Friday, April 26, 2024
spot_img
More

    Latest Posts

    ಬೈಂದೂರು: ಚಾಕೊಲೇಟ್ ನುಂಗಿ ಉಸಿರುಗಟ್ಟಿ ಮೃತಪಟ್ಟ ಬಾಲಕಿ!

    ಬೈಂದೂರು: ಬಾಲಕಿಯೊಬ್ಬಳು ಚಾಕೊಲೇಟ್ ನುಂಗಿ ಉಸಿರುಗಟ್ಟಿ ಮೃತಪಟ್ಟ ದಾರುಣ ಘಟನೆ ಇಂದು ಸಂಭವಿಸಿದೆ.ಬೈಂದೂರು ತಾಲೂಕಿನ ಬವಳಾಡಿ ಮೂಲದ ಸಮನ್ವಿ (6) ಮೃತಪಟ್ಟ ಬಾಲಕಿಯಾಗಿದ್ದಾಳೆ.

    ಈಕೆ ಉಪ್ಪುಂದ ಸ್ಥಳೀಯ ಆಂಗ್ಲ ಮಾಧ್ಯಮ ಶಾಲೆಯೊಂದರಲ್ಲಿ ವಿದ್ಯಾರ್ಥಿನಿಯಾಗಿದ್ದಾಳೆ.ಈ ಬಾಲಕಿ ಶಾಲೆಯ ಬಸ್ ಗೆ ಕಾಯುತ್ತಿರುವ ಸಮಯದಲ್ಲಿ ಚಾಕೊಲೇಟ್ ತಿನ್ನುತ್ತಿರುವಾಗ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.ಸದ್ಯ ಬಾಲಕಿಯ ಮೃತದೇಹವನ್ನು ಮಣಿಪಾಲದ ಕೆ.ಎಂ.ಸಿ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು,ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss