹಮ್ಮದ್ ಕುಂಞ ಅವರ ಮನೆಯವರು ಚಿಕಿತ್ಸೆಗಾಗಿ ಆಸ್ಪತ್ರೆಗೆ...
More

    Latest Posts

    ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಅರಣ್ಯ ಇಲಾಖೆ ನೌಕರ

    ಕುಂದಾಪುರ: ಅರಣ್ಯ ಇಲಾಖೆ ವಶದಲ್ಲಿದ್ದ ವಾಹನ ಬಿಡುಗಡೆಗೆ ಲಂಚ ಸ್ವೀಕರಿಸುತ್ತಿದ್ದ  ಕುಂದಾಪುರ ಅರಣ್ಯ ಇಲಾಖೆಯ ನೌಕರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಯ ಕ್ಷೇಮಾಭಿವೃದ್ಧಿ ನೌಕರ...

    ಡಿ.1 ರಂದು “ರಾಪಟ” ತುಳು ಸಿನೆಮಾ ಬಿಡುಗಡೆ

    ಬೊಳ್ಳಿ ಮೂವೀಸ್ ಹಾಗೂ ಅವಿಕಾ ಪ್ರೊಡಕ್ಷನ್ಸ್ ನಿರ್ಮಾಣದ ತೆಲಿಕೆದ ಬೊಳ್ಳಿ ಡಾ. ದೇವದಾಸ್ ಕಾಪಿಕಾಡ್ ಕಥೆ, ಚಿತ್ರಕಥೆ,ಸಂಭಾಷಣೆ, ಸಾಹಿತ್ಯ ಬರೆದು, ಅರ್ಜುನ್ ಕಾಪಿಕಾಡ್ ನಿರ್ದೇಶನದ ಚೊಚ್ಚಲ ಸಿನಿಮಾ ರಾಪಟ ಡಿ.1...

    ಲಂಚ ಸ್ವೀಕರಿಸುತ್ತಿದ್ದ ಅರಣ್ಯ ಇಲಾಖೆಯ ಗುಮಾಸ್ತ ಲೋಕಾಯುಕ್ತ ಬಲೆಗೆ

    ಕುಂದಾಪುರ : ಲಂಚ ಸ್ವೀಕರಿಸುತ್ತಿದ್ದ ಅರಣ್ಯ ಇಲಾಖೆಯ ಗುಮಾಸ್ತರೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕುಂದಾಪುರದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ಗುಮಾಸ್ತ ಬಿ.ಮಂಜುನಾಥ್ ಪೂಜಾರಿ ಲೋಕಾಯಕ್ತ...

    Bank Holidays : ಡಿಸೆಂಬರ್ ನಲ್ಲಿ 18 ದಿನಗಳು ಬ್ಯಾಂಕ್ ಗಳಿಗೆ ರಜೆ : ಇಲ್ಲಿದೆ ಫುಲ್ ಲಿಸ್ಟ್

    ತಿಂಗಳ ಆರಂಭದ ಮೊದಲು, ಬ್ಯಾಂಕುಗಳ ರಜಾದಿನಗಳ ಪಟ್ಟಿ ಹೊರಬರುತ್ತದೆ. ಈ ವರ್ಷದ ಕೊನೆಯ ತಿಂಗಳು ಡಿಸೆಂಬರ್ ನಲ್ಲಿ ಪ್ರಾರಂಭವಾಗಲಿದೆ ಮತ್ತು ಅದಕ್ಕೂ ಮೊದಲು ಬ್ಯಾಂಕ್ ರಜಾದಿನಗಳ ಪಟ್ಟಿ ಈಗಾಗಲೇ ಬಂದಿದೆ.

    ಬಂಟ್ವಾಳ: ವರದಕ್ಷಿಣೆ ಕಿರುಕುಳ ತಾಳಲಾರದೆ ನವವಿವಾಹಿತೆ ಆತ್ಮಹತ್ಯೆ

    ಬಂಟ್ವಾಳ: ಗಂಡನ ಮನೆಯಲ್ಲಿನ ವರದಕ್ಷಿಣೆ ಕಿರುಕುಳ ತಾಳಲಾರದೆ ಮಾನಸಿಕವಾಗಿ ನೊಂದಿದ್ದ ನವ ವಿವಾಹಿತೆಯೋರ್ವಳು ತಾಯಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ಸಜೀಪ ಮೂಡ ಗ್ರಾಮದ ಸುಭಾಷ್ ನಗರದ ನಿವಾಸಿ ನೌಸೀನ್ (22) ಆತ್ಮಹತ್ಯೆ ಮಾಡಿಕೊಂಡ ಮಹಿಳೆ.ನೌಸೀನ್ ಅವರು ಉಳ್ಳಾಲದ ಆಜ್ಮಾನ್ ಜೊತೆ ಮೂರು ತಿಂಗಳ ಹಿಂದೆ ಪ್ರೇಮ ವಿವಾಹ ವಾಗಿದ್ದರು.

    ಪ್ರೇಮವಿವಾಹ ಆದರೂ ಕೂಡ ವಿವಾಹ ಸಂದರ್ಭದಲ್ಲಿ 18 ಪವನ್ ಚಿನ್ನವನ್ನು ಉಡುಗೂರೆಯಾಗಿ ನೀಡಲಾಗಿತ್ತು. ಆದರೆ ಹುಡುಗಿ ಕಡೆಯವರು ನೀಡಿದ ವರದಕ್ಷಿಣೆ ಕಡಿಮೆಯಾಗಿದೆ, ಪ್ರೀತಿಸಿ ಮದುವೆಯಾದರಿಂದ ಒಳ್ಳೆ ಹುಡುಗಿ ಸಿಗಲಿಲ್ಲ, ಇಲ್ಲದಿದ್ದರೆ ಒಳ್ಳೆಯ ಹುಡುಗಿ ಸಿಗಬಹುದಿತ್ತು ಎಂದು ಅತ್ತೆ ಝೂಬೈದಾ, ಮಗಳು ಅಜ್ಮೀಯಾ ಮತ್ತು ಗಂಡ ಸೇರಿಕೊಂಡು ಹೀಯಾಳಿಸಿದ್ದಲ್ಲದೆ, ಮಾನಸಿಕ ಕಿರುಕುಳ ಕೊಡುತ್ತಿದ್ದರು. ಮಾನಸಿಕವಾಗಿ ನೊಂದಿದ್ದ ತಂಗಿ ನೌಸೀನ ಆ.25 ರಂದು ಮನೆಯಲ್ಲಿ ಯಾರು ಇಲ್ಲದ ವೇಳೆ ಕೋಣೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಸಹೋದರ ನಾಸೀರ್‌ ಆರೋಪಿಸಿದ್ದಾರೆ. ಈ ಸಾವಿನ ಬಗ್ಗೆ ಸೂಕ್ತವಾದ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ನಾಸೀರ್ ನಗರ ಪೋಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.ಸಜೀಪ ಮೂಡ ನಿವಾಸಿ ಕೆ.ಎಮ್ ಬಾವ ಅವರ ಮಗಳು ನೌಸೀನ್ ಅವರು ಉಳ್ಳಾಲ ಮೂಲದ ಅಜ್ಮಾನ ಎಂಬವರಿಗೆ ಇನ್ಸ್ಟಾ ಗ್ರಾಂ ಮೂಲಕ ಪರಿಚಯವಾಗಿ ಪರಸ್ಪರ ಪ್ರೀತಿ ಉಂಟಾಗಿ ಮನೆಯವರ ಒಪ್ಪಿಗೆ ಮುಖಾಂತರ ಅ.14 ರಂದು ಮದುವೆಯಾಗಿದ್ದರು. ಆದರೆ ಅಜ್ಮಾನ ಮದುವೆಯಾದ ಕೆಲವೇ ದಿನಗಳಲ್ಲಿ ನೌಸೀನ್ ಳ ಒಡವೆಗಳನ್ನು ಮಾರಿದ್ದಾನೆ. ಜೊತೆಗೆ ಇನ್ನಷ್ಟು ಒಡೆವೆಗಳನ್ನು ತರುವಂತೆ ಪೀಡಿಸುತ್ತಿದ್ದ. ಇದು ಅಲ್ಲದೆ,ಅತ್ತೆ ಮತ್ತು ನಾದಿನಿಯವರು ಲವ್ ಮ್ಯಾರೇಜ್ ಆಗಿರುವ ಕಾರಣಕ್ಕಾಗಿ ಮಾನಸಿಕವಾಗಿ ಹಿಂಸೆಯನ್ನು ನೀಡುತ್ತಿದ್ದರು ಎಂದು ಮನೆಯವರಲ್ಲಿ ತಿಳಿಸಿದ್ದಳು. ಮನೆಯವರ ಕಿರುಕುಳ ತಾಳಲಾರದೆ ನೌಸೀನ್ ಅ.24 ರಂದು ತಾಯಿ ಮನೆಗೆ ಬಂದಿದ್ದಳು. ಮರುದಿನ ಮನೆಯವರು ಕೆಲಸಕ್ಕೆ ಹೋದ ಸಂದರ್ಭದಲ್ಲಿ ಇವಳು ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆದರೆ ಇವಳ ಸಾವಿಗೆ ಗಂಡ ಮತ್ತು ಅತ್ತೆ,ನಾದಿನಿಯವರೇ ಕಾರಣವಾಗಿದೆ. ಹಾಗಾಗಿ ಸೂಕ್ತವಾದ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು. ನೌಸೀನ್ ಳ ಸಾವಿಗೆ ನ್ಯಾಯ ಒದಗಿಸಬೇಕು ಎಂದು ನೌಸೀನ್ ಳ ಸಂಬಂಧಿ ಸಿದ್ದೀಕ್ ಒತ್ತಾಯ ಮಾಡಿದ್ದಾರೆ.

    Latest Posts

    ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಅರಣ್ಯ ಇಲಾಖೆ ನೌಕರ

    ಕುಂದಾಪುರ: ಅರಣ್ಯ ಇಲಾಖೆ ವಶದಲ್ಲಿದ್ದ ವಾಹನ ಬಿಡುಗಡೆಗೆ ಲಂಚ ಸ್ವೀಕರಿಸುತ್ತಿದ್ದ  ಕುಂದಾಪುರ ಅರಣ್ಯ ಇಲಾಖೆಯ ನೌಕರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಯ ಕ್ಷೇಮಾಭಿವೃದ್ಧಿ ನೌಕರ...

    ಡಿ.1 ರಂದು “ರಾಪಟ” ತುಳು ಸಿನೆಮಾ ಬಿಡುಗಡೆ

    ಬೊಳ್ಳಿ ಮೂವೀಸ್ ಹಾಗೂ ಅವಿಕಾ ಪ್ರೊಡಕ್ಷನ್ಸ್ ನಿರ್ಮಾಣದ ತೆಲಿಕೆದ ಬೊಳ್ಳಿ ಡಾ. ದೇವದಾಸ್ ಕಾಪಿಕಾಡ್ ಕಥೆ, ಚಿತ್ರಕಥೆ,ಸಂಭಾಷಣೆ, ಸಾಹಿತ್ಯ ಬರೆದು, ಅರ್ಜುನ್ ಕಾಪಿಕಾಡ್ ನಿರ್ದೇಶನದ ಚೊಚ್ಚಲ ಸಿನಿಮಾ ರಾಪಟ ಡಿ.1...

    ಲಂಚ ಸ್ವೀಕರಿಸುತ್ತಿದ್ದ ಅರಣ್ಯ ಇಲಾಖೆಯ ಗುಮಾಸ್ತ ಲೋಕಾಯುಕ್ತ ಬಲೆಗೆ

    ಕುಂದಾಪುರ : ಲಂಚ ಸ್ವೀಕರಿಸುತ್ತಿದ್ದ ಅರಣ್ಯ ಇಲಾಖೆಯ ಗುಮಾಸ್ತರೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕುಂದಾಪುರದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ಗುಮಾಸ್ತ ಬಿ.ಮಂಜುನಾಥ್ ಪೂಜಾರಿ ಲೋಕಾಯಕ್ತ...

    Bank Holidays : ಡಿಸೆಂಬರ್ ನಲ್ಲಿ 18 ದಿನಗಳು ಬ್ಯಾಂಕ್ ಗಳಿಗೆ ರಜೆ : ಇಲ್ಲಿದೆ ಫುಲ್ ಲಿಸ್ಟ್

    ತಿಂಗಳ ಆರಂಭದ ಮೊದಲು, ಬ್ಯಾಂಕುಗಳ ರಜಾದಿನಗಳ ಪಟ್ಟಿ ಹೊರಬರುತ್ತದೆ. ಈ ವರ್ಷದ ಕೊನೆಯ ತಿಂಗಳು ಡಿಸೆಂಬರ್ ನಲ್ಲಿ ಪ್ರಾರಂಭವಾಗಲಿದೆ ಮತ್ತು ಅದಕ್ಕೂ ಮೊದಲು ಬ್ಯಾಂಕ್ ರಜಾದಿನಗಳ ಪಟ್ಟಿ ಈಗಾಗಲೇ ಬಂದಿದೆ.

    Don't Miss

    ಮಂಗಳೂರು : ಮರಣ ಪ್ರಮಾಣ ದೃಢೀಕರಣಕ್ಕೆ 13 ಸಾವಿರ ಲಂಚ ಪಡೆಯುವಾಗ ಸಿಕ್ಕಿಬಿದ್ದ ವಿಎ

    ಮಂಗಳೂರು : ಅಜ್ಜನ ಮರಣ ಪ್ರಮಾಣ ಪತ್ರದ ದೃಢೀಕರಣಕ್ಕೆ 13 ಸಾವಿರ ಲಂಚ ಕೇಳಿದ ಚೇಳ್ಯಾರು ಗ್ರಾಮದ ವಿಎ ಶ್ರೀ ವಿಜಿತ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರ ಕೈಗೆ...

    ಮಂಗಳೂರು: ಎಮ್ಮೆಕೆರೆ ಕ್ರೀಡಾಂಗಣದ ಅಭಿವೃದ್ಧಿಗೆ ಶಂಕು ಸ್ಥಾಪನೆ

    ಮಂಗಳೂರು: ಎಮ್ಮೆಕೆರೆ ಕ್ರೀಡಾಂಗಣದ ಅಭಿವೃದ್ಧಿಗೆ ಶಂಕು ಸ್ಥಾಪನೆ ಬೆಳಗ್ಗೆ 11 ಗಂಟೆಗೆ ಎಮ್ಮೆಕೆರೆ ಮೈದಾನದಲ್ಲಿ ಜನ ಪ್ರತಿನಿಧಿಗಳ ಉಪಸ್ಥಿತಿಯೊಂದಿಗೆ ನಡೆದಿದೆ.

    ಬೆಳ್ತಂಗಡಿ: ಬೈಕ್ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ – ಸವಾರ ಸಾವು

    ಬೆಳ್ತಂಗಡಿ: ಬೈಕ್ ನ ಸೈಡ್ ಸ್ಟ್ಯಾಂಡ್ ತೆಗೆಯದೆ ಬೈಕ್ ಚಲಾಯಿಸಿದ ಪರಿಣಾಮ ಬೈಕ್ ನಿಯಂತ್ರಣ ಡಿವೈಡರ್ ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸಾವನಪ್ಪಿದ ಘಟನೆ ಬೆಳ್ತಂಗಡಿಯ ಉಜಿರೆಯಲ್ಲಿ ನಡೆದಿದ್ದು,...

    ಯಕ್ಷಾಂಗಣ ಸಪ್ತಾಹದಲ್ಲಿ ಬೆಟ್ಟಂಪಾಡಿ ಬಾಳಪ್ಪ ಶೆಟ್ಟಿ ಸಂಸ್ಮರಣೆ

    ಮಂಗಳೂರು: 'ಸಾಧನ ಶೀಲ ಕಲಾವಿದರ ಹೆಸರಿನೊಂದಿಗೆ ಅವರ ಮನೆತನದ ಅಥವಾ ಊರಿನ ಹೆಸರು ಸೇರಿಕೊಂಡಿರುತ್ತದೆ. ಇದು ಅಂಥವರ ಸಮಗ್ರ ಕುಟುಂಬಕ್ಕೆ ಸಲ್ಲುವ ಗೌರವ. ಬೆಟ್ಟಂಪಾಡಿ ಬಾಳಪ್ಪ ಶೆಟ್ಟರು ಈ ನಿಟ್ಟಿನಲ್ಲಿ...

    ಹಿರಿಯ ಕಲಾವಿದ ರಂಗ ನಿರ್ದೇಶಕ ತಮ್ಮಲಕ್ಷ್ಮಣ ಅವರಿಗೆ ತುಳುನಾಟಕ ಬ್ರಹ್ಮ ರಾಮ ಕಿರೋಡಿಯನ್ ಸಂಸ್ಮರಣೆ

    ಮಂಗಳೂರು ವಿಶ್ವ ವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾ ಭವನದಲ್ಲಿ ದಿನಾಂಕ 25-11-2023ರ ಶನಿವಾರ ಸಂಜೆ 5 ಗಂಟೆ ಸಮಯದಲ್ಲಿ ಜರಗುವ ಯಕ್ಷಾಂಗಣ ಮಂಗಳೂರು’ ಇವರ ಸರಣಿ ಸಂಸ್ಕರಣ ಸಮಾರಂಭದಲ್ಲಿ ತುಳು...